ಶಾಖೋತ್ಪನ್ನ ಕೇಂದ್ರಗಳಿಗೆ ವಿಶ್ರಾಂತಿ

ಸತತ ಎರಡನೇ ವರ್ಷವೂ ಎಲ್ಲ ಘಟಕ ಸ್ಥಗಿತ ; ವರುಣ ಕೃಪೆಯಿಂದ ವಿದ್ಯುತ್‌ ಉತ್ಪಾದನೆ ಮೊಟಕು

Team Udayavani, Jul 24, 2022, 2:56 PM IST

12

ರಾಯಚೂರು: ಒಂದು ಕಾಲದಲ್ಲಿ ವರ್ಷದ ಎಲ್ಲ ದಿನಗಳು ಕೆಲಸ ಮಾಡುತ್ತಿದ್ದ ಶಾಖೋತ್ಪನ್ನ ಕೇಂದ್ರಗಳಿಗೆ ಇತ್ತೀಚೆಗೆ ಸಂಪೂರ್ಣ ವಿಶ್ರಾಂತಿ ನೀಡಲಾಗುತ್ತಿದೆ. ಕಳೆದ ವರ್ಷ ಕೋವಿಡ್‌ ಕಾರಣಕ್ಕೆ ಸ್ಥಗಿತಗೊಂಡಿದ್ದ ಘಟಕಗಳು ಈ ಬಾರಿ ವರುಣನ ಕೃಪೆಯಿಂದ ಸ್ಥಗಿತಗೊಂಡಿವೆ.

ರಾಯಚೂರು ಶಾಖೋತ್ಪನ್ನ ವಿದ್ಯುತ್‌ ಕೇಂದ್ರ (ಆರ್‌ಟಿಪಿಎಸ್‌)  ಹಾಗೂ ಯರಮರಸ್‌ ಸೂಪರ್‌ ಕ್ರಿಟಿಕಲ್‌ ಥರ್ಮಲ್‌ ಪವರ್‌ ಸ್ಟೇಶನ್‌ಗಳು ಕಳೆದ ಕೆಲ ದಿನಗಳಿಂದ ಸಂಪೂರ್ಣ ಉತ್ಪಾದನೆ ನಿಲ್ಲಿಸಿವೆ. ರಾಜ್ಯದಲ್ಲಿ ವರುಣಾರ್ಭಟ ಜೋರಾಗಿದ್ದು, ಎಲ್ಲೆಡೆ ಜಲ ಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಇದರಿಂದ ಜಲ ವಿದ್ಯುತ್‌ ಎಂದಿಗಿಂತ ಹೆಚ್ಚು ಉತ್ಪಾದನೆಯಾಗುತ್ತಿದೆ. ಅದರ ಜತೆಗೆ ಪವನ ಶಕ್ತಿ ಕೂಡ ಹೆಚ್ಚಾಗಿ ಬರುತ್ತಿದ್ದು, ಶಾಖೋತ್ಪನ್ನ ಕೇಂದ್ರಗಳ ಮೇಲೆ ನೇರ ಪರಿಣಾಮ ಬೀರಿದೆ. ಆರ್‌ಟಿಪಿಎಸ್‌ನ ಎಂಟು ಘಟಕಗಳಿಂದ 1720 ಮೆಗಾವ್ಯಾಟ್‌ ಹಾಗೂ ವೈಟಿಪಿಎಸ್‌ನ ಎರಡು ಘಟಕಗಳಿಂದ 1600 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಬಹುದು. ಈಗ ಎರಡು ಕೇಂದ್ರಗಳ ಎಲ್ಲ ಘಟಕಗಳು ಸ್ಥಗಿತಗೊಂಡಿದ್ದು, ಒಂದೇ ಒಂದು ಮೆಗಾವ್ಯಾಟ್‌ ಉತ್ಪಾದನೆ ಮಾಡುತ್ತಿಲ್ಲ. ಈ ಎರಡು ಕೇಂದ್ರಗಳು ಹೊರತಾಗಿಯೂ ರಾಜ್ಯದಲ್ಲಿ 1642 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಅದರ ಜತೆಗೆ ಸೋಲಾರ್‌ ಯೂನಿಟ್‌ಗಳಿಂದಲೂ ವಿದ್ಯುತ್‌ ಸಿಗುತ್ತಿದೆ.

ಶರಾವತಿಯಲ್ಲಿ 216 ಮೆಗಾವ್ಯಾಟ್‌, ಆಲಮಟ್ಟಿಯಲ್ಲಿ 43 ಮೆಗಾವ್ಯಾಟ್‌, ಜೋಗದಲ್ಲಿ 60 ಮೆಗಾವ್ಯಾಟ್‌, ವಾರಾಹಿಯಲ್ಲಿ 60 ಮೆಗಾವ್ಯಾಟ್‌, ನಾಗ್ಝರಿಯಲ್ಲಿ 104 ಮೆಗಾವ್ಯಾಟ್‌, ಶಿವನಸಮುದ್ರದಲ್ಲಿ 33 ಮೆಗಾವ್ಯಾಟ್‌ ಹೀಗೆ ನಾನಾ ಕಡೆ ವಿದ್ಯುತ್‌ ಉತ್ಪಾದನೆಯಾಗುತ್ತಿದೆ. ಆದರೆ, ಬಳ್ಳಾರಿ ಶಾಖೊತ್ಪನ್ನ ಕೇಂದ್ರದಿಂದ ಅ ಧಿಕ ಪ್ರಮಾಣದಲ್ಲಿ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದ್ದು, ಎರಡು ಘಟಕಗಳಿಂದ 674 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದಿಸಲಾಗುತ್ತಿದೆ.

ಕೋವಿಡ್‌ ವೇಳೆ ಸ್ಥಗಿತ: ಆರ್‌ಟಿಪಿಎಸ್‌ನ ಇತಿಹಾಸದಲ್ಲೇ ಎಂದಿಗೂ ಎಂಟಕ್ಕೆ ಎಂಟೂ ಘಟಕಗಳು ಸ್ಥಗಿತಗೊಂಡ ನಿದರ್ಶನ ಇರಲಿಲ್ಲ. ಕೋವಿಡ್‌ ಸಂಕಷ್ಟದ ವೇಳೆ ಎಲ್ಲೆಡೆ ಕೈಗಾರಿಕೆಗಳು ಸ್ಥಗಿತಗೊಂಡ ಕಾರಣ ವಿದ್ಯುತ್‌ ಬೇಡಿಕೆ ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿತ್ತು. ಆಗ ಅನಿವಾರ್ಯವಾಗಿ ಶಾಖೋತ್ಪನ್ನ ಕೇಂದ್ರಗಳನ್ನು ನಿಲ್ಲಿಸುವ ಸನ್ನಿವೇಶ ಏರ್ಪಟ್ಟು ಮೊದಲ ಬಾರಿಗೆ ಸ್ಥಗಿತಗೊಳಿಸಲಾಗಿತ್ತು. ಅದೇ ವೇಳೆ ಸುಮಾರು 600ಕ್ಕೂ ಅ ಧಿಕ ಗುತ್ತಿಗೆ ಕಾರ್ಮಿಕರನ್ನು ಕೈ ಬಿಡಲಾಗಿತ್ತು. ಈಗ ರಾಜ್ಯದಲ್ಲಿ ಪರ್ಯಾಯ ವಿದ್ಯುತ್‌ ಮೂಲಗಳು ಹೆಚ್ಚಾಗಿರುವ ಕಾರಣ ಶಾಖೋತ್ಪನ್ನ ಕೇಂದ್ರಗಳ ಮೇಲಿನ ಅವಲಂಬನೆ ಕ್ರಮೇಣ ಕ್ಷೀಣಿಸುತ್ತಿದೆ.

ಬಿಟಿಪಿಎಸ್‌ಗೂ ಶಾಕ್‌

ಬಳ್ಳಾರಿ ಥರ್ಮಲ್‌ ಪವರ್‌ ಸ್ಟೇಶನ್‌ ಕೂಡ ಕೆಲ ದಿನಗಳಿಂದ ಸ್ಥಗಿತಗೊಳಿಸಲಾಗಿತ್ತು. ಅಲ್ಲಿಯೂ ಮೂರು ಘಟಕಗಳಿಂದ 1750 ಮೆಗಾವ್ಯಾಟ್‌ ವಿದ್ಯುತ್‌ ಉತ್ಪಾದನೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಜಲಶಕ್ತಿ ಉತ್ಪಾದನೆ ಹಂತ ಹಂತವಾಗಿ ಕಡಿಮೆಯಾಗುತ್ತಿದ್ದು, ಮಂಗಳವಾರದಿಂದ ಎರಡು ಘಟಕಗಳನ್ನು ಪುನಾರಂಭಿಸಲಾಗಿದೆ.

ರಾಜ್ಯದಲ್ಲಿ ಜಲಶಕ್ತಿಯಿಂದ ವಿದ್ಯುತ್‌ ಉತ್ಪಾದನೆ ಹೆಚ್ಚಾಗಿದ್ದು, ಶಾಖೋತ್ಪನ್ನ ಕೇಂದ್ರಗಳಿಗೆ ಬೇಡಿಕೆ ಕುಗ್ಗಿದೆ. ಹೀಗಾಗಿ ಎಲ್ಲ ಘಟಕಗಳನ್ನು ಸ್ಥಗಿತಗೊಳಿಸಲಾಗಿದೆ. ಬಿಟಿಪಿಎಸ್‌ನಲ್ಲಿ ವಿದ್ಯುತ್‌ ಆರಂಭಿಸಿದ್ದು, ಶೀಘ್ರದಲ್ಲೇ ಆರ್‌ಟಿಪಿಎಸ್‌ ವೈಟಿಪಿಎಸ್‌ನಲ್ಲಿ ವಿದ್ಯುತ್‌ ಉತ್ಪಾದನೆ ಆರಂಭಿಸಲಾಗುವುದು. ಕಲ್ಲಿದ್ದಿಲು ಕೊರತೆಯಾಗಿಲ್ಲ. –ಹೆಸರು ಹೇಳಲಿಚ್ಛಿಸದ ಅಧಿಕಾರಿ

ಟಾಪ್ ನ್ಯೂಸ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.