ಪ್ರತ್ಯೇಕ ತರಕಾರಿ ಮಾರುಕಟ್ಟೆ ಕೂಗಿಗೆ ಬಲ


Team Udayavani, Apr 5, 2022, 5:28 PM IST

13market

ದೇವದುರ್ಗ: ಪಟ್ಟಣದಲ್ಲಿ ಮೂರ್‍ನಾಲ್ಕು ಕಡೆ ತರಕಾರಿ ಮಾರಲಾಗುತ್ತಿದ್ದು, ಒಬ್ಬರಲ್ಲಿ ಒಂದು ಸಿಕ್ಕರೆ ಮತ್ತೊಬ್ಬರಲ್ಲಿ ಮತ್ತೊಂದು ಸಿಗಲ್ಲ. ಗ್ರಾಹಕರ ಅಲೆದಾಟ ತಪ್ಪಿಲ್ಲ. ಹೀಗಾಗಿ ತರಕಾರಿ ಮಾರುವುದಕ್ಕಾಗಿಯೇ ಪ್ರತ್ಯೇಕ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎನ್ನುವ ಕೂಗು ಕೇಳಿ ಬಂದಿದೆ.

ಈಗ ಪಟ್ಟಣದ ಬಾಬು ಜಗಜೀವನರಾವ್‌ ವೃತ್ತ, ಬಸ್‌ ನಿಲ್ದಾಣ ಹಾಗೂ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘದ ಜಾಗದಲ್ಲಿ ತರಕಾರಿ ವ್ಯಾಪಾರ-ವಹಿವಾಟು ನಡೆಯುತ್ತಿದ್ದು, ಗಾಂಧಿವೃತ್ತ, ಬಸವೇಶ್ವರ ವಾರ್ಡ್‌, ಭಗತ್‌ಸಿಂಗ್‌, ಅಶೋಕ ವಾರ್ಡ್‌ ಸೇರಿದಂತೆ ಇತರೆ ವಾರ್ಡ್‌ನ ನಿವಾಸಿಗಳು ತರಕಾರಿ ಖರೀದಿಗೆ ಇಲ್ಲಿಗೇ ಬರಬೇಕು. ಪಟ್ಟಣದ ತಾಲೂಕು ವ್ಯವಸಾಯ ಉತ್ಪನ್ನ ಸಹಕಾರ ಸಂಘದ ಜಾಗದಲ್ಲಿ ಶೆಡ್‌ ಹಾಕಿಕೊಂಡು ಕೆಲ ವ್ಯಾಪರಿಗಳು ತರಕಾರಿ ವ್ಯಾಪಾರ-ವಹಿವಾಟು ನಡೆಸುತ್ತಿದ್ದಾರಾದರೂ ಇಲ್ಲಿಯೂ ಒಂದು ಸಿಕ್ಕರೆ ಸಿಕ್ಕರೆ, ಇನ್ನೊಂದು ಸಿಗಲ್ಲ. ಹೀಗಾಗಿ ಒಂದೇ ಕಡೆ ಎಲ್ಲವೂ ಸಿಗುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕೆಂಬುದು ಗ್ರಾಹಕರ ಬೇಡಿಕೆಯಾಗಿದೆ.

ಪಟ್ಟಣದಲ್ಲಿ ಮೂರ್‍ನಾಲ್ಕು ಕಡೆ ತರಕಾರಿ ಮಾರಲಾಗುತ್ತಿದೆ. ಒಬ್ಬರಲ್ಲಿ ಒಂದು ಸಿಕ್ಕರೆ, ಮತ್ತೂಬ್ಬರಲ್ಲಿ ಮತ್ತೂಂದು ಸಿಗಲ್ಲ. ಹೀಗಾಗಿ ಪಟ್ಟಣದಲ್ಲಿ ಎಲ್ಲವೂ ಒಂದೇ ಕಡೆ ಸಿಗುವ ಹಾಗೆ ಪ್ರತ್ಯೇಕ ತರಕಾರಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು ಎನ್ನುತ್ತಾರೆ ಕರವೇ ತಾಲೂಕಾಧ್ಯಕ್ಷ ಶ್ರೀನಿವಾಸ ದಾಸರ.

ಗೂಗಲ್‌ ಗ್ರಾಮದ ಕೃಷ್ಣಾನದಿಯಿಂದ ಮೀನು ತಂದು ತರುತ್ತೇವೆ. ಸೂಕ್ತ ಮಾರುಕಟ್ಟೆ ಇಲ್ಲದ ಕಾರಣ ತಾಲೂಕು ವ್ಯವಸಾಯೋತ್ಪನ್ನ ಸಹಕಾರ ಸಂಘದ ಜಾಗದಲ್ಲಿ ಮಾರುತ್ತೇವೆ. ಹೀಗಾಗಿ ಪ್ರತ್ಯೇಕ ಮಾರುಕಟ್ಟೆ ನಿರ್ಮಿಸಬೇಕು ಎನ್ನುತ್ತಾರೆ ಮೀನುಗಾರ ಚಂದಪ್ಪ.

ಅಶೋಕ ವಾರ್ಡ್‌ ಖಾಸಗಿ ವ್ಯಕ್ತಿಯೊಬ್ಬರ ನಿವೇಶನದಲ್ಲಿ ತರಕಾರಿ ಮಾರಲು ಮಳಿಗೆಗಳು ನಿರ್ಮಿಸಲಾಗಿತ್ತು. ಆ ಮಳಿಗೆಗಳ ಬಗ್ಗೆ ಸಂಬಂಧಪಟ್ಟವರಿಂದ ಮಾಹಿತಿ ಪಡೆದು ಕ್ರಮ ವಹಿಸಲಾಗುತ್ತದೆ. -ಸಾಬಣ್ಣ ಮಸರಕಲ್‌, ಪುರಸಭೆ ಮುಖ್ಯಾಧಿಕಾರಿ

ಅಶೋಕ ವಾರ್ಡ್‌ನಲ್ಲಿ ನಿರ್ಮಿಸಲಾದ ತರಕಾರಿ ಮಳಿಗೆಗಳು ಕುಡಿವ ನೀರು, ವಿದ್ಯುತ್‌ ಸೇರಿ ಅಗತ್ಯ ಮೂಲಸೌಲಭ್ಯ ಕಲ್ಪಿಸಿ ವ್ಯಾಪಾರಸ್ಥರಿಗೆ ಅನುಕೂಲ ಕಲ್ಪಿಸಬೇಕು. ಮಳಿಗೆಗಳ ಸಮಸ್ಯೆ ಕುರಿತು ಅಧಿಕಾರಿಗಳು ಗಮನ ಹರಿಸಬೇಕು. -ಎಚ್‌.ಶಿವರಾಜ, ಕಸಾಪ ಮಾಜಿ ಅಧ್ಯಕ್ಷ

ಪಟ್ಟಣದ ಹೃದಯ ಭಾಗದಲ್ಲಿ ಪುರಸಭೆ ಖಾಲಿ ನಿವೇಶನ ಲಭ್ಯವಿದ್ದರೆ ಪ್ರತ್ಯೇಕ ತರಕಾರಿ ಮಾರುಕಟ್ಟೆ ನಿರ್ಮಿಸಿದರೆ ಗ್ರಾಹಕರಿಗೆ ಅನುಕೂಲವಾಗುತ್ತದೆ. ಕಿಮೀ ಅಲೆದು ತರಕಾರಿ ತರುವ ಸ್ಥಿತಿ ತಪ್ಪುತ್ತದೆ. ಒಂದೇ ಕಡೆ ಎಲ್ಲ ಸೌಲಭ್ಯ ಸಿಕ್ಕಂತಾಗುತ್ತದೆ. -ಶಾಂತಕುಮಾರ ಹೊನ್ನಟಗಿ, ಎಂಆರ್‌ಎಚ್‌ಎಸ್‌ ತಾಲೂಕಾಧ್ಯಕ್ಷ.

ಕಟ್ಟರಕಟ್ಟಿಯಲ್ಲಿ ತರಕಾರಿ ಮಾರಲಾಗುತ್ತದೆ. ಇಲ್ಲಿ ಒಂದು ಸಿಕ್ಕರೆ ಮತ್ತೂಂದು ಸಿಗಲ್ಲ. ಅಗತ್ಯ ಬಿದ್ದಲ್ಲಿ ಬಸ್‌ ನಿಲ್ದಾಣ, ಬಾಬು ಜಗಜೀವನರಾಮ್‌ ವೃತ್ತ, ಸಹಕಾರಿ ಸಂಘದ ಜಾಗದಲ್ಲಿ ಮಾರುವ ತರಕಾರಿ ಅಂಗಡಿಗಳಿಗೆ ಅಲೆಯಬೇಕಿದೆ. -ಅಮೃತಾ ಪಾಟೀಲ್‌, ಕರವೇ ಮಹಿಳಾ ಘಟಕ ಅಧ್ಯಕ್ಷೆ

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.