ಆರ್ಟಿಪಿಎಸ್ 2ನೇ ಘಟಕ ಪುನಾರಂಭ
Team Udayavani, Feb 16, 2018, 6:25 AM IST
ರಾಯಚೂರು: ಆಧುನೀಕರಣ ನಿಮಿತ್ತ ದುರಸ್ತಿಗೊಂಡಿದ್ದ ರಾಯಚೂರು ಶಾಖೋತ್ಪನ್ನ ಕೇಂದ್ರದ ಎರಡನೇ ಘಟಕ ಗುರುವಾರ ಪುನಾರಂಭಗೊಂಡಿದೆ.
35 ಕೋಟಿ ರೂ. ವೆಚ್ಚದಲ್ಲಿ ಘಟಕ ಆಧುನೀಕರಣಗೊಳಿಸಲಾಗಿದೆ. 25 ವರ್ಷಗಳಷ್ಟು ಹಳೆಯ ಘಟಕ ಇದಾಗಿದ್ದು, ವಿದ್ಯುತ್ ಉತ್ಪಾದನೆಯಲ್ಲಿ ತಾಂತ್ರಿಕ ಸಮಸ್ಯೆ ಎದುರಿಸುತ್ತಿತ್ತು.
210 ಮೆಗಾವ್ಯಾಟ್ ಉತ್ಪಾದನಾ ಸಾಮರ್ಥ್ಯ ಹೊಂದಿದ ಘಟಕ ಸಾಕಷ್ಟು ತೊಂದರೆಗೆ ತುತ್ತಾಗುತ್ತಿತ್ತು. ಆದರೆ, ನಿರೀಕ್ಷಿತ ಮಟ್ಟದಲ್ಲಿ ವಿದ್ಯುತ್ ಉತ್ಪಾದಿಸದ ಹಿನ್ನೆಲೆಯಲ್ಲಿ 156 ದಿನಗಳ ಹಿಂದೆ ಆಧುನೀಕರಣ ಕೆಲಸ ಕೈಗೊಳ್ಳಲಾಗಿತ್ತು. ಈಗ ಅಗತ್ಯ ವಸ್ತುಗಳನ್ನು ಬದಲಿಸಲಾಗಿದೆ. ಆಧುನಿಕ ತಂತ್ರಜ್ಞಾನದಿಂದ ತಯಾರಿಸಿದ ಕೆಲ ಯಂತ್ರಗಳನ್ನು ಅಳವಡಿಸಲಾಗಿದೆ. ಈ ಹಿಂದೆ ಘಟಕವನ್ನು ಮಾನವ ಸಂಪನ್ಮೂಲದಿಂದ ನಿರ್ವಹಣೆ ಮಾಡಲಾಗುತ್ತಿತ್ತು. ಈಗ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ್ದು, ಕಂಪ್ಯೂಟರ್ ಮೂಲಕವೇ ನಿಯಂತ್ರಿಸಬಹುದಾಗಿದೆ. ಇನ್ನು ಮುಂದಿನ 15 ವರ್ಷಗಳವರೆಗೆ ಘಟಕ ಸುಗಮವಾಗಿ ವಿದ್ಯುತ್ ಉತ್ಪಾದಿಸಬಹುದು. ಮೊದಲನೇ ಘಟಕವನ್ನು 2013ರಲ್ಲೇ ಆಧುನೀಕರಣಗೊಳಿಸಲಾಗಿತ್ತು ಎಂದು ಆರ್ಟಿಪಿಎಸ್ ವ್ಯವಸ್ಥಾಪಕ ನಿರ್ದೇಶಕ ಆರ್.
ವೇಣುಗೋಪಾಲ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…