ಗಡಿನಾಡಲ್ಲಿ ರಾಜಮೌಳಿ ಆರ್‌ಆರ್‌ಆರ್‌ ಆರ್ಭಟ!


Team Udayavani, Mar 26, 2022, 1:28 PM IST

12RRR

ರಾಯಚೂರು: ಬಾಹುಬಲಿ ಖ್ಯಾತಿಯ ನಿರ್ದೇಶಕ ಎಸ್‌.ಎಸ್‌. ರಾಜಮೌಳಿ ನಿರ್ದೇಶನದ ಬಹುನಿರೀಕ್ಷಿತ ಆರ್‌ಆರ್‌ಆರ್‌ ಸಿನಿಮಾ ಶುಕ್ರವಾರ ಬಿಡುಗಡೆಯಾಗಿದ್ದು, ಬಹುತಾರಾಗಣದ ಸಿನಿಮಾ ನೋಡಲು ಅಭಿಮಾನಿಗಳಿಂದ ನೂಕುನುಗ್ಗಲು ನಡೆದಿದೆ.

ಬೆಳ್ಳಬೆಳಗ್ಗೆಯೇ ಸಿನಿಮಾ ಪ್ರದರ್ಶನ ಆರಂಭಿಸಲಾಯಿತು. ನಗರದ ಪೂರ್ಣಿಮಾ ಚಿತ್ರಮಂದಿರದಲ್ಲಿ ಗೇಟ್‌ ಮುರಿದು ಪ್ರೇಕ್ಷಕರು ನುಗ್ಗಿದ ಪ್ರಸಂಗಗಳು ನಡೆದವು. ಬಾಗಿಲು, ಕಿಟಕಿಗಳನ್ನು ಮುರಿಯುವ ಮೂಲಕ ಪ್ರೇಕ್ಷಕರು ಅತಿರೇಕದ ವರ್ತನೆ ತೋರಿದ್ದಾರೆ. ಅಭಿಮಾನಿಗಳ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಬೇಕಾಯಿತು.

ಟಿಕೆಟ್‌ ಪಡೆದವರು ಬಿಟ್ಟು ಬೇರೆಯವರೇ ಸಿನಿಮಾ ನೋಡಿದ್ದು, ಹಣ ಕೊಟ್ಟವರಿಗೆ ಸಿನಿಮಾ ನೋಡಲಾಗಿಲ್ಲ ಎಂದು ಚಿತ್ರಮಂದಿರ ಮಾಲೀಕರು ತಿಳಿಸಿದ್ದಾರೆ.

ಮಿರಾಜ್‌ ಸಿನಿಮಾದಲ್ಲಿ ಹೆಚ್ಚು ಪ್ರದರ್ಶನಗಳನ್ನು ಆಯೋಜಿಸಿದ್ದು, ಮೂರು ನಾಲ್ಕು ಪರದೆಗಳಲ್ಲಿ ಸಿನಿಮಾವನ್ನು ನಿರಂತರವಾಗಿ ಓಡಿಸಲಾಗಿದೆ. ಬಹುತೇಕ ಎಲ್ಲ ಪ್ರದರ್ಶನಗಳು ಹೌಸ್‌ಫುಲ್‌ ಪ್ರದರ್ಶನ ಕಂಡಿವೆ. ಗಡಿ ಜಿಲ್ಲೆಯಾದ ಕಾರಣ ತೆಲುಗು ಪ್ರಭಾವ ಹೆಚ್ಚಾಗಿದ್ದು, ಸಿನಿಮಾಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ, ಲಾಕ್‌ಡೌನ್‌ನಿಂದ ದೊಡ್ಡ ಸಿನಿಮಾಗಳು ಈಗಷ್ಟೇ ಬಿಡುಗಡೆಯಾಗುತ್ತಿರುವುದು ಮತ್ತೊಂದು ಕಾರಣ.

ಖ್ಯಾತ ನಟರಾದ ಜ್ಯೂ.ಎನ್‌ಟಿಆರ್‌ ಹಾಗೂ ರಾಮ್‌ ಚರಣ್‌ ಹಾಗೂ ರಾಜಮೌಳಿ ನಿರ್ದೇಶನದ ಸಿನಿಮಾ ಎಂಬ ಕಾರಣಕ್ಕೂ ಭಾರೀ ಪ್ರತಿಕ್ರಿಯೆ ಬಂದಿದೆ. ಈ ಅವಕಾಶ ಬಳಸಿಕೊಂಡ ಚಿತ್ರಮಂದಿರದ ಮಾಲೀಕರು ಟಿಕೆಟ್‌ ದರವನ್ನು ಹೆಚ್ಚಿಸಿದ್ದರು. 150 ರೂ. ಇದ್ದ ಟಿಕೆಟ್‌ ದರ 300 ರೂ. ಹೆಚ್ಚಿಸಲಾಗಿತ್ತು. ಟಿಕೆಟ್‌ ಸಿಗದ ಅಭಿಮಾನಿಗಳು ಬೇರೆಯವರ ಟಿಕೆಟ್‌ಗಳನ್ನು ಕಲರ್‌ ಝೆರಾಕ್ಸ್‌ ಮಾಡಿಸಿ ಸಿನಿಮಾ ನೋಡಲು ಯತ್ನಿಸಿದ ಪ್ರಸಂಗಗಳು ನಡೆದಿವೆ.

ಕನ್ನಡ ಡಬ್ಬಿಂಗ್‌; ಸಿಗದ ಸ್ಪಂದನೆ

ಆರ್‌ಆರ್‌ ಆರ್‌ ಸಿನಿಮಾ ತೆಲುಗು, ಕನ್ನಡ ಸೇರಿದಂತೆ ಬಹುಭಾಷೆಯಲ್ಲಿ ಬಿಡುಗಡೆಯಾಗಿದೆ. ಆದರೆ, ಜಿಲ್ಲೆಯಲ್ಲಿ ಕನ್ನಡ ಡಬ್ಬಿಂಗ್‌ ಸಿನಿಮಾ ಜತೆಗೆ ತೆಲುಗು ಸಿನಿಮಾ ಪ್ರದರ್ಶನವೇ ಹೆಚ್ಚಾಗಿದ್ದು, ಕನ್ನಡ ಡಬ್ಬಿಂಗ್‌ ಸಿನಿಮಾಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮಿರಾಜ್‌ ಸಿನಿಮಾಸ್‌ನಲ್ಲಿ ಎರಡ್ಮೂರು ಪರದೆ ಮೇಲೆ ತೆಲುಗು ಸಿನಿಮಾ ಪ್ರದರ್ಶಿಸಿದರೆ, ಒಂದು ಪರದೆಯಲ್ಲಿ ಮಾತ್ರ ಕನ್ನಡ ಡಬ್ಬಿಂಗ್‌ ಸಿನಿಮಾ ಪ್ರದರ್ಶಿಸುತ್ತಿದ್ದು, ಅದಕ್ಕೂ ಪ್ರೇಕ್ಷಕರ ಕೊರತೆ ಕಂಡು ಬರುತ್ತಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.