ಹದಗೆಟ್ಟ ಹತ್ತಾರು ಹಳ್ಳಿಗಳ ಸಂಪರ್ಕ ರಸ್ತೆ


Team Udayavani, Jan 3, 2022, 3:22 PM IST

24road

ದೇವದುರ್ಗ: ಪಟ್ಟಣದ ಬೆಟ್ಟದ ಶಂಭುಲಿಂಗೇಶ್ವರ ಮಾರ್ಗವಾಗಿ ಹತ್ತಾರು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ತೀರಾ ಹದಗೆಟ್ಟು ಹೋಗಿದೆ. ಆರೇಳು ವರ್ಷ ಕಳೆದರೂ ಡಾಂಬರ್‌ ರಸ್ತೆ ಮಾಡುವುದಿರಲ್ಲಿ ಕನಿಷ್ಟ ಪಕ್ಷ ದುರಸ್ತಿಗೂ ಮುಂದಾಗುತ್ತಿಲ್ಲ.

ಎಲ್ಲೆಂದರಲ್ಲಿ ತಗ್ಗುಗುಂಡಿಗಳು ಬಿದ್ದಿವೆ. ಶಾಲೆಗಳಿಗೆ ತಡವಾಗಿ ಹೋಗುವ ಶಿಕ್ಷಕರು ಹಿಡಿಶಾಪ ಹಾಕುವಂತಾಗಿದೆ. ರಸ್ತೆ ಮಧ್ಯೆ ಎಲ್ಲೆಂದರಲ್ಲಿ ಬಿದ್ದಿರುವ ತಗ್ಗುಗಳಿಗೆ ತಾತ್ಕಾಲಿಕವಾದರೂ ಮರಂ ಹಾಕಿ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಲು ಅಧಿಕಾರಿಗಳಿಗೆ ಪುರುಸೊತ್ತಿಲ್ಲ. ಬೈಕ್‌, ಟಂಟಂ ವಾಹನಗಳ ಚಾಲಕರು ಎದ್ದು ಬಿದ್ದು, ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಬೆಟ್ಟದ ಶಂಭುಲಿಂಗೇಶ್ವರ ಮಾರ್ಗದಿಂದ ತಳವಾರದೊಡ್ಡಿ, ಕೋತ್ತಿಗುಡ್ಡ, ಹೇಮನೂರು, ಮರಿಗೆಮ್ಮದಿಬ್ಬಿ ತಾಂಡಾ, ಎಚ್‌.ತಾಂಡಾ, ತುಗ್ಲೇರದೊಡ್ಡಿ, ಮಾನಸಗಲ್‌, ಕೆ.ಇರಬಗೇರಾ ಸೇರಿದಂತೆ ಇತರೆ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಈ ರಸ್ತೆ ಚಾಲಕರನ್ನು ಜೀವ ಹಿಂಡುತ್ತಿದೆ. ದಿನಕ್ಕೊಬ್ಬರಾದರೂ ಬೈಕ್‌ ಸವಾರರು ಬಿದ್ದು ಗಾಯ ಮಾಡಿಕೊಳ್ಳುತ್ತಿರುವ ಘಟನೆಗಳು ನಡೆಯುತ್ತಲೇ ಇವೆ.

ರಸ್ತೆಯಲ್ಲಿ ಅಲ್ಲಲ್ಲಿ ಡಾಂಬರ್‌ ಕಿತ್ತಿ ಜಲ್ಲಿಕಲ್ಲುಗಳು ಹೊರ ಬಂದಿವೆ. ಭಾರವಾದ ವಾಹನಗಳ ಓಡಾಟದಿಂದ ಸಣ್ಣಪುಟ್ಟ ಇದ್ದ ತಗ್ಗು ಗುಂಡಿಗಳು ದೊಡ್ಡಮಟ್ಟದಲ್ಲಿವೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕಣ್ಣು ಮುಚ್ಚಿದ್ದಾರೆ.

ತಿರುವು ಅಪಘಾತ

ಒಂದೆಡೆ ತೀರಾ ಹದಗೆಟ್ಟಿರುವ ರಸ್ತೆ, ಮತ್ತೂಂದೆಡೆ ತಿರುವು ರಸ್ತೆಯಲ್ಲಿ ಅಪಘಾತ ಎಚ್ಚರಿಕೆ ನಾಮಫಲಕವಿಲ್ಲ. ಹೀಗಾಗಿ ಬೈಕ್‌ ಸವಾರರು ಪ್ರಾಣವನ್ನು ಗಟ್ಟಿಯಾಗಿ ಹಿಡಿದುಕೊಂಡು ಸಂಚರಿಸುವಂತಹ ಸ್ಥಿತಿ ಇದೆ. ಬೆಟ್ಟದಿಂದ ತರವಾಳದೊಡ್ಡಿಗೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲೇ ತಿರುವು ಇದ್ದುದರಿಂದ ನೋಡಿಕೊಂಡು ಚಲಿಸಬೇಕು. ವೇಗವಾಗಿ ಬಂದಲ್ಲಿ ಅಪಘಾತ ತಪ್ಪಿದ್ದಲ್ಲ.

ರಸ್ತೆ ಪಕ್ಕ ರಾರಾಜಿಸುವ ಜಾಲಿಮರಗಳು

ಕೋತ್ತಿಗುಡ್ಡ, ಹೇಮನೂರು, ಕೋತ್ತದೊಡ್ಡಿ ಸೇರಿ ಇತರೆ ಗ್ರಾಮಕ್ಕೆ ಸಂಕರ್ಪ ರಸ್ತೆ ಪಕ್ಕದಲ್ಲಿ ಜಾಲಿಮರಗಳು ರಾರಾಜಿಸುತ್ತಿವೆ. ಟಂಟಂ ವಾಹನ ಬಂದರೆ ಬೈಕ್‌ ಸವಾರರು ಕೈಯಿಗೆ, ಕಾಲಿಗೆ ಮುಳ್ಳು ಚುಚ್ಚಿಸಿಕೊಳ್ಳುವುದು ಗ್ಯಾರಂಟಿ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಇಂತಹ ರಸ್ತೆಯನ್ನು ಕಂಡೂ ಕಾಣದಂತಿದ್ದಾರೆ. ಪ್ರತಿ ವರ್ಷ ಮಾರ್ಚ್‌ನಲ್ಲಿ ನಿರ್ವಹಣೆಗೆ ಲಕ್ಷಾಂತರ ರೂ. ಅನುದಾನ ವ್ಯಯ ಮಾಡಲಾಗುತ್ತಿದೆಯಾದರೂ ದುರಸ್ತಿ ದೂರದ ಮಾತಾಗಿದೆ. ಕೋವಿಡ್‌ ನೆಪವೊಡ್ಡಿ ಹಿಂದೇಟು ಹಾಕಲಾಗಿದೆ. ಇಲ್ಲಿನ ಸಮಸ್ಯೆ ಕುರಿತು ಗ್ರಾಮಸ್ಥರು ಮೌಖೀಕವಾಗಿಯೂ ಅಧಿಕಾರಿಗಳ ಗಮನಕ್ಕೆ ತಂದಿದ್ದಾರೆ ಆದರೆ ಇಲ್ಲಿಯವರೆಗೆ ಯಾವುದೇ ಕ್ರಮ ವಹಿಸಿಲ್ಲ.

ಬೆಟ್ಟದ ಶಂಭುಲಿಂಗೇಶ್ವರ ಮಾರ್ಗವಾಗಿ ಹಲವು ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ತೀರ ಹದಗೆಟ್ಟಿದೆ. ತಿರುವು ರಸ್ತೆಯಲ್ಲಿ ಎಚ್ಚರಿಕೆ ನಾಮಫಲಕವಿಲ್ಲ. ಬೆಳೆದ ಜಾಲಿಗಿಡಗಳು ನಡುರಸ್ತೆಗೆ ಬಾಗಿ ಸ್ವಾಗತಿಸುವಂತಿವೆ. ಜಂಗಲ್‌ ಕಟ್ಟಿಂಗ್‌ ಮಾಡದೇ ಇದ್ದುದರಿಂದ ಸಮಸ್ಯೆ ಹೆಚ್ಚಿದೆ. -ಶ್ರೀನಿವಾಸ ದಾಸರ, ಕರವೇ ತಾಲೂಕಾಧ್ಯಕ್ಷ

ಹದಗೆಟ್ಟ ರಸ್ತೆ ಕುರಿತು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ವಹಿಸುತ್ತೇನೆ. ಕಳೆದ ವರ್ಷ ಮಾರ್ಚ್‌ ಅವಧಿಯಲ್ಲಿ ಕೆಲವು ಕಡೆ ಜಂಗಲ್‌ ಕಟ್ಟಿಂಗ್‌ ಮಾಡಲಾಗಿದೆ. ಕೋವಿಡ್‌ ಹಿನ್ನೆಲೆ ಅನುದಾನ ಕೊರತೆ ಇದೆ. -ನೂಸರತ್‌ ಅಲಿ, ಎಇಇ, ಪಿಡಬ್ಲೂಡಿ ಇಲಾಖೆ

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.