ಪ್ರಭು ಸಂಸ್ಥಾನದಲ್ಲಿ ಧಾರ್ಮಿಕ ಕಾರ್ಯ
Team Udayavani, Dec 14, 2021, 12:06 PM IST
ಹುಮನಾಬಾದ: ದತ್ತ ಜಯಂತಿ ಹಾಗೂ ಮಾಣಿಕಪ್ರಭುಗಳ ಜಾತ್ರಾ ಮಹೋತ್ಸವ ನಿಮಿತ್ತ ಸೋಮವಾರ ತಾಲೂಕಿನ ಮಾಣಿಕನಗರದ ಪ್ರಭು ಸಂಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಜರುಗಿದವು.
ತೀರ್ಥ ಸ್ಥಾನ, ಯೋಗದಂಡ ಪೂಜೆಯೊಂದಿಗೆ ಜಾತ್ರೋತ್ಸವದ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗಿದ್ದು, ಸೋಮವಾರ ಬೆಳಗ್ಗೆ ಮಾಣಿಕಪ್ರಭುಗಳ ಸಂಜೀವಿನಿ ಸಮಾಗೆ ಸಂಸ್ಥಾನದ ಪೀಠಾಧಿಪತಿ ಡಾ| ಜ್ಞಾನರಾಜ ಮಾಣಿಕಪ್ರಭುಗಳ ನೇತೃತ್ವದಲ್ಲಿ ವಿಶೇಷ ಪೂಜೆ ಮಾಡಲಾಯಿತು.
ಈ ವೇಳೆ ಸಂಸ್ಥಾನದ ಕಾರ್ಯದರ್ಶಿಗಳಾದ ಆನಂದರಾಜ ಪ್ರಭುಗಳು, ಚೈತನ್ಯರಾಜ ಇದ್ದರು. ವಿವಿಧೆಡೆಯಿಂದ ಆಗಮಿಸಿದ ನೂರಾರು ಭಕ್ತರು ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.
ಡಿ.17ರಂದು ಗುರುಪೂಜೆ, ಡಿ.18ರಂದು ಪ್ರಭುಗಳ 204ನೇ ಜಯಂತಿ ಹಾಗೂ ದತ್ತ ಜಯಂತಿ ಆಚರಣೆ. ಡಿ.19ರಂದು ಪ್ರಭು ಸಂಗೀತ ದರ್ಬಾರ ಕಾರ್ಯಕ್ರಮ ನಡೆಯಲಿವೆ ಎಂದು ಸಂಸ್ಥಾನದ ಮುಖಂಡರು ಮಾಹಿತಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ