ಪಿಂಚಣಿ ಬಿಡುಗಡೆಗೆ ಆಗ್ರಹ
Team Udayavani, Sep 24, 2019, 4:15 PM IST
ರಾಯಚೂರು: ಕಳೆದ ಎರಡು ವರ್ಷದಿಂದಲೂ ಎಸ್ಎಸ್ವೈ, ಒಎಪಿ ಹಾಗೂ ಡಿಡಬ್ಲೂಪಿ, ಪಿಎಚ್ಸಿ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ ಬಿಡುಗಡೆಯಾಗದೆ ಸಾಕಷ್ಟು ಸಮಸ್ಯೆಯಾಗಿದ್ದು, ಕೂಡಲೇ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದುಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಬಣ) ಕಾರ್ಯಕರ್ತರು ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಘೋಷಣೆ ಕೂಗಿದ ಕಾರ್ಯಕರ್ತರು, ಬಳಿಕ ಜಿಲ್ಲಾಧಿ ಕಾರಿಗೆ ಮನವಿ ಸಲ್ಲಿಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವದ ಯೋಜನೆಗಳಾದ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಒಎಪಿ ಅಂಗವಿಕಲರ ಪಿಂಚಣಿ ಯೋಜನೆಗಳಲ್ಲಿ ಸಾಕಷ್ಟು ಸಮಸ್ಯೆಯಾಗುತ್ತಿದೆ. ಎರಡು ವರ್ಷದಿಂದ ಫಲಾನುಭವಿಗಳ ಖಾತೆಗೆ ಪಿಂಚಣಿ ಹಣವೇ ಜಮಾ ಮಾಡಿಲ್ಲ. ಆದರೆ, ಇದನ್ನೇ ನಂಬಿ ಜೀವನ ದೂಡುತ್ತಿರುವವರಿಗೆ ಇದರಿಂದ ಸಾಕಷ್ಟು ಸಮಸ್ಯೆಯಗುತ್ತಿದೆ ಎಂದು ದೂರಿದರು. ಮೊದಲಾದರೆ 2-3 ತಿಂಗಳಿಗೆ ಒಮ್ಮೆಯಾದರೂ ಪಿಂಚಣಿ ಬರುತ್ತಿತ್ತು. ಆದರೆ, ಈಗ ವರ್ಷಾನುಗಟ್ಟಲೇ ಹಣ ಬಾರದಿದ್ದರೆ ಫಲಾನುಭವಿಗಳಿಗೆ ಸಾಕಷ್ಟು ಕಷ್ಟವಾಗಲಿದೆ. ಇಲ್ಲವಾದರೆ ಅವರೆಲ್ಲ ಪರಾವಲಂಬಿಗಳಾಗಬೇಕಾಗುತ್ತದೆ. ಈ ಕುರಿತು ಖಜಾನೆ ಅಧಿಕಾರಿಗಳು ಹಾಗೂ ತಹಶೀಲ್ದಾರ್ ಕಚೇರಿ ಅ ಧಿಕಾರಿಗಳನ್ನು ಕೇಳಿದರೆ ಹಾರಿಕೆ ಉತ್ತರ ನೀಡುತ್ತಾರೆ. ಸರ್ಕಾರ ಕೂಡಲೇ ಈ ಎಲ್ಲ ಯೋಜನೆಗಳ ಫಲಾನುಭವಿಗಳಿಗೆ ಪಿಂಚಣಿ ನೀಡಲು ಹಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ಖಲೀಲ್ ಪಾಷಾ, ಜಿಲ್ಲಾ ಕಾರ್ಯಾಧ್ಯಕ್ಷ ಸಂಗಮೇಶ ಮಂಗಾನವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಚಯ್ಯಸ್ವಾಮಿ, ಸದಸ್ಯರಾದ ಆನಂದ, ಹಾಜಿ, ಅಂಜಿ, ಖಾಜಾ, ಮನ್ನಾನ್, ಶಾಕೀರ, ಫಯಾಜ್, ಶಾಲಂ, ಅಸ್ಲಾಂ, ಪಾಡುರಂಗ, ಮಹೆಬೂಬ್, ಬಡೇಸಾಬ್, ಮಕೂºಲ್ ಸೇರಿ ಇತರರಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ