ಮುಸ್ಲಿಮರ ಹಿನ್ನಡೆಗೆ ಜನಪ್ರತಿನಿಧಿಗಳೇ ಕಾರಣ: ಉಸ್ತಾದ್
ದೇಶದ ಎಷ್ಟೋ ಜೈಲುಗಳಲ್ಲಿ ವಿಚಾರಣೆ ನಡೆಸದೆ ಮುಸ್ಲಿಮರನ್ನು ಬಂಧಿ ಮಾಡಲಾಗಿದೆ.
Team Udayavani, Feb 8, 2021, 6:11 PM IST
ರಾಯಚೂರು: ಇಂದಿಗೂ ವ್ಯವಸ್ಥೆಯೊಂದಿಗೆ ಹೋರಾಡುತ್ತಿರುವ ಮುಸ್ಲಿಮರ ಸಮಸ್ಯೆಗಳ ಬಗ್ಗೆ ಮುಸ್ಲಿಂ ಜನಪ್ರತಿನಿಧಿಗಳೇ ಧ್ವನಿ ಎತ್ತದಿರುವುದು ನಿಜಕ್ಕೂ ವಿಪರ್ಯಾಸ ಎಂದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷ ಡಾ.ರಜಾಕ್ ಉಸ್ತಾದ್ ಬೇಸರ ವ್ಯಕ್ತಪಡಿಸಿದರು.
ನಗರದ ಅತ್ತನೂರು ಪಂಕ್ಷನ್ ಹಾಲ್ ನಲ್ಲಿ ಅಂಜುಮನ್ ಎ ರಾಯಚೂರಿನಿಂದ ರವಿವಾರ ಆಯೋಜಿಸಿದ್ದ ಕರ್ನಾಟಕದಲ್ಲಿ ಮುಸ್ಲಿಮರಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸ್ಥಿತಿಗತಿ ಕುರಿತ ಸಮಾವೇಶದಲ್ಲಿ ಮಾತನಾಡಿದ ಅವರು, ಎಲ್ಲ ರಂಗದಲ್ಲೂ ಹಿಂದುಳಿದ ಮುಸ್ಲಿಮರು ನಾನಾ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಆದರೆ, ಈ ಬಗ್ಗೆ ಸ್ಥಳೀಯ ಸಂಸ್ಥೆಗಳಿಂದ ಸಂಸತ್ವರೆಗೂ ಎಲ್ಲಿಯೂ ಚರ್ಚೆ ಆಗುತ್ತಿಲ್ಲ. ಸಮುದಾಯ ಸೌಲಭ್ಯಗಳಿಲ್ಲದೇ ಹೀನ ಸ್ಥಿತಿ ಎದುರಿಸುತ್ತಿದ್ದರೂ ಇದೇ ಸಮುದಾಯದಿಂದ ಗೆದ್ದು ಬಂದವರು ಕ್ಯಾರೇ ಎನ್ನುತ್ತಿಲ್ಲ ಎಂದು ದೂರಿದರು.
ಸರ್ಕಾರಿ ಹುದ್ದೆ ಪಡೆಯುವಲ್ಲಿ ಮುಸ್ಲಿಮರ ಹಿಂದುಳಿದಿದ್ದಾರೆ. ವಿಧಾನಸಭೆಯಲ್ಲಿ ಮುಸ್ಲಿಂ ಶಾಸಕರ ಸಂಖ್ಯೆ ಕಡಿಮೆ ಇದೆ. ಇದರಿಂದ ಸಮಾಜಕ್ಕೆ ನ್ಯಾಯೋಚಿತವಾಗಿ ದಕ್ಕಬೇಕಾದ ಸೌಲಭ್ಯ, ಅನುದಾನಗಳಲ್ಲೂ ವಂಚನೆಯಾಗುತ್ತಿದೆ. ಮುಸ್ಲಿಮರ ಕಲ್ಯಾಣಕ್ಕಾಗಿ ಹಿಂದೆ ಜಾರಿ ಮಾಡಿದ್ದ ಸಮುದಾಯದ ಯೋಜನೆಗಳು ಕೂಡ ಸ್ಥಗಿತಗೊಂಡಿವೆ. ಜಾತ್ಯತೀತ ತತ್ವ ಪಾಲಿಸುವುದಾಗಿ ಹೇಳುವ ಜನನಾಯಕರು ಕೂಡ ಮುಸ್ಲಿಮರ ಸಮಸ್ಯೆಗಳ ವಿರುದ್ಧ ಧ್ವನಿ ಎತ್ತುತ್ತಿಲ್ಲ ಎಂದರು.
ಮತದಾರ ಪಟ್ಟಿಯಲ್ಲೂ ವಂಚನೆ ಮಾಡಿ ಮತಗಟ್ಟೆಗಳನ್ನು ಬದಲಿಸಲಾಗುತ್ತಿದೆ. ಇದರಿಂದ ಮುಸ್ಲಿಮರು ಹಕ್ಕು ಚಲಾಯಿಸುವಲ್ಲೂ ವಿಫಲರಾಗುತ್ತಿದ್ದಾರೆ. ಸ್ಥಳೀಯ ಸಂಸ್ಥೆಗಳಲ್ಲೂ ಅವಕಾಶ ವಂಚನೆ ಮಾಡುತ್ತಿದ್ದು, ಮುಸ್ಲಿಮರನ್ನು ರಾಜಕೀಯವಾಗಿ ತುಳಿಯುವ ಪಿತೂರಿ ನಡೆಯುತ್ತಿದೆ ಎಂದು ದೂರಿದರು.
ನವದೆಹಲಿಯ ಐಎಎಸ್- ಐಪಿಎಸ್ ತರಬೇತುದಾರ ಸಮೀರ ಅಹ್ಮದ್ ಮಾತನಾಡಿ, ಮುಸ್ಲಿಮರು ಹಿಂದುಳಿಯಲು ಮುಖ್ಯ ಕಾರಣವೇ ಅನಕ್ಷರತೆ. ದೇಶದ ಎಷ್ಟೋ ಜೈಲುಗಳಲ್ಲಿ ವಿಚಾರಣೆ ನಡೆಸದೆ ಮುಸ್ಲಿಮರನ್ನು ಬಂಧಿ ಮಾಡಲಾಗಿದೆ. ಇದನ್ನು ಕೇಳುವಷ್ಟು ಕೂಡ ಜ್ಞಾನ ಇಲ್ಲದಾಗಿದೆ. ಕಾನೂನಿನ ಬಗ್ಗೆ ಗೊತ್ತಿದ್ದರೆ ಈ ಸಮಸ್ಯೆ ಎದುರಾಗುತ್ತಿರಲಿಲ್ಲ. ಹೀಗಾಗಿ ಶಿಕ್ಷಣದಿಂದ ಮಾತ್ರ ನಮ್ಮ ಹಕ್ಕುಗಳನ್ನು ಕೇಳಿ ಪಡೆಯುವ ಶಕ್ತಿ ಬರುತ್ತದೆ ಎಂದರು.
ಮಾಜಿ ಶಾಸಕ ಸಯ್ಯದ್ ಯಾಸಿನ್, ಮುಖಂಡರಾದ ಸಮ್ಮದ್ ಸಿದ್ಧಿಖಿ, ಸೈಯದ್ ಮಹ್ಮದ್ ಯದುಲ್ಲಾ ಹುಸೇನಿ, ಬಷಿರುದ್ದೀನ್, ಮುಜಿಬುದ್ದೀನ್, ಅಬ್ದುಲ್
ಕರೀಂ, ಸಾಜಿದ್ ಸಮೀರ್, ಎಂ.ಕೆ.ಬಾಬರ್, ಅಬ್ದುಲ್ ಫಿರೋಜ್ ಸೇರಿದಂತೆ ಅನೇಕರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ
O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ