ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿಸಲು ಆಗ್ರಹ
Team Udayavani, Feb 19, 2022, 4:23 PM IST
ದೇವದುರ್ಗ: ಸರ್ಕಾರಿ ಪಾಲಿಟಿಕ್ನಿಕ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಅರೆಕಾಲಿ ಅತಿಥಿ ಉಪನ್ಯಾಸಕರಿಗೆ ಗೌರವಧನ ಪಾವತಿ ಮಾಡಬೇಕು ಎಂದು ಆಗ್ರಹಿಸಿ ತಹಶೀಲ್ದಾರ್ ಶ್ರೀನಿವಾಸ ಚಾಪಲ್ ಅವರಿಗೆ ಉಪನ್ಯಾಸಕರು ಮನವಿ ಸಲ್ಲಿಸಿದರು.
ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಈಗಾಗಲೇ ಅನುದಾನ ಬಿಡುಗಡೆ ಆಗಿದೆ. ಗೌರವಧನ ನೀಡಲು ಪ್ರಾಚಾರ್ಯ ವಿನಾಕಾರಣ ವಿಳಂಬ ಮಾಡುತ್ತಿದ್ದಾರೆ ಎಂದು ದೂರಿದರು.
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಉಪನ್ಯಾಸಕರಿಗೆ ಒಂದಿಲ್ಲೊಂದು ಸಮಸ್ಯೆ ಮಾಡುತ್ತಿರುವ ಹಿನ್ನೆಲೆ ಬಹುತೇಕ ಉಪನ್ಯಾಸಕರು ಬೇಸತ್ತಿದ್ದಾರೆ. ಕೋವಿಡ್ ಹಿನ್ನೆಲೆ ಅತಿಥಿ ಉಪನ್ಯಾಸಕರು ಕುಟುಂಬ ನಿರ್ವಹಣೆ ಮಾಡಲು ಹಲವು ಸಮಸ್ಯೆ ಎದುರಿಸಿದ್ದಾರೆ. ಅನುದಾನ ಬಿಡುಗಡೆ ಆಗಿದ್ದು, ಪೂರ್ಣ ಬಾಕಿ ವೇತನ ಪಾವತಿ ಮಾಡದೇ ಎರಡು ತಿಂಗಳ ಗೌರವಧನ ನೀಡಿದ್ದಾರೆ. ನಿತ್ಯ ಪ್ರಾಚಾರ್ಯ ಒಂದಿಲ್ಲೊಂದು ಸಮಸ್ಯೆ ಮಾಡುತ್ತಿರುವ ಹಿನ್ನೆಲೆ ಬಹುತೇಕ ಅತಿಥಿ ಉಪನ್ಯಾಸಕರು ಬೇಸರಕ್ಕೆ ಕಾರಣವಾಗಿದೆ. ಆರೇಳು ತಿಂಗಳ ಗೌರವಧನ ಬಾಕಿ ಇದ್ದು, ಎರಡು ತಿಂಗಳ ಗೌರವಧನ ನೀಡಿದ್ದಾರೆ.
ಅತಿಥಿ ಉಪನ್ಯಾಸಕರಿಗೆ ಒಬ್ಬರಿಗೂ 86 ಸಾವಿರ ರೂ. ಗೌರವಧನ ಬರಬೇಕಿದೆ. ಗೌರವಧನ ವಿಳಂಬದಿಂದ ಬಹುತೇಕ ಉಪನ್ಯಾಸಕರು ಕುಟುಂಬ ನಿರ್ವಹಣೆ ಮಾಡಲು ಸಂಕಷ್ಟ ಪಡುವಂತಾಗಿದೆ. ಕೊಡಲೇ ಬಾಕಿ ಗೌರವಧನ ನೀಡದೇ ಇದ್ದಲ್ಲ ಪ್ರಾಚಾರ್ಯ ವಿರುದ್ಧ ಕಾನೂನು ವಿರುದ್ಧ ಹೋರಾಟ ತೀವ್ರಗೊಳಿಸಬೇಕಾಗುತ್ತದೆ ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದರು.
ಇದೇ ಸಂದರ್ಭದಲ್ಲಿ ಹೊನ್ನಪ್ಪ, ಸಿದ್ದನಗೌಡ, ಪಂಪಪಾತಿ, ಫಾತಿಮ್, ವಿರುಪಾಕ್ಷಿ ಸೇರಿ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ