ಹಾರುಬೂದಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಆಗ್ರಹ
Team Udayavani, Dec 23, 2021, 5:03 PM IST
ರಾಯಚೂರು: ತಾಲೂಕಿನ ದೇವಸೂಗೂರಿನ ಒಂದು ಮತ್ತು 2ನೇ ಕ್ರಾಸ್ ನಿವಾಸಿಗಳು ಹಾರುಬೂದಿ ಸಮಸ್ಯೆಯಿಂದ ಬಳಲುತ್ತಿದ್ದು, ಕೂಡಲೇ ಅವರಿಗೆ ಸೂಕ್ತ ಸ್ಥಳದಲ್ಲಿ ಪುನರ್ವಸತಿ ಕಲ್ಪಿಸಿಕೊಡಬೇಕು ಎಂದು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಕಾರ್ಯಕರ್ತರು ಪ್ರತಿಭಟಿಸಿದರು.
ಈ ಕುರಿತು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಹಾರುಬೂದಿ ಹೊಂಡ ಸಮೀಪವಿದ್ದು, ಅಲ್ಲಿಂದ ನಿತ್ಯ ನೂರಾರು ವಾಹನಗಳ ಮೂಲಕ ಬೂದಿ ಸಾಗಿಸಲಾಗುತ್ತಿದೆ. ಇದರಿಂದ ಸ್ಥಳೀಯರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಸುಮಾರು 35 ರಿಂದ 42 ವರ್ಷಗಳವರೆಗೆ ಇದೇ ಪ್ರದೇಶದಲ್ಲಿ ವಾಸಿಸುತ್ತಿದ್ದಾರೆ. ಈ ಹಿಂದೆ ಹಾರುಬೂದಿಯ ತೊಂದರೆ ಇರಲಿಲ್ಲ. ಸರ್ಕಾರದ ಕಾಯ್ದೆಗಳನ್ನು ಗಾಳಿಗೆ ತೂರಿ ತೆರೆದ ಲಾರಿಗಳ ಮೂಲಕ ಹಾರು ಬೂದಿ ಸಾಗಿಸಲಾಗುತ್ತಿದೆ. ಹಾರು ಬೂದಿ ಎಲ್ಲೆಡೆ ಹರಡುತ್ತಿದ್ದು, ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿದೆ ಎಂದು ದೂರಿದರು.
ಬೂದಿ ಹೊಂಡದಲ್ಲಿ ನೀರು ಸಿಂಪಡಣೆ ಉಪಕರಣಗಳನ್ನು ಅಳವಡಿಸದ ಕಾರಣ ಬೂದಿ ಒಣಗಿದ ನಂತರ ಗಾಳಿಯಲ್ಲಿ ಹರಡುತ್ತಿದೆ. ಇದು ಗಾಳಿಯೊಂದಿಗೆ ಜನರ ದೇಹ ಸೇರುತ್ತಿದ್ದು, ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಇದರಿಂದ ಕ್ಯಾನ್ಸರ್, ಕಾಲರಾ, ಅಸ್ತಮಾ ಹೃದಯಾಘಾತ ಸೇರಿದಂತೆ ಅನೇಕ ಮಾರಕ ಕಾಯಿಲೆಗಳು ಹರಡುತ್ತಿವೆ. ಹೀಗಾಗಿ ಇಲ್ಲಿನ ಜನರನ್ನು ಕೂಡಲೇ ಸ್ಥಳಾಂತರಿಸಬೇಕು. ಬೇರೆ ಕಡೆ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧಿಕಾರಿ ಶಿವಕುಮಾರ್ ಯಾದವ್,ಕರುಣಾಕರ್ ರೆಡ್ಡಿ, ಜಿಯಾ ಉಲ್ ಹಕ್ ಸೌದಾಗರ್, ಸಿ.ಮುರಳಿ ಕೃಷ್ಣ, ಸುರೇಶ ಮಡಿವಾಳ, ಜಾಫರ್, ರಾಜಾ ಸಾಬ್, ಹೇಮರೆಡ್ಡಿ, ಇಮ್ರಾನ್, ಪರಶುರಾಮ, ನರಸಪ್ಪ, ವೆಂಕಟೇಶ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್ಶೀಟ್
Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ
Shobha, Bharathi Shetty ಹೊರತು ಬಿಎಸ್ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ
Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್ ಈಗ “ಸಂಯುಕ್ತ’
High Court ಎಚ್ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್ಗೆ ಹೈಕೋರ್ಟ್ ತಡೆ