ರಾಯಚೂರು-ಯಾದಗಿರಿ ಮಾರ್ಗದಲ್ಲಿ ವಿಶೇಷ ರೈಲು

ಮುಂಗಡ ಟಿಕೆಟ್‌ ಕಾಯ್ದಿರಿಸಿದ 26 ಪ್ರಯಾಣಿಕರು

Team Udayavani, May 28, 2020, 12:19 PM IST

28-May-06

ಸಾಂದರ್ಭಿಕ ಚಿತ್ರ

ಸೈದಾಪುರ: ಕೋವಿಡ್ ಲಾಕ್‌ಡೌನ್‌ ವಿನಾಯಿತಿ ಬಳಿಕ ದಕ್ಷಿಣ ಮಧ್ಯ ರೈಲ್ವೆ ಜೂನ್‌ 1ರಿಂದ ರಾಯಚೂರು ಮತ್ತು ಯಾದಗಿರಿ ಮಾರ್ಗವಾಗಿ ಬೆಂಗಳೂರು, ಮುಂಬೈ, ತಿರುಪತಿ ಮತ್ತು ನಿಜಮಾಬಾದ್‌ ನಗರಗಳಿಗೆ ಸಂಪರ್ಕ ಕಲ್ಪಿಸುವ ಎರಡು ಪ್ರಯಾಣಿಕ ರೈಲು ಪ್ರಾರಂಭಿಸಲಿದೆ.

ದಕ್ಷಿಣ ಮಧ್ಯ ರೈಲ್ವೆ ವಲಯ ವ್ಯಾಪ್ತಿಯ ಸೇಡಂ, ನಾಲವಾರ(ಕಲಬುರಗಿ ಜಿಲ್ಲೆ), ಯಾದಗಿರಿ, ಸೈದಾಪುರ ಮತ್ತು ರಾಯಚೂರು ರೈಲು ನಿಲ್ದಾಣಗಳಲ್ಲಿ ಮೇ 22ರಿಂದ ಮುಂಗಡ ಟಿಕೆಟ್‌ ಕಾಯ್ದಿರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಬುಧವಾರದ ವರೆಗೆ ಒಟ್ಟು 26 ಪ್ರಯಾಣಿಕರು ಟಿಕೆಟ್‌ ಕಾಯ್ದಿರಿಸಿದ್ದಾರೆ. ಮುಂಬೈ-ಬೆಂಗಳೂರು ಉದ್ಯಾನ್‌ ಎಕ್ಸ್‌ಪ್ರೆಸ್‌ ರೈಲು ಸಮಯದಲ್ಲಿಯೇ ವಿಶೇಷ ಡೇಲಿ ಎಕ್ಸ್‌ಪ್ರಸ್‌(01301/02) ಬೆಳಗ್ಗೆ 8:10ಕ್ಕೆ ಮುಂಬೈಯಿಂದ ಹೊರಟು ದಾದರ್‌, ಸೊಲ್ಲಾಪುರ, ಅಕ್ಕಲಕೋಟ ರಸ್ತೆ, ದುಧನಿ, ಗಂಗಾಪುರ ರಸ್ತೆ, ಕಲಬುರಗಿ, ಶಹಾಬಾದ, ವಾಡಿ, ನಾಲವಾರ, ಯಾದಗಿರಿ, ಸೈದಾಪುರ, ಕೃಷ್ಣಾ, ರಾಯಚೂರು, ಮಂತ್ರಾಲಯ ರಸ್ತೆ, ಆದೋನಿ ಮತ್ತು ಗುಂತಕಲ್‌ ಮಾರ್ಗವಾಗಿ ಬೆಂಗಳೂರಿಗೆ ಮರುದಿನ ಬೆಳಗ್ಗೆ 8:50ಕ್ಕೆ ತಲುಪಲಿದೆ. ಅದೇ ರೀತಿಯಾಗಿ ನಿಜಾಮಾಬಾದ-ತಿರುಪತಿ- ನಿಜಾಮಾಬಾದ್‌ ರಾಯಲಸೀಮಾ ಎಕ್ಸ್ ಪ್ರೆಸ್‌ ರೈಲು ಸಮಯದಲ್ಲಿಯೇ ವಿಶೇಷ ಡೇಲಿ ಎಕ್ಸ್‌ಪ್ರೆಸ್‌ (02793/94) ಬೆಳಗ್ಗೆ 2:00ಕ್ಕೆ ನಿಜಾಮಾಬಾದಿಂದ ಹೊರಟು ಸಿಕಂದ್ರಬಾದ್‌ ಮೂಲಕ ಸೇಡಂ, ಚಿತ್ತಾಪುರ, ಹಲಕಟ್ಟಿ, ನಾಲವಾರ, ಯಾದಗಿರಿ, ಸೈದಾಪುರ, ಕೃಷ್ಣಾ, ರಾಯಚೂರು, ಮಂತ್ರಾಲಯ ರಸ್ತೆ ಗುಂತಕಲ್‌ ಜಂಕ್ಷನ್‌ ಮೂಲಕ ಮರುದಿನ ಬೆಳಗ್ಗೆ 6:00ಕ್ಕೆ ತಿರುಪತಿಗೆ ತಲುಪಲಿದೆ. ಇದರಿಂದ ಈ ಭಾಗದಿಂದ ಹೋಗುವ ಮತ್ತು ಬರುವ ವಲಸೆ ಕಾರ್ಮಿಕರಿಗೆ ಮತ್ತು ಇತರ ಪ್ರಯಾಣಿಕರಿಗೆ ವಿಶೇಷ ರೈಲು ಅನುಕೂಲವಾಗಲಿದೆ.

ಪ್ರಯಾಣ ಮಾರ್ಗಸೂಚಿ
ಅಧಿಕೃತ ವೆಬ್‌ಸೈಟ್‌ ಮೂಲಕ ಮತ್ತು ರೈಲ್ವೆ ನಿಲ್ದಾಣದಲ್ಲಿ ಟಿಕೆಟ್‌ ಕಾಯ್ದಿರಿಸಬಹುದು. ವೇಟಿಂಗ್‌ ಪಟ್ಟಿಯಲ್ಲಿರುವ ಪ್ರಯಾಣಿಕರಿಗೆ ಪ್ರಯಾಣಿಸುವ ಮತ್ತು ಟಿಕೆಟ್‌ ರದ್ದು ಮಾಡುವ ಅವಕಾಶವಿಲ್ಲ ಹಾಗೂ ಪ್ರತಿಯೊಬ್ಬ ಪ್ರಯಾಣಿಕರಿಗೂ ಸ್ಕ್ರೀನಿಂಗ್‌ ಕಡ್ಡಾಯವಾಗಿದೆ. ರೋಗದ ಲಕ್ಷಣ ಇಲ್ಲದವರಿಗೆ ಪ್ರಯಾಣಿಸಲು ಅವಕಾಶ ನೀಡಲಾಗುವುದು ಮತ್ತು ರೈಲಲ್ಲಿ ಹೊದಿಕೆ ಒದಗಿಸಲಾಗುವುದಿಲ್ಲ ಎಂದು ರೈಲ್ವೆ ಇಲಾಖೆ ತನ್ನ ಅಧಿಕೃತ ವೆಬ್‌ಸೈಟ್‌ಲ್ಲಿ ಪ್ರಕಟಿಸಿದ ಮಾರ್ಗಸೂಚಿಯಲ್ಲಿ ತಿಳಿಸಿದೆ.

ಟಿಕೆಟ್‌ ಕಾಯ್ದಿರಿಸಲು ಜನ ವಿರಳ
ದಕ್ಷಿಣ ಮಧ್ಯ ರೈಲ್ವೆ ವಲಯ ಮೇ 22ರಿಂದ ಟಿಕೆಟ್‌ ಕಾಯ್ದಿರಿಸುವ ಪ್ರಕ್ರಿಯೆ ಆರಂಭಿಸಿದೆ. ಬುಧವಾರದ ವರೆಗೆ ಸೈದಾಪುರದಿಂದ ಮುಂಬೈಗೆ ತೆರಳುವ ಪ್ರಯಾಣಿಸುವರ ಒಬ್ಬರು ಮತ್ತು ಬೆಂಗಳೂರುಗೆ 25 ಜನ ಪ್ರಯಣಿಕರು ತಮ್ಮ ಟಿಕೆಟ್‌ ಕಾಯ್ದಿರಿಸಿದ್ದಾರೆ. ಆದರೆ ಮಹಾನಗರಗಳಿಂದ ಆಗಮಿಸುವ ಪ್ರಯಾಣಿಕರಿಗೆ ಜಿಲ್ಲಾಡಳಿತ ಯಾವ ಮುಂಜಾಗೃತ ಕ್ರಮ ಕೈಗೊಳ್ಳುತ್ತದೆ ಎಂಬುದುನ್ನು ಕಾಯ್ದು ನೋಡಬೇಕಾಗಿದೆ.

ಭೀಮಣ್ಣ ಬಿ. ವಡವಟ್‌

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.