![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ತತ್ವಪದಕಾರಗೆ ಎಸ್ಪಿಬಿ ನೆರವು
ಎನ್ಜಿಒ ಮೂಲಕ ಗೃಹೋಪಯೋಗಿ ಸಾಮಗ್ರಿ ರವಾನೆ
Team Udayavani, Jun 4, 2020, 1:23 PM IST
![04-June-18](https://www.udayavani.com/wp-content/uploads/2020/06/04-June-18-620x412.gif)
ರಾಯಚೂರು: ತತ್ವಪದ ಗಾಯಕ ದಾದಾಪೀರ್ ಮಂಜರ್ಲಾ ಅವರಿಗೆ ಖ್ಯಾತ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಕಳುಹಿಸಿದ ವಸ್ತುಗಳು
ರಾಯಚೂರು: ಅನಾರೋಗ್ಯಕ್ಕೀಡಾಗಿ ಚಿಕಿತ್ಸೆಗೂ ಹಣವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತತ್ವಪದ ಗಾಯಕ ದಾದಾಪೀರ್ ಮಂಜರ್ಲಾ ಅವರಿಗೆ ಖ್ಯಾತ ಗಾಯಕ ಎಸ್.ಬಿ. ಬಾಲಸುಬ್ರಹ್ಮಣ್ಯಂ ಅಗತ್ಯ ವಸ್ತುಗಳನ್ನು ಕಳುಹಿಸುವ ಮೂಲಕ ನೆರವಾಗಿದ್ದಾರೆ.
ಎಸ್ಪಿಬಿ ಅವರು ನಡೆಸುತ್ತಿರುವ ಎನ್ಜಿಒ ಮೂಲಕ ದಿನಬಳಕೆಗೆ ಬೇಕಾದ ಪಾತ್ರೆಗಳನ್ನು ಚೈನ್ನೈನಿಂದ ದಾದಾಪೀರ್ ವಿಳಾಸಕ್ಕೆ ಕಳುಹಿಸಿದ್ದಾರೆ. ಆ ಮೂಲಕ ಸಂಕಷ್ಟದಲ್ಲಿರುವ ಗಾಯಕನ ಕುಟುಂಬಕ್ಕೆ ಅಲ್ಪ ನೆರವಿನ ಹಸ್ತ ಚಾಚಿದ್ದಾರೆ. ಅನಾರೋಗ್ಯಕ್ಕೀಡಾಗಿದ್ದ ದಾದಾಪೀರ್ ಮಂಜರ್ಲಾ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆಗೆ ಹಣವಿಲ್ಲದ ಕಾರಣ ವೀಡಿಯೋ ಮಾಡಿ ನೆರವು ನೀಡುವಂತೆ ಸಂದೇಶ ಹರಿಬಿಟ್ಟಿದ್ದರು.
ನಗರ ಶಾಸಕ ಡಾ| ಶಿವರಾಜ ಪಾಟೀಲ ನೀಡಿದ ನೆರವಿನಿಂದ ಒಂದು ಹಂತದ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಇನ್ನೂ ಚಿಕಿತ್ಸೆ ಮುಂದುವರಿದಿದೆ. ಈ ವೀಡಿಯೋ ನೋಡಿದ ಎಸ್ಪಿಬಿ ತಮ್ಮ ಎನ್ ಜಿಒ ಮೂಲಕ ಏನಾದರೂ ನೆರವು ನೀಡಬೇಕು ಎಂಬ ಕಾರಣಕ್ಕೆ ಗೃಹೋಪಯೋಗಿ ಸಾಮಗ್ರಿಗಳನ್ನು ಕಳುಹಿಸಿದ್ದಾರೆ. ಈ ಬಗ್ಗೆ ಅತ್ಯಾನಂದ ವ್ಯಕ್ತಿಪಡಿಸುವ ಮಂಜರ್ಲಾ ಅವರು, ಈ ವಸ್ತುಗಳಿಗೆ ಬೆಲೆ ಕಟ್ಟಲಾಗುವುದಿಲ್ಲ. ನನ್ನ ಬಗ್ಗೆ ಅವರು ಇಟ್ಟಿರುವ ಪ್ರೀತಿಗೆ ನಾನು ಚಿರಋಣಿ. 15 ವರ್ಷಗಳ ಹಿಂದೆ ಎಸ್ಪಿಬಿ ಅವರ ಮಗನ ಮದುವೆಯಲ್ಲಿ ನಾನು ಸೇರಿದಂತೆ ಅನೇಕ ಗಾಯಕರು ಓಡಾಡಿದ್ದೆವು. ಕುಟುಂಬ ಸಮೇತರಾಗಿ ಪಾಲ್ಗೊಂಡಿದ್ದೆವು. ಅದನ್ನು ಮನದಲ್ಲಿಟ್ಟುಕೊಂಡು ಅವರು ಈ ನೆರವು ನೀಡಿರುವುದು ಖುಷಿ ಕೊಟ್ಟಿದೆ ಎಂದು ಹೇಳಿದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Manvi; A crocodile was spotted on the banks of the Tungabhadra river](https://www.udayavani.com/wp-content/uploads/2024/07/mosale-1-150x83.jpg)
Manvi; ತುಂಗಭದ್ರ ನದಿ ತೀರದಲ್ಲಿ ಕಾಣಿಸಿಕೊಂಡ ಮೊಸಳೆ
![Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು](https://www.udayavani.com/wp-content/uploads/2024/07/food-150x90.jpg)
Raichuru: ವಸತಿ ಶಾಲೆಯ ಊಟದಲ್ಲಿ ಹಲ್ಲಿ… 50 ಮಕ್ಕಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು
![Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು](https://www.udayavani.com/wp-content/uploads/2024/07/maski-150x78.jpg)
Maski: ವಿದ್ಯುತ್ ಕಣ್ಣಾಮುಚ್ಚಾಲೆ, ಸರಕಾರಿ ಕೆಲಸ ಕಾರ್ಯಗಳಿಗೆ ಅಡ್ಡಿ, ಸಾರ್ವಜನಿಕರು ಹೈರಾಣು
![Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ](https://www.udayavani.com/wp-content/uploads/2024/07/badarli-150x83.jpg)
Sindhanur; ಎಂಎಲ್ಸಿ ಬಾದರ್ಲಿ ಸ್ವಾಗತ ಕಮಾನು ಕುಸಿದು ಮೂವರಿಗೆ ಗಾಯ
![1-wffsdf](https://www.udayavani.com/wp-content/uploads/2024/07/1-wffsdf-150x103.jpg)
Maski: ಭೂವಿವಾದದಿಂದ ಸಮುದಾಯ ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿಗೆ ಗ್ರಹಣ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.