ರಾಯರಲ್ಲಿದೆ ನಾಸ್ತಿಕರನ್ನು ದೈವಸ್ಥರಾಗಿಸೋ ಶಕ್ತಿ


Team Udayavani, Aug 11, 2017, 12:06 PM IST

mantralaya.jpg

ರಾಯಚೂರು: ರಾಯರ ದರ್ಶನದಿಂದ ನಾಸ್ತಿಕರು ಆಸ್ತಿಕ ರಾಗುವರು. ನಾಸ್ತಿಕರನ್ನು ದೈವಸ್ಥರನ್ನಾಗಿಸುವ ಶಕ್ತಿ ರಾಯರಲ್ಲಿದೆ. ಎಂದು ಶ್ರೀಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಹೇಳಿದರು. ಮಂತ್ರಾಯಲದಲ್ಲಿ ಗುರುವಾರ ನಡೆದ ಶ್ರೀ ರಾಘವೇಂದ್ರ ಸ್ವಾಮಿಗಳ ರಥೋತ್ಸವದಲ್ಲಿ ಅವರು ಅನುಗ್ರಹ ಸಂದೇಶ ನೀಡಿದರು. ಆಸ್ತಿಕರ ಭಕ್ತಿ, ಶ್ರದ್ಧಾ ಕೇಂದ್ರವಾದ ರಾಯರ ಮಠಕ್ಕೆ ನಾಸ್ತಿಕರು ಬಂದಲ್ಲಿ ಮನ ಪರಿವರ್ತಿತರಾಗುವರು. ದೇವರಿಲ್ಲ, ಧರ್ಮವಿಲ್ಲ ಎನ್ನುವವರು ರಾಯರ ದರ್ಶನ ಪಡೆಯಲಿ ಎಂದರು. ರಾಯರ ಮಹಿಮೆ ದಿನೇ ದಿನೇ ಹೆಚ್ಚುತ್ತಿದೆ. ಕಷ್ಟದಿಂದ, ಹತಾಶದೊಂದಿಗೆ ರಾಯರ ದರ್ಶನಕ್ಕೆ ಬರುವ ಭಕ್ತರಿಗೆ ನೆಮ್ಮದಿ ಸಿಕ್ಕಿದೆ. ಜನರ ಕಷ್ಟ ಅರಿಯಲೆಂದೇ ಪ್ರಹ್ಲಾದರಾಜರು ರಥದ ಮೂಲಕ ಬೀದಿಗಳಲ್ಲಿ ಸಂಚರಿಸುವರು ಎಂದು ಬಣ್ಣಿಸಿದರು. ಶ್ರೀ ರಾಘವೇಂದ್ರ ಸ್ವಾಮಿಗಳು ಒಂದು ಜಾತಿ-ಮತ-ಪಂಥಗಳಿಗೆ ಸೀಮಿತರಲ್ಲ. ರಾಯರ ಆರಾಧನೆಯನ್ನು ಇಡೀ ವಿಶ್ವದಲ್ಲಿ ಆಚರಿಸಲಾಗುತ್ತಿದ್ದು, ಇದೊಂದು
ದೊಡ್ಡ ಮಹೋತ್ಸವವಾಗಿದೆ. ರಾಯರ ಆಧ್ಯಾತ್ಮಿಕ, ದೈವಿಕ ಸಂಪತ್ತು ಎಂದಿಗೂ ಕರಗದ ಸಂಪತ್ತು. ಹಣ-ಅಂತಸ್ತು ಹಂಚಿಕೆ ಕಳೆಯಲಿದೆ. ಆದರೆ ರಾಯರ ಆಧಾತ್ಮಿಕ ಸಂಪತ್ತು ಎಷ್ಟೇ ಹಂಚಿದರೂ ಕರಗುವುದಲ್ಲ ಎಂದು ನುಡಿದರು. ತುಂಗಾಭದ್ರಾ ನದಿ ಬತ್ತಿರುವ ಹಿನ್ನೆಲೆಯಲ್ಲಿ ಭಕ್ತರಿಗೆ ತೊಂದರೆಯಾಗುತ್ತದೆ ಎಂಬ ಆತಂಕವಿತ್ತು. ಆದರೆ, ಅದ್ಯಾವುದನ್ನು ಲೆಕ್ಕಿಸದೆ ಭಕ್ತರು ಸಂಭ್ರಮದಿಂದ ಪಾಲ್ಗೊಂಡಿದ್ದಾರೆ. ರಾಯರ ಕರುಣೆ ಸಕಲ ಮೇಲಿರಲಿ. ಕಾಲಕಾಲಕ್ಕೆ ಮಳೆ-ಬೆಳೆ ಬರಲಿ ಎಂದು ಶುಭ ಹಾರೈಸಿದರು.

ರಂಗು ತಂದ ಕಲಾ ತಂಡಗಳುಮಂತ್ರಾಲಯದ
ಯರರಾ ಆರಾಧನಾ ಮಹೋತ್ಸವ ದಲ್ಲಿ ಒಂದೆಡೆ ಜನಸಾಗರ, ಮತ್ತೂಂದೆಡೆ ಕಲಾ ತಂಡಗಳ ಪ್ರದರ್ಶನ ಭಕ್ತರ ಗಮನ ಸೆಳೆದವು. ಇನ್ನೇನು ರಥೋತ್ಸವಕ್ಕೆ ಕ್ಷಣಗಣನೆ ಶುರುವಾಗುತ್ತಿದ್ದಂತೆ ಕಲಾ ತಂಡಗಳು ರಥ ಬೀದಿಯಲ್ಲಿ ಮಾವಣೆಗೊಂಡು ಸುಮಾರು ನಾಲ್ಕು ಗಂಟೆಗೂ ಹೆಚ್ಚು ಕಾಲ ಪ್ರದರ್ಶನ ನೀಡುವ ಮೂಲಕ ಜನಮನ ರಂಜಿಸಿದವು. ಕರ್ನಾಟಕ, ಆಂಧ್ರ, ತೆಲಂಗಾಣ ಸೇರಿದಂತೆ ನಾನಾ ಕಡೆಗಳಿಂದಲೂ ಕಲಾ ತಂಡಗಳು ಆಗಮಿಸಿದ್ದವು. ಹೆಚ್ಚಾಗಿ ಮಹಿಳಾ ತಂಡಗಳೇ ಭಾಗವಹಿಸಿದ್ದು ವಿಶೇಷವಾಗಿತ್ತು. ಡೊಳ್ಳು ಕುಣಿತ, ಬಾಜಾ ಭಜಂತ್ರಿ, ಹಗಲು ವೇಷಗಾರರು, ಮಹಿಳಾ ವೀರಗಾಸೆ, ಕೋಲಾಟ, ಚಿನ್ನಾಟ, ಛದ್ಮವೇಷಧಾರಿಗಳ ತಂಡಗಳು ವಿವಿಧ
ಪ್ರಕಾರಗಳ ನೃತ್ಯ ಪ್ರದರ್ಶಿಸಿದವು. ಇನ್ನು ಕೆಲ ತಂಡದವರು ಕೋಲಾಟ ಆಡಿ ಗಮನ ಸೆಳೆದರು. ಹಾವೇರಿಯಿಂದ ಆಗಮಿಸಿದ ಕಲಾ ತಂಡ ಮಠದ ಪ್ರಾಂಗಣದಲ್ಲೇ ಸುಮಾರು ಒಂದೂವರೆ ಗಂಟೆ ಕಾಲ ನೃತ್ಯ ಪ್ರದರ್ಶನ ನೀಡಿ ಗಮನ ಸೆಳೆಯಿತು. ಮಠದ
ಆವರಣದಿಂದ ದ್ವಾರ ಬಾಗಿಲುವರೆಗೂ ಜನ ಸಾಲುಗಟ್ಟಿದ್ದರಿಂದ ಕಲಾ ತಂಡಗಳಿಗೆ ಬಿಡುವಿಲ್ಲದಂತಾಗಿತ್ತು.

ಟಾಪ್ ನ್ಯೂಸ್

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

1-y-a

Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.