ರಾಯಚೂರಿನ ಖ್ಯಾತ ತತ್ವಪದ ಗಾಯಕ ದಾದಾಪೀರ್ ಮಂಜರ್ಲಾ ಇನ್ನಿಲ್ಲ
Team Udayavani, Aug 4, 2020, 1:08 PM IST
ರಾಯಚೂರು: ಜಿಲ್ಲೆಯ ಖ್ಯಾತ ತತ್ವಪದ ಗಾಯಕ ದಾದಾಪೀರ್ ಮಂಜರ್ಲಾ (57) ಇಂದು ನಿಧನರಾದರು.
ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿದ್ದ ದಾದಾಪೀರ್ ಅವರು ರಾಜ್ಯದಲ್ಲಿ ತಮ್ಮದೇ ಹೆಗ್ಗುರುತು ಮೂಡಿಸಿದ್ದರು. ತಮ್ಮದೇ ಗಾಯನದ 100ಕ್ಕೂ ಹೆಚ್ಚು ಸಿಡಿಗಳನ್ನು ಮಾಡುವ ಮೂಲಕ ಗಮನ ಸೆಳೆದಿದ್ದರು.
ಮೃತರು ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಆರ್ಥಿಕ ನೆರವಿಗಾಗಿ ಮನವಿ ಮಾಡಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸ್ವಗೃಹದಲ್ಲಿ ಮೃತಪಟ್ಟಿದ್ದಾರೆ. ಮೃತರಿಗೆ ಇಬ್ಬರು ಪುತ್ರರು ಒಬ್ಬ ಪುತ್ರಿ ಇದ್ದಾರೆ. ಸ್ವಗ್ರಾಮದಲ್ಲಿ ಬುಧವಾರ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ