ಅತಿಥಿ ಶಿಕ್ಷಕರಿಗೆ ಪರಿಹಾರ ಒದಗಿಸಲು ಆಗ್ರಹ
Team Udayavani, Jun 8, 2020, 7:29 AM IST
ಸಾಂದರ್ಭಿಕ ಚಿತ್ರ
ರಾಯಚೂರು: ಕೋವಿಡ್ ಲಾಕ್ಡೌನ್ನಿಂದ ಕಳೆದ ಮೂರು ತಿಂಗಳಿಂದ ವೇತನವಿಲ್ಲದೇ ಪರದಾಡುತ್ತಿರುವ ಅತಿಥಿ ಉಪನ್ಯಾಸಕರು, ಶಿಕ್ಷಕರು ಮತ್ತು ಅನುದಾನರಹಿತ ಶಿಕ್ಷಣ ಸಂಸ್ಥೆ ಬೋಧಕ ವರ್ಗದವರಿಗೆ ಸೂಕ್ತ ಪರಿಹಾರ ಸೌಲಭ್ಯ ಕಲ್ಪಿಸುವಂತೆ ಜಯ ಕರ್ನಾಟಕ ರಕ್ಷಣಾ ಸೇನೆ ಒತ್ತಾಯಿಸಿದೆ.
ಡಿಸಿ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ ಸಂಘಟನೆ ಸದಸ್ಯರು, ಕಳೆದ ಮೂರು ತಿಂಗಳಿಂದ ಲಾಕ್ಡೌನ್ ಜಾರಿಯಲ್ಲಿದ್ದು, ಅತಿಥಿ ಉಪನ್ಯಾಸಕರಿಗೆ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆ ಬೋಧಕರಿಗೆ ವೇತನ ಇಲ್ಲದಂತಾಗಿದೆ. ಇದರಿಂದ ಜೀವನ ನಿರ್ವಹಣೆಯೇ ಕಷ್ಟವಾಗಿ ಮಾರ್ಪಟ್ಟಿದೆ. ಕೇವಲ ಈ ವೃತ್ತಿಯನ್ನೆ ನೆಚ್ಚಿಕೊಂಡಿರುವ ಸಾವಿರಾರು ಜನರಿಗೆ ಈಗ ಆದಾಯವಿಲ್ಲದೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಾರಣ ಅತಿಥಿ ಉಪನ್ಯಾಸಕರಿಗೆ ಹಾಗೂ ಅನುದಾನರಹಿತ ಶಿಕ್ಷಣ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾಧ್ಯಕ್ಷ ರಾಘವೇಂದ್ರ, ರಾಜಶೇಖರ ಮಾಚರ್ಲ, ಎಚ್.ಕೆ.ರವಿಕುಮಾರ, ಜಿ .ಗಂಗಾಧರ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ