ಬೇಸಿಗೆಯಲ್ಲಿ ಭುಗಿಲೇಳದ ನೀರಿನ ಸಮಸ್ಯೆ

ನೀರು ತುಂಬುವುದೇ ಕಾಯಕ ಮಾಡಿಕೊಂಡ ಹಳ್ಳಿ ಜನ ಮೂರು ಹಳ್ಳಿಗಳಿಗೆ ಟ್ಯಾಂಕರ್‌ ನೀರು

Team Udayavani, May 30, 2020, 5:17 PM IST

30-May-22

ಸಾಂದರ್ಭಿಕ ಚಿತ್ರ

ರಾಯಚೂರು: ಬೇಸಿಗೆ ಬಂದರೆ ಸಾಕು ಭುಗಿಲೇಳುತ್ತಿದ್ದ ಕುಡಿವ ನೀರಿನ ಸಮಸ್ಯೆ ಈ ಬಾರಿ ಕೊರೊನಾ ನೆಪದಲ್ಲಿ ಮೆರೆಯಾಗಿದೆ. ಶಾಶ್ವತ ಸಮಸ್ಯೆ ಎದುರಿಸುತ್ತಿರುವ ಗ್ರಾಮಗಳು ಹೊರತುಪಡಿಸಿ ಜಿಲ್ಲೆಯ 179 ಹಳ್ಳಿಗಳಲ್ಲಿ ಕುಡಿಯುವ ಸಮಸ್ಯೆ ಎದುರಿಸಿವೆ.

ಬಿರು ಬೇಸಿಗೆಯಲ್ಲಿ ಜನ ಜಾನುವಾರು ನೀರಿಗಾಗಿ ಪರಿತಪಿಸುವ ಸನ್ನಿವೇಶ ಜಿಲ್ಲೆಯ ಮಟ್ಟಿಗೆ ಹೊಸದೇನಲ್ಲ. ಆದರೆ, ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ನೀರಿನ ಬಳಕೆ ಹೆಚ್ಚಿದರೂ ಸಮಸ್ಯೆ ಅಷ್ಟಾಗಿ ಕಂಡು ಬಂದಿಲ್ಲ. ಜಿಲ್ಲೆಯ 1,457 ಗ್ರಾಮಗಳ ಪೈಕಿ 179 ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿತ್ತು. ಈ ಪೈಕಿ 69 ಗ್ರಾಮಗಳಿಗೆ ಖಾಸಗಿ ಬೋರ್‌ವೆಲ್‌ಗ‌ಳ ಮೂಲಕ ನೀರು ಪೂರೈಸಲಾಗಿದೆ. ಉಳಿದ ಗ್ರಾಮಗಳಲ್ಲಿ ಬೋರ್‌ವೆಲ್‌ ಮೂಲಕ ನೀರು ಪೂರೈಸಲು ಕ್ರಮ ಕೈಗೊಳ್ಳಲಾಗಿದೆ. ಈ ಬಾರಿ ರಾಯಚೂರು ತಾಲೂಕಿನ ಬಿಜನಗೇರಾ ಮತ್ತು ದೇವದುರ್ಗ ತಾಲೂಕಿನ ಭೂಮನಮರಡಿ ಹಾಗೂ ದೇವರ ಮಲ್ಲಾಪೂರ ಎಸ್‌ಸಿ ಕಾಲೋನಿಗೆ ಟ್ಯಾಂಕರ್‌ಗಳ ಮೂಲಕ ಕುಡಿಯುವ ನೀರು ಸರಬರಾಜು ಮಾಡಲಾಗಿದೆ.

ಜಲಾಶಯಗಳಲ್ಲಿ ಸಂಗ್ರಹ ಹೆಚ್ಚಳ: ಕಳೆದ ವರ್ಷ ಸಂಭವಿಸಿದ ನೆರೆ ಹಾವಳಿಯಿಂದ ತುಂಗಭದ್ರಾ, ನಾರಾಯಣಪುರ ಜಲಾಶಯದಲ್ಲಿ ನೀರಿನ ಸಂಗ್ರಹ ಹೆಚ್ಚಾಗಿದೆ. ಮುಂಗಾರು ಮುನ್ನ ತಲಸ್ಪರ್ಶಿಯಾಗುತ್ತಿದ್ದ ತುಂಗಭದ್ರಾ ಜಲಾಶಯದಲ್ಲಿ ಪ್ರಸ್ತುತ 6.2 ಟಿಎಂಸಿ ನೀರಿನ ಲಭ್ಯತೆ ಇದೆ. ತುರ್ತು ಸಂದರ್ಭದಲ್ಲಿ ಕುಡಿಯುವ ನೀರಿಗೆಂದೇ ಮೂರು ಟಿಎಂಸಿ ಮೀಸಲಿಡಲಾಗುತ್ತದೆ. ಹೀಗಾಗಿ ಸಿಂಧನೂರು, ಮಾನ್ವಿ, ರಾಯಚೂರು ಜನರಿಗೆ ಕುಡಿಯುವ ನೀರಿನ ಬಾಧೆ ತುಸು ಕಡಿಮೆಯಾಗಿದೆ.

ಇನ್ನೂ ಲಿಂಗಸೂಗೂರು, ದೇವದುರ್ಗ ಹಾಗೂ ರಾಯಚೂರು ತಾಲೂಕಿನ ಅರ್ಧ ಭಾಗ ಕೃಷ್ಣಾ ನದಿ ಅವಲಂಬಿಸಿದ್ದು, ಅಲ್ಲಿಯೂ ನೀರಿನ ಲಭ್ಯತೆ ಇರುವುದು ಅನುಕೂಲವಾಗಿದೆ. ನಾರಾಯಣಪುರ ಜಲಾಶಯದಲ್ಲಿ 3.5 ಟಿಎಂಸಿ, ಆಲಮಟ್ಟಿಯಲ್ಲಿ 4 ಟಿಎಂಸಿ ನೀರು ಕುಡಿಯಲೆಂದೇ ಮೀಸಲಿಡಲಾಗಿದೆ. ಅಚ್ಚರಿ ಎಂದರೆ, ಎರಡನೇ ಬೆಳೆಗೆ ನೀರು ಹರಿಸಿದರೂ ಈ ಬಾರಿ ನೀರಿನ ಕೊರತೆ ಕಂಡು ಬಂದಿಲ್ಲ. ಕಳೆದ ವರ್ಷ ಇಷ್ಟೊತ್ತಿಗಾಗಲೇ ಎಲ್ಲೆಡೆ ಜಲಕ್ಷಾಮ ಎದುರಾಗಿತ್ತು.

ನೀರು ತರುವುದೇ ಕಾಯಕ: ಬೇಸಿಗೆ ಶುರುವಾಗುತ್ತಿದ್ದಂತೆ ಕೊರೊನಾ ಲಾಕ್‌ಡೌನ್‌ ಶುರುವಾಯಿತು. ಹೀಗಾಗಿ ಕೆಲಸವಿಲ್ಲದೇ ಎಲ್ಲರೂ ಮನೆ ಸೇರಿದರು. ಹಳ್ಳಿಗಳಲ್ಲೂ ಕೂಲಿ ಕೆಲಸಕ್ಕೆ ಬರ ಎದುರಾದರೆ, ಗುಳೆ ಹೋದವರು ಮರಳಿ ಊರುಗಳಿಗೆ ಬಂದಿದ್ದಾರೆ. ಹೀಗಾಗಿ ಕುಡಿಯುವ ನೀರು ತರುವುದೇ ನಿತ್ಯ ಕಾಯಕ ಮಾಡಿಕೊಂಡಿದ್ದರು. ತಾಲೂಕಿನ ಮನ್ಸಲಾಪುರ, ಅತ್ತನೂರು, ದೇವದುರ್ಗ ತಾಲೂಕಿನ ಬುಂಕಲದೊಡ್ಡಿ ಸೇರಿದಂತೆ ಅನೇಕ ತಾಂಡಾಗಳು, ಲಿಂಗಸೂಗೂರು ತಾಲೂಕಿನ ವಿವಿಧ ಹಳ್ಳಿಗಳಿಗೆ ಸಮಸ್ಯೆ ಎದುರಾಯಿತು.

ಈ ಬಾರಿ ಕುಡಿಯುವ ನೀರಿನ ಬೇಡಿಕೆ ಹೆಚ್ಚಾಗಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಸಮಸ್ಯೆ ಕಂಡು ಬಂದಿಲ್ಲ. ಸಹಾಯವಾಣಿ ಕೇಂದ್ರ ಆರಂಭಿಸಿದ್ದು ದೂರು ಬಂದ ಕೂಡಲೇ ಸ್ಪಂದಿಸಲಾಗಿದೆ. ಎರಡು ಜಲಾಶಯಗಳ ವ್ಯಾಪ್ತಿಯ 160ಕ್ಕೂ ಅಧಿ ಕ ಕೆರೆಗಳನ್ನು ತುಂಬಿಸಿದ್ದು, ನೀರಿನ ಪೂರೈಕೆಗೆ ತೊಂದರೆ ಆಗಿಲ್ಲ. ಆದರೆ, ಸಾಂಪ್ರದಾಯಿಕ ಸಮಸ್ಯೆಗಳಿರುವ ಊರುಗಳಿಗೆ ಖಾಸಗಿ ಬೋರ್‌ವೆಲ್‌ ಮೂಲಕ ನೀರು ನೀಡಲಾಗಿದೆ. ಕೇವಲ ಮೂರು ಹಳ್ಳಿಗೆ ಮಾತ್ರ ಟ್ಯಾಂಕ್‌ ನೀರು ಸರಬರಾಜು ಮಾಡಲಾಗಿದೆ.
ಗಣಪತಿ ಸಾಕ್ರೆ,
ಇಇ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆ

ಸಿದ್ದಯ್ಯಸ್ವಾಮಿ ಕುಕುನೂರು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.