ಸೇವೆ ಕಾಯಂಗೆ ಆಗ್ರಹ


Team Udayavani, Jan 5, 2018, 3:18 PM IST

ray-1.jpg

ಮಸ್ಕಿ: ಸೇವೆ ಕಾಯಂ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಪಟ್ಟಣದಲ್ಲಿ ಗುರುವಾರ ಪ್ರತಿಭಟನೆ ನಡೆಸಿ ಶಾಸಕರ ಕಾರ್ಯಾಲಯಕ್ಕೆ ತೆರಳಿ ಶಾಸಕರ ಆಪ್ತ ಕಾರ್ಯದರ್ಶಿ ಮೂಲಕ ಶಾಸಕರಿಗೆ ಮನವಿ ಸಲ್ಲಿಸಿದರು.

ಪಟ್ಣಣದ ಅಶೋಕ ದೇವನಾಂಪ್ರೀಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಿಂದ ಪ್ರತಿಭಟನಾ ಮೆರವಣಿಗೆ ನಡೆಸಿದ ಅತಿಥಿ ಉಪನ್ಯಾಸಕರು, ಅಶೋಕ ವೃತ್ತ, ಪುರಸಭೆ ರಸ್ತೆ ಮೂಲಕ ಶಾಸಕರ ಕಾರ್ಯಾಲಯಕ್ಕೆ ತೆರಳಿ ಮನವಿ ಸಲ್ಲಿಸಿದರು.

ಸುಮಾರು 12 ವರ್ಷಗಳಿಂದ ರಾಜ್ಯದ 411 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 13 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಕಡಿಮೆ ವೇತನಕ್ಕೆ ಸೇವೆ ಸಲ್ಲಿಸುತ್ತ, ಸರಕಾರಿ ಪದವಿ ಕಾಲೇಜುಗಳ ಬೆನ್ನೆಲುಬಾಗಿ ನಿಂತಿದ್ದಾರೆ. ಆದರೆ ರಾಜ್ಯ ಸರಕಾರ ಅತಿಥಿ ಉಪನ್ಯಾಸಕರ ಬಗ್ಗೆ ತಾತ್ಸಾರ ಭಾವನೆ ತಾಳಿದೆ. 2017ರಲ್ಲಿ 2,160 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಸುಮಾರು ವರ್ಷಗಳಿಂದ ಪ್ರಾಮಾಣಿಕವಾಗಿ ಸೇವೆ ಮಾಡುತ್ತಿರುವ 4,320 ಅತಿಥಿ ಉಪನ್ಯಾಸಕರನ್ನು ಬೀದಿಪಾಲು ಮಾಡಿದ್ದಾರೆ. 

ದೆಹಲಿ ಸರಕಾರ, ಹರಿಯಾಣ, ಕೇಂದ್ರೀಯ ವಿಶ್ವವಿದ್ಯಾಲಯ ತ್ರಿಪುರ ಸರಕಾರಗಳು ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಲು ವಿಶೇಷ ನಿಯಮಾವಳಿ ರೂಪಿಸಿವೆ. ಆದರೆ ಕರ್ನಾಟಕ ಸರಕಾರ ಮಾತ್ರ ಮೊಂಡುತನ ಪ್ರದರ್ಶಿಸುತ್ತದೆ. ಕೇವಲ 13 ಸಾವಿರ ವೇತನ ನಿಗದಿಪಡಿಸಿ ಅತಿಥಿ ಉಪನ್ಯಾಸಕರ ಜೀವನದೊಂದಿಗೆ ಚಲ್ಲಾಟವಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶಾದ್ಯಂತ ಜೀತ ಪದ್ಧತಿ ನಿಷೇಧವಾಗಿದ್ದರೂ ಕೂಡ ಕರ್ನಾಟಕದಲ್ಲಿ ಮಾತ್ರ ಸರ್ಕಾರವೇ ಅತಿಥಿ ಉಪನ್ಯಾಸಕರನ್ನು ಜೀತದಾಳುಗಳಂತೆ ನಡೆಸಿಕೊಳ್ಳುತ್ತಿದೆ. ಸಮಾನ ಸೇವೆಗೆ ಸಮಾನ ವೇತನ ನೀಡಬೇಕೆಂಬ ಆದೇಶ ಉಲ್ಲಂಘನೆ ಸರ್ಕಾರದಿಂದಲೇ ಆಗುತ್ತಿದೆ ಎಂದು ದೂರಿದರು.

ಈ ಮೊಂಡುತನ ಬಿಟ್ಟು ರಾಜ್ಯ ಸರಕಾರದ ಆಯುಕ್ತರು ಕಾಲೇಜು ಶಿಕ್ಷಣ ಇಲಾಖೆಗೆ ಕಡತ ತರಿಸಿಕೊಂಡು, ಸಂಪುಟ ಸಭೆಯಲ್ಲಿ ಚರ್ಚಿಸಿ ಅತಿಥಿ ಉಪನ್ಯಾಸಕರ ಬಹುದಿನದ ಬೇಡಿಕೆಯಾದ ಸೇವಾ ಭದ್ರತೆ ಹಾಗೂ ಸೇವೆ ಕಾಯಂ ಮಾಡಿ ಆದೇಶ ಹೊರಡಿಸಬೇಕೆಂದು ಆಗ್ರಹಿಸಿದರು.

ಮಸ್ಕಿ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಪ್ರಭುದೇವ ಸಾಲಿಮಠ, ಉಪಾಧ್ಯಕ್ಷ ರಾಮಣ್ಣ ನಾಯಕ, ಖಜಾಂಚಿ ಚನ್ನಬಸವ, ಕಾರ್ಯದರ್ಶಿ ಸುರೇಶ ಬಳಗಾನೂರ, ಸದಸ್ಯರಾದ ಈರನಗೌಡ, ಚನ್ನನಗೌಡ, ಅರುಣಕುಮಾರ, ನಾಗೇಶ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Toravi Narasimha Temple: ಮನೆದೇವರ ದರ್ಶನ ಪಡೆದ ಸಚಿವ ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.