ಶಾಖೋತ್ಪನ್ನ ವಿದ್ಯುತ್ ಕೇಂದ್ರದ ನೌಕರನ ಪುತ್ರನಿಗೆ ಸೋಂಕು: ಕೇಂದ್ರದಲ್ಲಿ ಆತಂಕದ ವಾತಾವರಣ
Team Udayavani, Jul 4, 2020, 2:09 PM IST
ರಾಯಚೂರು: ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದ ನೌಕರನ ಪುತ್ರನಿಗೂ ಕೋವಿಡ್-19 ಸೋಂಕು ದೃಢಪಟ್ಟಿದೆ. ಇದರಿಂದ ಕೇಂದ್ರದಲ್ಲಿ ಆತಂಕದ ವಾತಾವರಣ ಮನೆ ಮಾಡಿದೆ.
ರೋಗದ ಲಕ್ಷಣಗಳು ಇರುವ ಕಾರಣ ಶಕ್ತಿನಗರದ ಕೆಪಿಸಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ತೆರಳಿದ್ದರು. ಆಗ ಕೋವಿಡ್ 19 ಪರೀಕ್ಷೆ ಮಾಡಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ. ಇದರಿಂದ ಆರ್ ಟಿಪಿಎಸ್ ನೌಕರ ಸೇರಿದಂತೆ ಕುಟುಂಬ ಸದಸ್ಯರನ್ನು ಹೋಮ್ ಕ್ವಾರಂಟೈನ್ ಮಾಡಲಾಗಿದೆ.
ಕೆಪಿಸಿ ಆಸ್ಪತ್ರೆಯನ್ನು ಸೀಲ್ ಡೌನ್ ಮಾಡಿದ್ದು ಸ್ಯಾನಿಟೈಸೇಶನ್ ಕೆಲಸ ಮುಂದುವರಿಸಲಾಗಿದೆ. ಸೋಂಕಿತನನ್ನು ಐಸೊಲೇಸನ್ ಮಾಡಲಾಗಿದ್ದು, ಪ್ರಾಥಮಿಕ ಸಂಪರ್ಕ ಪತ್ತೆ ಕಾರ್ಯ ಮುಂದುವರಿಸಲಾಗಿದೆ ಎಂದು ಡಿಎಚ್ ಒ ಡಾ.ರಾಮಕೃಷ್ಣ ತಿಳಿಸಿದ್ದಾರೆ.
ಇನ್ನು ಕೋವಿಡ್-19 ಸೋಂಕಿತ ವ್ಯಕ್ತಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಓಡಾಡಿರುವ ಹಿನ್ನೆಲೆಯಲ್ಲಿ ಸಿಇಒ ಕಚೇರಿ ಸೇರಿದಂತೆ ಇತರೆಡೆ ಸ್ಯಾನಿಟೈಸೇಶನ್ ಮಾಡಲಾಗಿದೆ. ಡಿಎಚ್ ಒ ವಾಸಿಸುವ ಮನೆ ಹತ್ತಿರವೂ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.