ಸದಾಶಿವ ವರದಿ ಜಾರಿಗೆ ಆಗ್ರಹ


Team Udayavani, Jan 12, 2018, 2:04 PM IST

ray-1.jpg

ರಾಯಚೂರು: ದಲಿತ ಸಮುದಾಯಗಳ ಅನೇಕ ವರ್ಷಗಳ ಬೇಡಿಕೆಯಾದ ನ್ಯಾ| ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಆಗ್ರಹಿಸಿ ಅನೇಕ ದಲಿತಪರ ಸಂಘಟನೆಗಳು ಒಗ್ಗೂಡಿ ಗುರುವಾರ ಜೈಲು ಭರೋ ಚಳವಳಿ ನಡೆಸಿದವು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆ ಮಾಡಿದರು.

ನಗರದ ಡಾ| ಅಂಬೇಡ್ಕರ್‌ ವೃತ್ತದಲ್ಲಿ ಜಮಾಯಿಸಿದ ಮುಖಂಡರು, ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಬಸವೇಶ್ವರ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ
ಅಲ್ಲಿ ರಸ್ತೆತಡೆ ನಡೆಸಿದರು.

ಈ ವೇಳೆ ಮಾತನಾಡಿದ ಮುಖಂಡರು, ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ನ್ಯಾ| ಸದಾಶಿವ ಆಯೋಗ ರಚಿಸಲಾಗಿತ್ತು. ಸರ್ಕಾರಕ್ಕೆ ವರದಿಯಲ್ಲಿ ಏನಿದೆ ಎಂಬ ವಿಚಾರ ಗೊತ್ತಿದೆ. ಆದರೂ ಬಹುಜನರ ಹಿತ ಕಾಯಬೇಕಾದ ಸರ್ಕಾರವೇ ಹೀಗೆ ಮೀನಮೇಷ ಎಣಿಸುತ್ತಿದೆ. 

ವರದಿ ಜಾರಿಗಾಗಿ ಹಲವು ದಶಕಗಳಿಂದ ಹೋರಾಡುತ್ತಲೇ ಇದ್ದೇವೆ. ಇಷ್ಟು ದಿನ ಮಾದಿಗ ಛಲವಾದಿ ಎಂಬ ಪ್ರತ್ಯೇಕತೆ ಇತ್ತು. ಅದನ್ನೇ ನೆಪ ಮಾಡಿಕೊಂಡು ಸರ್ಕಾರ ವರದಿ ಜಾರಿಗೆ ಹಿಂದೇಟು ಹಾಕುತ್ತಿತ್ತು. ಆದರೆ, ನಾವೆಲ್ಲ ಒಟ್ಟಾಗಿ ಹೋರಾಟಕ್ಕೆ ಧುಮುಕಿದ್ದೇವೆ. ಈಗಾಗಲೇ ದಲಿತ ನಾಯಕರು ಕೂಡಲ ಸಂಗಮದಿಂದ ಬೆಂಗಳೂರುರೆಗೆ ಪಾದಯಾತ್ರೆ ನಡೆಸಿದ್ದರು. ಸಿಎಂ ಸಿದ್ದರಾಮಯ್ಯ ಜ.13 ರೊಳಗೆ ಬೇಡಿಕೆ ಈಡೇರಿಸುವುದಾಗಿ ಭರವಸೆ ನೀಡಿದ್ದರು. ಸರ್ಕಾರಕ್ಕೆ ಮತ್ತೂಮ್ಮೆ ಎಚ್ಚರಿಸುವ ಉದ್ದೇಶದಿಂದಲೇ ರಾಜ್ಯಾದ್ಯಂತ ಜೈಲು ಭರೋ ಚಳವಳಿ ನಡೆಸಲಾಗಿದೆ ಎಂದು ಹೇಳಿದರು.

ಎಸ್ಸಿ ಸಮಾಜಗಳಿಗೆ ಒಳಮೀಸಲಾತಿ ಜಾರಿಗೊಳಿಸುವ ವಿಚಾರದಲ್ಲಿ ಮಾಲ ಮತ್ತು ಮಾದಿಗ ಜನಾಂಗವು ಒಮ್ಮತದ
ತೀರ್ಮಾನಕ್ಕೆ ಬಂದಿದೆ. ಎರಡೂ ಸಮಾಜಗಳ ಮುಖಂಡರು, ವಿವಿಧ ಸಂಘಟನೆಗಳು ಒಟ್ಟಾಗಿ ವರದಿ ಜಾರಿ ಮಾಡುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗಿದೆ. ವರದಿ ಜಾರಿಗೆ ಸರ್ಕಾರ ಗಡುವು ನೀಡಿದ್ದು, ನಿಗದಿತ ವೇಳೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರಕ್ಕೆ ಶಿಫಾರಸು ಮಾಡಬೇಕು ಎಂದು ಆಗ್ರಹಿಸಿದರು.

ಬಳಿಕ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ಪೊಲೀಸ್‌ ವಾಹನಗಳಲ್ಲಿ ಕರೆದುಕೊಂಡು ಹೋಗಿ ನಂತರ
ಬಿಡುಗಡೆಗೊಳಿಸಿದರು. ದಲಿತ ಮುಖಂಡ ಎಂ.ವಿರುಪಾಕ್ಷಿ, ರವೀಂದ್ರನಾಥ ಪಟ್ಟಿ, ಎಂ.ಆರ್‌.ಭೇರಿ, ರವೀಂದ್ರ ಜಲ್ದಾರ್‌, ಅಂಬಣ್ಣ ಅರೋಲಿಕರ್‌, ಕೆ.ಪಿ.ಅನಿಲಕುಮಾರ, ವಿಶ್ವನಾಥ ಪಟ್ಟಿ, ಎಸ್‌.ರಾಜು, ನರಸಪ್ಪ ದಂಡೋರ, ಭಾಸ್ಕರ, ಎಂ.ಈರಣ್ಣ ಸೇರಿ ಅನೇಕರನ್ನು ಪೊಲೀಸರು ಬಂಧಿಸಿದರು.

ಟ್ರಾಫಿಕ್‌ ಜಾಮ್‌: ಬಸವೇಶ್ವರ ವೃತ್ತದಲ್ಲಿ ಹೋರಾಟ ನಡೆಸಿದ್ದರಿಂದ ಎಲ್ಲ ಭಾಗಗಳಿಂದ ಬರುತ್ತಿದ್ದ ವಾಹನಗಳ
ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್‌ ಜಾಮ್‌ ಸಮಸ್ಯೆ ಸೃಷ್ಟಿಯಾಯಿತು. ಅಂಬೇಡ್ಕರ್‌ ವೃತ್ತ, ಟಿಪ್ಪು ಸುಲ್ತಾನ್‌ ವೃತ್ತ, ಎನ್‌ಎನ್‌ಟಿ ಚಿತ್ರಮಂದಿರದವರೆಗೆ ವಾಹನಗಳು
ಸಾಲುಗಟ್ಟಿದ್ದವು. ಅಡ್ಡ ದಾರಿಗೆ ದೊಡ್ಡ ವಾಹನಗಳು ತೆರಳಿದ್ದರಿಂದ ಟ್ರಾಪಿಕ್‌ ಸಮಸ್ಯೆ ಮತ್ತಷ್ಟು ಹೆಚ್ಚಾಗಿತ್ತು.

ಟಾಪ್ ನ್ಯೂಸ್

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.