ರಿಯಲ್‌ ಎಸ್ಟೇಟ್‌ ಮೀರಿಸಿದ ಆರ್‌ಡಿಎ ದರ ನೀತಿ!


Team Udayavani, Apr 30, 2022, 5:04 PM IST

19realeste

ರಾಯಚೂರು: ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರ ಸರ್ಕಾರದ ಅಧೀನದಲ್ಲೇ ಕೆಲಸ ಮಾಡಿದರೂ ನಿವೇಶನ ಹಂಚಿಕೆಯಲ್ಲಿ ಮಾತ್ರ ರಿಯಲ್‌ ಎಸ್ಟೇಟ್‌ ಗಿಂತ ಅಧಿಕ ದರ ನಿಗದಿ ಮಾಡಿ ಜನಾಕ್ರೋಶಕ್ಕೆ ಗುರಿಯಾಗಿದೆ.

ನಗರದ ಬೋಳಮಾನದೊಡ್ಡಿ ರಸ್ತೆಯಲ್ಲಿ ಹೊಸ ಎನ್‌ಜಿಒ ಕಾಲೋನಿಯಲ್ಲಿ ಶುಕ್ರವಾರ ಆರ್‌ಡಿಎಗೆ ಸಂಬಂಧಿಸಿದ 21 ನಿವೇಶನಗಳ ಹರಾಜು ಪ್ರಕ್ರಿಯೆ ನಡೆಯಿತು. ಜನ ತಮ್ಮ ನಿವೇಶನಗಳಿಗೆ ತೆರಿಗೆ ಕಟ್ಟಿದಾಗ ನೋಂದಣಿ ಕಚೇರಿಯಲ್ಲಿ ಅದರ ಮೌಲ್ಯ ಕಡಿಮೆಯೇ ತೋರಿಸಲಾಗುತ್ತಿದೆ. ಆದರೆ, ಹೊರಗೆ ಮೌಲ್ಯಕ್ಕಿಂತ ದುಪ್ಪಟ್ಟು ದರ ಇರುತ್ತದೆ. ಆರ್‌ಡಿಎ ನಿವೇಶನಗಳಿಗೆ ಮಾತ್ರ ಹರಾಜು ಕೂಗುವಾಗಲೇ ಬೇಕಾಬಿಟ್ಟಿ ದರ ನಿಗದಿ ಮಾಡಿರುವುದು ಅಚ್ಚರಿ ಮೂಡಿಸಿತು.

ಈ ಹಿಂದೆ ಹರಾಜು ಪ್ರಕ್ರಿಯೆ ಆಧರಿಸಿ ಸರಳ ಬಡ್ಡಿ ರೀತಿಯಲ್ಲಿ ದರ ನಿಗದಿ ಮಾಡಿದ್ದಾಗಿ ಆರ್‌ ಡಿಎ ಅಧಿಕಾರಿಗಳು ತಿಳಿಸುತ್ತಾರೆ. ಚದರ ಮೀಟರ್‌ ಗೆ 6400 ರೂ. ಅಂದರೆ ಚದರ ಅಡಿ ಸ್ಥಳಕ್ಕೆ 595 ರೂ. ನಿಗದಿ ಮಾಡಲಾಗಿದೆ. 30*40 ಅಳತೆಯ ನಿವೇಶನಗಳು ಆರ್‌ಡಿಎ ದರದನ್ವಯ ಏಳರಿಂದ ಎಂಟು ಲಕ್ಷ ರೂ. ನಿಗದಿ ಮಾಡಲಾಗಿತ್ತು. ಆರ್‌ಡಿಎ ನೀಡಿದ ಪ್ರಕಟಣೆಯನ್ವಯ ಸುಮಾರು 171 ಜನ 10 ಸಾವಿರ ರೂ. ಶುಲ್ಕ ಭರ್ತಿ ಮಾಡಿ ಹರಾಜಿನಲ್ಲಿ ಭಾಗಿಯಾಗಿದ್ದರು. ಆದರೆ, ಇಲ್ಲಿ ನಿವೇಶನಗಳ ಬೆಲೆ ಏರಿಕೆ ಕಂಡು ಬಹುತೇಕರು ಅರ್ಧಕ್ಕೆ ಮರಳಿ ಹೋದರು.

ಬಡವರಿಗಲ್ಲದ ಹರಾಜು

ಕಡಿಮೆ ದರದಲ್ಲಿ ನಿವೇಶನ ಸಿಕ್ಕರೆ ಮನೆ ಕಟ್ಟಿಕೊಳ್ಳಬೇಕು ಎಂಬ ಕನಸು ಕಟ್ಟಿಕೊಂಡ ಬಡ, ಮಧ್ಯಮ ವರ್ಗದ ಜನರಿಗೆ ಇಲ್ಲಿ ಅವಕಾಶ ಇಲ್ಲದಂತಿತ್ತು. ಬಿಡ್‌ದಾರರರು ಪ್ರತಿ ಬಾರಿ ಕೇವಲ 10 ಸಾವಿರ ರೂ. ಮಾತ್ರ ಹೆಚ್ಚಿಸಬೇಕು ಎಂದು ಷರತ್ತು ವಿಧಿಸಿದರೂ ಭಾಗಿಯಾಗಿದ್ದ ಜನ ಲಕ್ಷಗಟ್ಟಲೇ ಹೆಚ್ಚಿಸುತ್ತಿದ್ದರು. ಇದರಿಂದ 168 ಚದರ ಅಡಿಯ ನಿವೇಶನ 19.10 ಲಕ್ಷ ರೂ.ಗೆ ಮಾರಾಟವಾಯಿತು. ಕೆಲ ಬಿಡ್‌ದಾರರು ಏಕಾಏಕಿ ದರ ಹೆಚ್ಚಿಸುತ್ತಿರುವುದು ಉಳಿದವರಿಗೆ ಕಿರಿ ಕಿರಿಯಾಯಿತು. ಇದರಿಂದ ಕೆಲವರು ಆಕ್ಷೇಪ ಕೂಡ ವ್ಯಕ್ತಪಡಿಸಿದರು. ಆದರೆ, ಅಧಿಕಾರಿಗಳು ಮಾತ್ರ ಸಾರ್ವಜನಿಕರೇ ದರ ಹೆಚ್ಚಿಸುತ್ತಿದ್ದಾರೆ. ನಾವೇನು ಮಾಡಲು ಆಗುವುದಿಲ್ಲ ಎಂದು ಕೈ ಚೆಲ್ಲಿ ಕುಳಿತರು.

ಆರ್‌ಡಿಎದಿಂದ ಹಿಂದೆ ಮಾಡಿದ ಹರಾಜು ಪ್ರಕ್ರಿಯೆ ಬಡ್ಡಿ ದರ ಅಂದಾಜು ಮಾಡಿ ಈ ಬಾರಿ ನಿವೇಶನಗಳ ಬೆಲೆ ನಿಗದಿ ಮಾಡಲಾಗಿದೆ. ಕಾರ್ನರ್‌ ನಿವೇಶನಗಳ ಬೆಲೆ ಮಾತ್ರ ಹೆಚ್ಚು ಮಾಡಲಾಗಿದೆ. ನಮಗೆ ಮುಂದಿನ ಯೋಜನೆ ಕೈಗೆತ್ತಿಕೊಳ್ಳಬೇಕಾದರೆ ಆದಾಯ ಬೇಕು. ಅದಕ್ಕೆ ಬೆಲೆ ಹೆಚ್ಚಿಸಲಾಗಿದೆ. ಹರಾಜಿನಲ್ಲಿ ಬೆಲೆ ಹೆಚ್ಚು ಕೂಗಿರುವುದು ಜನರೇ. ಅಧಿಕಾರಿಗಳು ನಿರ್ವಹಣೆ ಮಾಡಿದ್ದಾರೆ. ಆದರೆ, ಏಕಾಏಕಿ ಲಕ್ಷಗಟ್ಟಲೇ ಕೂಗಿರುವುದಕ್ಕೆ ಕೆಲವರು ಆಕ್ಷೇಪ ವ್ಯಕ್ತಪಡಿಸಿದರು. ಅದಕ್ಕೆ ನಾವು ಏನು ಮಾಡಲಾಗುವುದಿಲ್ಲ. -ಜಯಪಾಲ್‌ರೆಡ್ಡಿ, ಆಯುಕ್ತರು, ಆರ್‌ಡಿಎ

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.