ಜವಳಿ ಪಾರ್ಕ್ ಸ್ಥಾಪಿಸಲು ಒತ್ತಾಯಿಸಿ ಮನವಿ
Team Udayavani, Dec 17, 2021, 4:58 PM IST
ರಾಯಚೂರು: ರಾಯಚೂರು ಅಥವಾ ಯಾದಗಿರಿ ಜಿಲ್ಲೆಯಲ್ಲಿ ಹತ್ತಿ ಹೆಚ್ಚಾಗಿ ಬೆಳೆಯುತ್ತಿದ್ದು, ಈ ಭಾಗದಲ್ಲಿ ಜವಳಿ ಪಾರ್ಕ್ ಸ್ಥಾಪಿಸಬೇಕು ಎಂದು ಎಪಿಎಂಸಿ ಮಾಜಿ ಉಪಾಧ್ಯಕ್ಷ ಬಾಬುರಾವ್ ನೇತೃತ್ವದಲ್ಲಿ ಕಾರ್ಯಕರ್ತರು ಒತ್ತಾಯಿಸಿದರು.
ಈ ಕುರಿತು ಡಿಸಿ ಮೂಲಕ ಪ್ರಧಾನಿಗೆ ಮನವಿ ಸಲ್ಲಿಸಿದರು. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳು ಅತ್ಯಂತ ಹಿಂದುಳಿದ ಜಿಲ್ಲೆಗಳೆಂದು ಪರಿಗಣಿಸಲಾಗಿದೆ. ಜಿಲ್ಲೆ ಹೆಚ್ಚು ಹತ್ತಿ ಬೆಳೆಯುವ ಪ್ರದೇಶವಾಗಿದ್ದು, ಏಷ್ಯಾದಲ್ಲಿಯೇ 2ನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ 110 ಜಿನ್ನಿಂಗ್ ಮತ್ತು ಪ್ರಸ್ಸಿಂಗ್ ಫ್ಯಾಕ್ಟರಿಗಳನ್ನು ಹೊಂದಿದೆ. ಸುಮಾರು 25 ಲಕ್ಷ ಹತ್ತಿ ಬೆಲ್ಗಳು ಸಿದ್ಧಪಡಿಸಲಾಗುತ್ತಿದೆ. ಪ್ರತಿ ವರ್ಷ 10 ಸಾವಿರ ಕೋಟಿ ಹತ್ತಿ ವ್ಯಾಪಾರ ವಹಿವಾಟು ನಡೆಯುತ್ತದೆ ಎಂದು ವಿವರಿಸಿದರು.
ಜಿಲ್ಲೆಗೆ ತೆಲಂಗಾಣ, ಆಂಧ್ರದಿಂದಲೂ ರೈತರು ಹತ್ತಿ ಮಾರಲು ತರುತ್ತಾರೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಬೇಕು. ರಾಯಚೂರು ಜಿಲ್ಲೆಯಲ್ಲಿ ಆಗದಿದ್ದ ಪಕ್ಷದಲ್ಲಿ ಯಾದಗಿರಿ ಜಿಲ್ಲೆಯ ಕಡೆ ಚೂರು ವ್ಯಾಪ್ತಿಯಲ್ಲಿ ಪಾರ್ಕ್ ಸ್ಥಾಪಿಸಬೇಕು ಎಂದು ಮನವಿ ಮಾಡಿದ್ದಾರೆ.
ಹತ್ತಿ ಮಿಲ್ಲರ್ ಅಸೋಸಿಯೇಶನ್ ಅಧ್ಯಕ್ಷ ವಿ.ಲಕ್ಷ್ಮೀ ರೆಡ್ಡಿ, ಮಹಾಂತೇಶ ರಾಂಪುರ ಇದ್ದರು.