ಉಪ್ಪಾರನಂದಿಹಾಳ ಕೆರೆ ಪುನಶ್ಚೇತನ

• ವರುಣ ಕೃಪೆ ತೋರಿದರೆ ಕೆರೆಗೆ ನೀರು • ಫಲವತ್ತಾದ ಹೂಳು ರೈತರ ಹೊಲಕ್ಕೆ ಸಾಗಣೆ

Team Udayavani, May 21, 2019, 2:48 PM IST

raichr-tdy-03..

ಮುದಗಲ್ಲ: ಉಪ್ಪಾರನಂದಿಹಾಳ ಕೆರೆ ಹೂಳನ್ನು ಯಂತ್ರಗಳ ಮೂಲಕ ತೆರವುಗೊಳಿಸುತ್ತಿರುವುದು.

ಮುದಗಲ್ಲ: ಭಾರತೀಯ ಜೈನ ಸಂಘ, ರೈತರು ಹಾಗೂ ರಾಜ್ಯ ಸರಕಾರದ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಸಮೀಪದ ಉಪ್ಪಾರನಂದಿಹಾಳ ಕೆರೆ ಹೂಳು ತೆಗೆಯುವ ಕಾರ್ಯ ಕೊನೆ ಹಂತಕ್ಕೆ ತಲುಪಿದೆ. ಅಂದುಕೊಂಡಂತೆ ನಡೆದರೆ ಮಳೆಗಾಲದಲ್ಲಿ ಸುರಿಯುವ ಹನಿ ಹನಿ ನೀರೂ ಒಡಲಿಗೆ ಹರಿದು ಬಂದು ಸಾಗರವಾಗಲಿದೆ.

ಪಾತಾಳ ಕಂಡಿರುವ ಅಂತರ್ಜಲ ವೃದ್ಧಿಗೆ ಮುಂದಾಗಿರುವ ಭಾರತೀಯ ಜೈನ ಸಂಘ, ರೈತರ ಹಾಗೂ ರಾಜ್ಯ ಸರಕಾರ ಸಹಯೋಗದಲ್ಲಿ ಕಳೆದ ಮೂರು ತಿಂಗಳಿಂದ ಉಪ್ಪಾರನಂದಿಹಾಳ ಕೆರೆಯ ಹೂಳು ತೆರವು ಕಾಮಗಾರಿ ಕೈಗೊಂಡಿದ್ದಾರೆ. ಈಗಾಗಲೇ ಶೇ.90ರಷ್ಟು ಕಾಮಗಾರಿ ಮುಗಿದಿದ್ದು, ಇನ್ನೂ ಶೇ.10ರಷ್ಟು ಮಾತ್ರ ಹೂಳು ತೆರವುಗೊಳಿಸಬೇಕಿದೆ. ಕೆರೆಯ ಫಲವತ್ತಾದ ಮಣ್ಣನ್ನು ರೈತರು ತಮ್ಮ ಜಮೀನುಗಳಿಗೆ ಸಾಗಿಸುತ್ತಿದ್ದಾರೆ. ಕೆರೆಯ ಹೂಳನ್ನು ಜಮೀನುಗಳಿಗೆ ಹಾಕುವುದರಿಂದ ಮಣ್ಣಿನ ಫಲವತ್ತತೆ ಹೆಚ್ಚುತ್ತದೆ. ಭೂಮಿಯ ತೇವಾಂಶ ಹೆಚ್ಚುತ್ತದೆ. ಒಣಬೇಸಾಯ ಆಧಾರಿತ ಈ ಭಾಗದ ಜಮೀನುಗಳಿಗೆ ಕೆರೆಯ ಹೂಳು ಹಾಕುವುದೆಂದರೆ ಮಣ್ಣಿಗೆ ಪ್ರಕೃತಿ ಚಿಕಿತ್ಸೆ ನೀಡಿದಂತೆ ಎನ್ನುತ್ತಾರೆ ಕೃಷಿ ವಿಜ್ಞಾನಿಗಳು. ಕುಷ್ಟಗಿ ಉಪವಿಭಾಗದ ಸಣ್ಣ ನೀರಾವರಿ ಇಲಾಖೆ ವ್ಯಾಪ್ತಿಗೆ ಬರುವ ಈ ಕೆರೆಯ ಒಟ್ಟು ವಿಸ್ತಿರ್ಣ 247 ಎಕರೆಯಿಂದ ಸದ್ಯಕ್ಕೆ 47 ಎಕರೆಗೆ ಕುಗ್ಗಿದೆ. ಕೆರೆಯಿಂದ ನಿತ್ಯ ಸರಾಸರಿ 1500ರಿಂದ 2000 ಟ್ರ್ಯಾಕ್ಟರ್‌ನಷ್ಟು ಹೂಳು ತೆಗೆಯಲಾಗುತ್ತಿದೆ. ಹೂಳು ತುಂಬಲು ಭಾರತೀಯ ಜೈನ ಸಂಘ ಯಂತ್ರಗಳನ್ನು ನೀಡಿದರೇ ರಾಜ್ಯ ಸರಕಾರ ಅದಕ್ಕೆ ಇಂಧನ ವೆಚ್ಚ ಭರಿಸಿದೆ. ರೈತರು ತಮ್ಮ ಖರ್ಚಿನಲ್ಲಿ ದಿನಂಪ್ರತಿ 200 ಟ್ರ್ಯಾಕ್ಟರ್‌ ಮೂಲಕ ಹೂಳು ತಗೆದುಕೊಂಡು ಹೋಗಿ ತಮ್ಮ ಹೊಲಕ್ಕೆ ಹಾಕಿಕೊಳ್ಳುತ್ತಿದ್ದಾರೆ.

ಚಿಕ್ಕಲೆಕ್ಕಿಹಾಳ, ಹಿರೇಲಕ್ಕಿಹಾಳ, ಸಜ್ಜಲಗುಡ್ಡ, ಉಪ್ಪಾರನಂದಿಹಾಳ, ಕಿಲಾರಹಟ್ಟಿ, ಬೊಮ್ಮನಾಳ, ಕೋಮನೂರ, ಆಮದಿಹಾಳ, ಅಡವಿಬಾವಿ, ಆಶಿಹಾಳ, ಕಂಬಳಿಹಾಳ, ಕನಸಾವಿ ಸೇರಿದಂತೆ ಸುತ್ತಲಿನ ಗ್ರಾಮಗಳ ರೈತರು ತಮ್ಮ ಟ್ರ್ಯಾಕ್ಟರ್‌ಗಳ ಮೂಲಕ ಹೂಳು ತಗೆದುಕೊಂಡು ಹೋಗಿ ಹೊಲಕ್ಕೆ ಹಾಕಿದ್ದಾರೆ. ಈಗಾಗಲೇ ಕೆರೆಯಲ್ಲಿ ಸುಮಾರು 55 ಎಕರೆಯಷ್ಟು ಹೂಳು ತಗೆಯಲಾಗಿದೆ.

•ದೇವಪ್ಪ ರಾಠೊಡ

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.