ಎಂಇಎಸ್ ಪುಂಡಾಟಿಕೆ ಖಂಡಿಸಿ ಪ್ರತಿಕೃತಿ ದಹನ
Team Udayavani, Dec 16, 2021, 5:30 PM IST
ಮುದಗಲ್ಲ: ಕನ್ನಡ ಬಾವುಟ ಸುಟ್ಟು ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ದುಷ್ಕತ್ಯ ಎಸಗಿದ ಶಿವಸೇನೆಯ ಮುಖ್ಯಸ್ಥ ಉದ್ಭವ ಠಾಕ್ರೆ ಹಾಗೂ ಕಾರ್ಯಕರ್ತರನ್ನು ಕೂಡಲೇ ಬಂಧಿಸಿ ಗಡಿಪಾರು ಮಾಡುವಂತೆ ಒತ್ತಾಯಿಸಿ ಪಟ್ಟಣದ ಕರುನಾಡ ವಿಜಯ ಸೇನೆ ಕಾರ್ಯಕರ್ತರು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಪೊಲೀಸ್ ಠಾಣೆ ಮುಂಭಾಗದ ರಸ್ತೆ ಮೂಲಕ ತೆರಳಿ ಬೆಳಗಾವಿ-ರಾಯಚೂರು ರಾಜ್ಯ ಹೆದ್ದಾರಿ ಮುಖ್ಯರಸ್ತೆಯಲ್ಲಿ ಉದ್ಭವ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.
ವಿಜಯ ಸೇನೆ ತಾಲೂಕು ಪ್ರಧಾನ ಕಾರ್ಯದರ್ಶಿ ರಾಘು ಕುದುರಿ ಮಾತನಾಡಿ, ಕನ್ನಡ ನಾಡು-ನುಡಿ ರಕ್ಷಣೆಗೆ ಕನ್ನಡಪರ ಸಂಘಟನೆಗಳ ಬೆಂಬಲಕ್ಕೆ ಸರಕಾರ ನಿಲ್ಲಬೇಕು. ಕನ್ನಡಿಗರ ಸ್ವಾಭಿನಮಾನಕ್ಕೆ ಧಕ್ಕೆ ತರುವ ಕೆಲಸಕ್ಕೆ ಕುಮ್ಮಕ್ಕು ನೀಡಿ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಭ್ರಷ್ಟ ಠಾಕ್ರೆಗೆ ಗಡಿಪಾರು ಮಾಡಬೇಕು. ಎಂಇಎಸ್ ಪುಂಡಾಟಿಕೆ ಹೆಚ್ಚಾಗುತ್ತಿದ್ದು ಸರಕಾರ ಇದಕ್ಕೆ ಕ್ರಮಕ್ಕೆ ಮುಂದಾಗುವಂತೆ ಆಗ್ರಹಿಸಿದರು.
ಮುದಗಲ್ಲ ಘಟಕಾಧ್ಯಕ್ಷ ಮೌನೇಶ ಚೆಲುವಾದಿ, ಗೌರವಾಧ್ಯಕ್ಷ ಸಂಗಮೇಶ ಸರಗಣಾಚಾರಿ, ಕಾರ್ಯಾಧ್ಯಕ್ಷ ಜವಾಹರಸೇಠ, ಸುಭಾಶ್ ಪಾಟೀಲ, ಮಂಜುನಾಥ ಹಡಪದ, ಬಸವರಾಜ ದೊಡ್ಡಮನಿ, ಫಾರುಕ್ ಅರಬ್, ಸಂಜೀವ್ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್