ಗಣೇಕಲ್‌ ಜಲಾಶಯಕ್ಕೆ ನೀರು ಹರಿಸಲು ಆಗ್ರಹಿಸಿ ರಸ್ತೆತಡೆ

ಬೇಸಿಗೆ ಬೆಳೆ ನೀರು ಬಳಸಿಕೊಳ್ಳಲು ಗೇಜ್‌ ನಿರ್ವಹಣೆ ಸಮರ್ಪಕವಾಗಿ ಮಾಡುತ್ತಿಲ್ಲ.

Team Udayavani, Apr 19, 2021, 6:41 PM IST

Ganekal

ರಾಯಚೂರು: ಬೇಸಿಗೆಯಲ್ಲಿ ಕುಡಿವ ನೀರು ಪೂರೈಸುವ ಉದ್ದೇಶದಿಂದ ಗಣೇಕಲ್‌ ಜಲಾಶಯಕ್ಕೆ ಹರಿಸುತ್ತಿರುವ ನೀರು ದುರ್ಬಳಕೆ ಆಗುತ್ತಿದ್ದು, ಕೂಡಲೇ ಕಡಿವಾಣ ಹಾಕಿ ಜಲಾಶಯ ತುಂಬಿಸುವಂತೆ ಆಗ್ರಹಿಸಿ ನಗರಸಭೆ ಸದಸ್ಯರು ರವಿವಾರ ಸಾತ್‌ ಮೈಲ್‌ ಕ್ರಾಸ್‌ ಹತ್ತಿರ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಬೇಸಿಗೆಯಲ್ಲಿ ನಗರ ಪ್ರದೇಶದ ನಿವಾಸಿಗಳಿಗೆ ನೀರಿನ ಸಮಸ್ಯೆ ಆಗದಂತೆ ತಡೆಯುವ ಉದ್ದೇಶದಿಂದ ಟಿಎಲ್‌ಬಿಸಿ ಮೂಲಕ ಗಣೇಕಲ್‌ ಜಲಾಶಯಕ್ಕೆ ನೀರು ಹರಿಸಲಾಗುತ್ತಿದೆ. ಆದರೆ, ನಿಷೇಧಾಜ್ಞೆ ಜಾರಿಗೊಳಿಸಿ ಕಾಲುವೆ ಮೂಲಕ ನೀರು ಹರಿಸುತ್ತಿದ್ದರೂ ಬೇಸಿಗೆ ಬೆಳೆಗಾಗಿ ನೀರು ಬಳಸಿಕೊಳ್ಳುತ್ತಿರುವುದು ಖಂಡನೀಯ. ಬೇಸಿಗೆ ಬೆಳೆ ನೀರು ಬಳಸಿಕೊಳ್ಳಲು ಗೇಜ್‌ ನಿರ್ವಹಣೆ ಸಮರ್ಪಕವಾಗಿ ಮಾಡುತ್ತಿಲ್ಲ. ಈಗಾಗಲೇ 3.5 ಮೀಟರ್‌ ನೀರಿದ್ದು, ಇನ್ನೂ ಒಂದು ಮೀಟರ್‌ ಹರಿಸಬೇಕಿದೆ. ಒಂದು ಕೆರೆ ಭರ್ತಿಯಾಗದಿದ್ದಲ್ಲಿ ಬೇಸಿಗೆ ವೇಳೆ ಕುಡಿಯುವ ನೀರಿಗೆ ಪರಿತಪಿಸಬೇಕಾಗುತ್ತದೆ.

ಈಗಾಗಲೇ ನಗರದಲ್ಲಿ ಎರಡು ದಿನಕ್ಕೊಮ್ಮೆ ನೀರು ಹರಿಸಲಾಗುತ್ತಿದೆ. ಈ ಕುರಿತು ಜಿಲ್ಲಾಧಿಕಾರಿ ಸೇರಿದಂತೆ ನೀರಾವರಿ ನಿಗಮದ ಅಧಿಕಾರಿಗಳಿಗೆ ಸಮಸ್ಯೆ ಕುರಿತು ಮನವರಿಕೆ ಮಾಡಿಕೊಡಲಾಗಿದೆ. ಆದರೂ ಯಾವುದೇ ಕ್ರಮ ಜರುಗಿಸಿಲ್ಲ ಎಂದು ದೂರಿದರು. ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ನಿಗಮದ ಎಇಇ ವಿದ್ಯಾಸಾಗರ ಪ್ರತಿಭಟನಾಕಾರರ ಜತೆಗೆ ಮಾತನಾಡಿದರು. ಇಂದಿನಿಂದಲೇ ಗಣೇಕಲ್‌ ಜಲಾಶಯಕ್ಕೆ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು. ಕಾಲುವೆಯಲ್ಲಿ ನೀರು ಹರಿದು ಬರುತ್ತಿದ್ದು, ಗೇಜ್‌ ನಿರ್ವಹಣೆಗೆ ನಿರ್ದೇಶನ ನೀಡಲಾಗುವುದು. ಮೇಲಧಿಕಾರಿಗಳಿಗೆ ಈಗಾಗಲೇ ಸಮಸ್ಯೆ ಕುರಿತು ವಿವರಿಸಲಾಗಿದೆ ಎಂದು ತಿಳಿಸಿದರು.

ನಗರಸಭೆ ಸದಸ್ಯ ಈ.ವಿನಯಕುಮಾರ್‌, ನಗರಸಭೆ ಸದಸ್ಯರಾದ ಜಿಂದಪ್ಪ, ಎನ್‌. ಕೆ.ನಾಗರಾಜ್‌, ತಿಮ್ಮಪ್ಪ ನಾಯಕ, ವೀರೇಶ, ಯು.ದೊಡ್ಡಮಲ್ಲೇಶಪ್ಪ, ರವೀಂದ್ರ ಜಲ್ದಾರ್‌, ಕಡಗೋಳ ಆಂಜನೇಯ, ನರಸಿಂಹಲು ಮಾಡಗಿರಿ ಸೇರಿದಂತೆ ಅನೇಕರು ಇದ್ದರು. ಪ್ರತಿಭಟನೆಯಿಂದಾಗಿ ಕೆಲ ಕಾಲ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.