ಪ್ರಾದೇಶಿಕ ಸಾರಿಗೆ ಕಚೇರಿಗೆ ಶೀಘ್ರ ಕೊನೆ ಮೊಳೆ

ಎಲ್ಲ 58 ಸೇವೆಗಳನ್ನು ಆನ್‌ಲೈನ್‌ಗೊಳಿಸಲು ಸಿದ್ಧತೆ ; ಗ್ರಾಹಕರಿಗೆ ಅನುಕೂಲ ಕಲ್ಪಿಸಲು ಸರ್ಕಾರದ ಕ್ರಮ

Team Udayavani, Oct 7, 2022, 3:48 PM IST

22

ರಾಯಚೂರು: ಸಾರ್ವಜನಿಕರ ಬಹುಬೇಡಿಕೆಯ ಪ್ರಾದೇಶಿಕ ಸಾರಿಗೆ ಕಚೇರಿ ಇನ್ನು ಮುಂದೆ ಕಾಲಗರ್ಭದಲ್ಲಿ ಲೀನವಾಗುವ ಸಾಧ್ಯತೆಗಳು ದಟ್ಟವಾಗಿವೆ. ಜನರಿಗೆ ಉತ್ತಮ ಹಾಗೂ ತ್ವರಿತ ಸೇವೆ ನೀಡಬೇಕು ಎನ್ನುವ ಕಾರಣಕ್ಕೆ ಈಗಾಗಲೇ ಕೆಲವೊಂದು ಸೇವೆಗಳನ್ನು ಆನ್‌ಲೈನ್‌ಗೊಳಿಸಿರುವ ಸರ್ಕಾರ, ಶೀಘ್ರದಲ್ಲೇ ಎಲ್ಲ 58 ಸೇವೆಗಳನ್ನು ಆನ್‌ಲೈನ್‌ಗೆ ವರ್ಗಾಯಿಸಿ ಆರ್‌ಟಿಒ ಕಚೇರಿ ನಿಷ್ಕ್ರಿಯಗೊಳಿಸುವ ಚಿಂತನೆ ನಡೆಸಿದೆ.

ಸರ್ಕಾರಕ್ಕೆ ಆದಾಯ ತರುವ ಕಚೇರಿ ಇದಾಗಿತ್ತು. ವಾಹನಗಳ ನೋಂದಣಿ, ವರ್ಗಾವಣೆ, ವಾಹನಗಳ ನವೀಕರಣ, ಚಾಲನಾ ಪರವಾನಗಿ ವಿತರಣೆ ಸೇರಿದಂತೆ ನಾನಾ ಕಾರ್ಯಗಳಿಗೆ ಈ ಕಚೇರಿಗೆ ನಿತ್ಯ ನೂರಾರು ಜನ ಅಲೆಯುತ್ತಿದ್ದರು. ಆದರೆ, ಸರ್ಕಾರಕ್ಕೆ ಸಂದಾಯವಾಗುವ ಶುಲ್ಕದ ದುಪ್ಪಟ್ಟು ಹಣ ಮಧ್ಯವರ್ತಿಗಳ ಜೇಬು ಸೇರುತ್ತಿತ್ತು. ಅಲ್ಲದೇ, ವಾಹನಗಳ ತಪಾಸಣೆ ಕಾರ್ಯವನ್ನು ಇದೇ ಇಲಾಖೆ ನಿರ್ವಹಿಸಬೇಕಿತ್ತು. ಈಗಾಗಲೇ ಆರ್‌ಟಿಒ ಹಂತ ಹಂತವಾಗಿ ಆನ್‌ಲೈನ್‌ ಸೇವೆಗಳನ್ನು ಆರಂಭಿಸಿದೆ. ಬೈಕ್‌ ಮತ್ತು ಕಾರುಗಳ ನೋಂದಣಿ ಸಂಖ್ಯೆಗಳನ್ನು ವಾಹನಗಳ ಶೋರೂಂಗಳಿಗೆ ನೀಡಲಾಗಿದೆ. ಸರ್ಕಾರ ನಿಗದಿ ಮಾಡಿದ ಶುಲ್ಕ ಪಾವತಿಸಿದರೆ ಆರ್‌ಟಿಒಗೆ ಬರುವ ಅಗತ್ಯವೂ ಇಲ್ಲ. ಇದರ ಜತೆಗೆ ಚಾಲನಾ ಪರವಾನಗಿ ಪಡೆಯಲು ಆನ್‌ಲೈನ್‌ನಲ್ಲೇ ಅರ್ಜಿ ಸಲ್ಲಿಸಿ, ಅಲ್ಲೇ ಪರೀಕ್ಷೆ ನೀಡುವ ವ್ಯವಸ್ಥೆ ಜಾರಿ ಮಾಡಲಾಗಿದೆ. ವಾಹನಗಳ ವರ್ಗಾವಣೆ, ನವೀಕರಣ ಸೇರಿದಂತೆ ಎಲ್ಲವೂ ಆನ್‌ಲೈನ್‌ ಮಯವಾಗುತ್ತಿದೆ.

ಮಧ್ಯವರ್ತಿಗಳಿಗೆ ಕಂಟಕ: ಸರ್ಕಾರದ ಈ ಕ್ರಮದಿಂದ ಮುಖ್ಯವಾಗಿ ಮಧ್ಯವರ್ತಿಗಳಿಗೆ ಕಂಟಕವಾಗಿ ಪರಿಣಮಿಸಲಿದೆ. ಇಷ್ಟು ದಿನ ಹೆಜ್ಜೆ ಹೆಜ್ಜೆಗೂ ಸಾರ್ವಜನಿಕರಿಂದ ವಸೂಲಿ ಮಾಡುತ್ತಿದ್ದ ಮಧ್ಯವರ್ತಿಗಳಿಗೆ ಸರ್ಕಾರ ಹೆಡೆಮುರಿ ಕಟ್ಟುವ ಕಾಲ ಸನ್ನಿಹಿತವಾದಂತಾಗಿದೆ. ಕಚೇರಿಗಳಿಗೆ ಅಲೆದು ಅಲೆದು ಸುಸ್ತಾದರೂ ಸಿಗದ ಸೌಲಭ್ಯಗಳು ಹಣ ಕೊಟ್ಟರೆ ಒಂದೆರಡು ದಿನಗಳಿಗೆ ಸಿಗುತ್ತಿದ್ದವು. ಇನ್ನು ಮುಂದೆ ಅಂಥ ದಂಧೆಗಳಿಗೆ ಕಡಿವಾಣ ಬೀಳಲಿದ್ದು, ಜನರಿಗೆ ತ್ವರಿತ ಸಿಗಬಹುದು ಎನ್ನುವುದೇ ಸಮಾಧಾನಕರ ಸಂಗತಿ.

ಆರ್‌ಟಿಒ ಕಚೇರಿ ಕಥೆ ಏನು?

ಸರ್ಕಾರ ಎಲ್ಲ ಸೇವೆಗಳು ಆನ್‌ಲೈನ್‌ ಗೊಳಿಸಿದರೆ ಆರ್‌ಟಿಒ ಕಚೇರಿ ಸಂಪೂರ್ಣ ಕಣ್ಮರೆಯಾಗಲಿದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಮೂಡಿದೆ. ಇದಕ್ಕೆ ಆರ್‌ಟಿಒ ಸಿಬ್ಬಂದಿ ಕೂಡ ಹೌದು ಎನ್ನುತ್ತಾರೆ. ಸರ್ಕಾರ ಈಗ ಕೈಗೊಳ್ಳುತ್ತಿರುವ ಹೆಜ್ಜೆ ನಮ್ಮೆಲ್ಲರ ಕೆಲಸಗಳಿಗೆ ಕತ್ತರಿ ಹಾಕುವಂತಿದೆ. ಈಗಿರುವ ಸಿಬ್ಬಂದಿಯನ್ನು ಬೇರೆ ಇಲಾಖೆಗಳಿಗೆ ವರ್ಗಾವಣೆ ಮಾಡಿ ಅಗತ್ಯವಿರುವ ಒಂದೆರಡು ಹುದ್ದೆಗಳನ್ನು ಮಾತ್ರ ಉಳಿಸಿಕೊಳ್ಳಬಹುದು. ಅದಕ್ಕೆ ಇಷ್ಟೊಂದು ದೊಡ್ಡ ಕಚೇರಿಯ ಅಗತ್ಯವೂ ಇರಲಿಕ್ಕಿಲ್ಲ ಎನ್ನುತ್ತಾರೆ ಸಿಬ್ಬಂದಿ.

ಸಿಬ್ಬಂದಿ ಕೊರತೆಯಲ್ಲೇ ಕೆಲಸ

ಸರ್ಕಾರದ ಈ ನಿರ್ಧಾರ ಪರಿಣಾಮವೋ ಅಥವಾ ಬೇರೆ ಕಾರಣಕ್ಕೋ ಆರ್‌ಟಿಒ ಕಚೇರಿಯಲ್ಲಿ ಅಗತ್ಯವಿದ್ದರೂ ಸಿಬ್ಬಂದಿಗಳ ನೇಮಕ ಪ್ರಕ್ರಿಯೆಗೆ ಸರ್ಕಾರ ಮುಂದಾಗಿಲ್ಲ. ರಾಯಚೂರು ಆರ್‌ಟಿಒಗೆ ಯಾದಗಿರಿ ಜಿಲ್ಲೆಯ ಹೊಣೆಯನ್ನು ನೀಡಲಾಗಿದೆ. ಇನ್ನೂ ಇನ್ಸ್‌ಪೆಕ್ಟರ್‌ಗಳ ಕೊರತೆಯಿದ್ದು, ಕಚೇರಿಯಲ್ಲೂ ಕೆಲಸ ಮಾಡಬೇಕು, ಹೊರಗೆ ವಾಹನಗಳ ತಪಾಸಣೆ ಮಾಡಬೇಕಿದೆ. ಇದರಿಂದ ನಿರೀಕ್ಷಿತ ಮಟ್ಟದಲ್ಲಿ ಕೆಲಸ ಮಾಡಲು ಆಗುತ್ತಿಲ್ಲ ಎನ್ನುತ್ತಾರೆ ಸಿಬ್ಬಂದಿ.

ಈಗಾಗಲೇ ಆರ್‌ಟಿಒ ಬಹುತೇಕ ಸೇವೆಗಳನ್ನು ಆನ್‌ಲೈನ್‌ ಮಾಡಲಾಗಿದೆ. ಈಗ ಎಲ್ಲ 58 ಸೇವೆಗಳನ್ನು ಆನ್‌ಲೈನ್‌ ಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಚಿಂತನೆ ನಡೆಸಿರುವ ಮಾಹಿತಿ ಇದೆ. ಬಹುಶಃ ಹಾಗಾದರೆ ನಮ್ಮ ಕಚೇರಿಯಲ್ಲೇ ಮಾಡಲು ಕೆಲಸಗಳೇ ಇರದಂಥ ಸ್ಥಿತಿ ಬರಬಹುದು.  –ವಿನಯಾ ಕಟೋಕರ್‌, ಆರ್‌ಟಿಒ, ರಾಯಚೂರು

-ಸಿದ್ಧಯ್ಯಸ್ವಾಮಿ ಕುಕನೂರು

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.