ಜೋಳಕ್ಕೆ ಸೈನಿಕನ ಕಾಟ; ಮತ್ತೆ ರೈತರಲ್ಲಿ ಆತಂಕ


Team Udayavani, Dec 11, 2020, 6:50 PM IST

rc-tdy-2

ದೇವದುರ್ಗ: ಹಿಂಗಾರು ಹಂಗಾಮಿನಲ್ಲಿನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಮಾಡಿರುವ ಜೋಳಕ್ಕೆ ಸೈನಿಕ ಹುಳು ಬಾಧೆ ಕಂಡುಬಂದಿದ್ದು, ರೈತರಲ್ಲಿ ಮತ್ತೆ ಆತಂಕ ಮನೆ ಮಾಡಿದೆ.

ಜೋಳ ಬಿತ್ತನೆ ಮಾಡಿ 25ರಿಂದ 30 ದಿನಗಳು ಕಳೆಯುತ್ತಿದೆ. ನಾಲ್ಕು ಹೋಬಳಿವ್ಯಾಪ್ತಿಯಲ್ಲಿ 22,766 ಹೆಕ್ಟೇರ್‌ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡಲಾಗಿದೆ.

ಎಲ್ಲೆಲ್ಲಿ ಎಷ್ಟು ಬಿತ್ತನೆ: ಪಟ್ಟಣ ಸೇರಿ ತಾಲೂಕಿನ್ಯಾದಂತ ಹಿಂಗಾರು ಹಂಗಾಮಿನಲ್ಲಿ ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ರೈತರು ಜೋಳ ಬಿತ್ತನೆ ಮಾಡಲಾಗಿದೆ. ದೇವದುರ್ಗ ನೀರಾವರಿ-785 ಹೆಕ್ಟೇರ್‌, ಗಬ್ಬೂರು-1142ಹೆಕ್ಟೇರ್‌, ಜಾಲಹಳ್ಳಿ-525 ಹೆಕ್ಟೇರ್‌,ಅರಕೇರಾ- 675 ಹೆಕ್ಟೇರ್‌ ನೀರಾವರಿ3,127 ಹೆಕ್ಟೇರ್‌ ಪ್ರದೇಶದಲ್ಲಿ ಜೋಳಬಿತ್ತನೆ ಮಾಡಲಾಗಿದೆ. ಖುಷ್ಕಿ ಪ್ರದೇಶದಲ್ಲಿದೇವದುರ್ಗ-5,785 ಹೆಕ್ಟೇರ್‌, ಗಬ್ಬೂರು-6,169 ಹೆಕ್ಟೇರ್‌, ಜಾಲಹಳ್ಳಿ- 2,975 ಹೆಕ್ಟೇರ್‌, ಅರಕೇರಾ- 4,710 ಹೆಕ್ಟೇರ್‌ ಖುಷ್ಕಿ 19,639 ಹೆಕ್ಟೇರ್‌ ಪ್ರದೇಶದಲ್ಲಿ ಜೋಳಬಿತ್ತನೆ ಮಾಡಿದ್ದು, ಹಿಂಗಾರು ಹಂಗಾಮಿನಲ್ಲಿ22,766 ಹೆಕ್ಟೇರ್‌ ಪ್ರದೇಶದಲ್ಲಿ ಜೋಳ ಬಿತ್ತನೆ ಮಾಡಿದ್ದಾರೆ.

ಆಂತಕದಲ್ಲಿ ರೈತರು: ಕಳೆದೆರಡು ತಿಂಗಳಹಿಂದೆ ನಿರಂತರ ಸುರಿದ ಮಳೆಯಿಂದಾಗಿ ಮೆಣಿಸಿನಕಾಯಿ, ಹತ್ತಿ, ತೊಗರಿ ಸೇರಿ ಇತರೆಬೆಳೆಗಳ ನಷ್ಟ ಅನುಭವಿಸಿದ್ದಾರೆ. ಹೆಚ್ಚುಮಳೆ ಸುರಿದಿದ್ದರಿಂದ ಬೆಳೆಗಳಿಗೆ ತೇವಾಂಶಹೆಚ್ಚಾಗಿ ಲಕ್ಷಾಂತರ ರೂ. ನಷ್ಟ ಅನುಭವಿಸಿದರೈತರೀಗ ಸೈನಿಕ ಹುಳು ಬಾಧೆಗೆ ಆತಂಕ ಪಡುವಂತಾಗಿದೆ.

ಜಾಗೃತಿ ಅಗತ್ಯ: ತಾಲೂಕಿನಾದ್ಯಂತ ಹಿಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿರುವ ಜೋಳಕ್ಕೆ ಸೈನಿಕ ಹುಳು ಬಾಧೆ ಆವರಿಸಿದೆ. ಹುಳುವಿನ ಮೊದಲ ಹಂತದ ಮರಿಹುಳು ಎಲೆ ಕೆರೆದು ತಿನ್ನುವುದರಿಂದ, ಎಲೆಯ ಮೇಲೆ ಬಿಳಿಯಪಾರದರ್ಶಕ ಜಾಲರಿಗಳು ಕಂಡುಬರುತ್ತವೆ.ನಂತರ ಮರಿಹುಳು ಎಲೆ ತಿನ್ನುವ ಜತೆಕತ್ತರಿಸಿದಂತೆ ಕಾಣಿಸುತ್ತದೆ. ಸುಳಿ ಕೊರೆದು ತಿನ್ನುವುದರಿಂದ ಗಿಡ ಒಣಗುತ್ತದೆ. ಹಳದಿ ಮಿಶ್ರತ ಕಂದುಬಣ್ಣದ ಹಿಕ್ಕೆ ಕಂಡು ಬರುತ್ತದೆ. ಸೂಕ್ತ ಸಮಯದಲ್ಲಿ ರೈತರಿಗೆ ಕೃಷಿ ಅ ಧಿಕಾರಿಗಳಿಂದ ಜಾಗೃತಿ ನೀಡುವ ಅಗತ್ಯವಿದೆ.

ಬೆಳೆ ಹತೋಟಿಗೆ: ಜೋಳಕ್ಕೆ ಸೈನಿಕ ಹುಳು ಬಾಧೆ ಕಾಣಿಸಿಕೊಂಡಿರುವ ಹಿನ್ನೆಲೆ ಸೂಕ್ತ ಸಮಯದಲ್ಲಿ ವಿಜ್ಞಾನಿಗಳ ಸಲಹೆ ಪಡೆದು ಬೆಳೆಗಳು ಹತೋಟಿಗೆ ತರಬೇಕಾಗಿದೆ. 0.40ಗ್ರಾಂ. ಇಮಾಮೆಕ್ಷೆನ್‌ ಬೆಂಜೋಯಟ್‌, 5 ಎಸ್‌.ಜಿ. ಅಥವಾ 0.3 ಮಿ.ಲೀ.ಕ್ಲೋರಾಂಟ್ರಿನಿಲ್‌ ಪ್ರೊಲ್‌, 18.5 ಎಸ್‌.ಸಿ.ಅಥವಾ 0.5ಮಿ.ಲೀ ಸ್ಪೆನೂಟೊರಂ, 12.5 ಎಸ್‌.ಸಿ ಪ್ರತಿ ಲೀ. ನೀರಿಗೆ ಬೆರೆಸಿ ದ್ರಾವಣವು ಸುಳಿಯೊಳಗೆ ಬೀಳುವಂತೆ ಸಿಂಪಡಿಸಬೇಕುಎಂದು ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಮುಖ್ಯಸ್ಥ ಡಾ| ಗಿರೀಶ್‌ ಮರಡ್ಡಿ, ವಿಜ್ಞಾನಿ ಡಾ| ಕೃಷ್ಣಾ ಬಿರಾದಾರ ಪಾಟೀಲ್‌ ತಿಳಿಸಿದ್ದಾರೆ.

ನೂರಾರು ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಜೋಳಕ್ಕೆ ಸೈನಿಕ ಹುಳು ಬಾಧೆ ಆವರಿಸಿದೆ. ಯಾವ ಹಂತದಲ್ಲಿ ಔಷಧ ಸಿಂಪಡಣೆ ಮಾಡಬೇಕೆಂಬ ಬಗ್ಗೆ ರೈತರಿಗೆ ಜಾಗೃತಿ ಮೂಡಿಸಲಾಗಿದೆ. ಡಾ| ಎಸ್‌. ಪ್ರಿಯಾಂಕ್‌ ಸಹಾಯಕ ಕೃಷಿ ನಿರ್ದೇಶಕಿ

ಕೃಷಿ ಅಧಿಕಾರಿಗಳಿಂದ ರೈತರಿಗೆ ಜಾಗೃತಿ ಕೊರತೆ ಉಂಟಾಗಿದೆ. ಕಳಪೆ ಬೀಜಗಳ ಪೂರೈಕೆಯಿಂದ ಆರಂಭದಲ್ಲೇಬೆಳೆ ನಷ್ಟ ಅನುಭವಿಸಬೇಕಾಗಿದೆ. ಈ ಕುರಿತು ಕೃಷಿ ಇಲಾಖೆ ರೈತರಿಗೆ ಅಗತ್ಯ ಸಲಹೆ-ಸೂಚನೆ ನೀಡಬೇಕು.  –ಶಬ್ಬೀರ ಜಾಲಹಳ್ಳಿ, ರೈತ ಮುಖಂಡ

 

-ನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.