ಕರಡಕಲ್‌ ಕೆರೆಗೆ “ಅಭಿವೃದ್ದಿಯ ಯೋಗ”


Team Udayavani, Mar 16, 2022, 4:26 PM IST

19lake

ಲಿಂಗಸುಗೂರು: ಊರಿನ ಗಲೀಜು ತುಂಬಿಕೊಂಡು ಕಸದ ಬುಟ್ಟಿಯಾಗಿದ್ದ ಪಟ್ಟಣದ ಐತಿಹಾಸಿಕ ಕರಡಕಲ್‌ ಕೆರೆಗೆ ಅಭಿವೃದ್ಧಿಗೆ ಯೋಗ ಕೂಡಿ ಬಂದಿದೆ. ಇತಿಹಾಸ ಪ್ರಸಿದ್ಧ ಈ ಕೆರೆಯನ್ನು 3ನೇ ಬಿಲ್ಲಮನು (ಕ್ರಿ.ಶ.1025-1050) ನಿರ್ಮಿಸಿದ್ದಾರೆ ಎಂದು ಹೇಳಲಾಗಿದೆ.

ಹೈದ್ರಾಬಾದ್‌ ನಿಜಾಮರು ಹಾಗೂ ಬ್ರಿಟಿಷರು ತಮ್ಮ ಆಡಳಿತಾವಧಿಯಲ್ಲಿ ಲಿಂಗಸುಗೂರು ಅನ್ನು ಜಿಲ್ಲಾ ಕೇಂದ್ರವನ್ನಾಗಿಸಿ ತಮ್ಮ ದಂಡಿನ ತಾಣವನ್ನಾಗಿ ಮಾಡಿ ವಿಹಾರಕ್ಕಾಗಿ ಈ ಕೆರೆಗೆ ಬರುತ್ತಿದ್ದರು. ಸೈನಿಕರು ಕುದುರೆಗಳಿಗೆ ನೀರೊದಗಿಸಲು ಈ ಕೆರೆಯನ್ನು ಉಪಯೋಗಿಸುತ್ತಿದ್ದರು.

ಸಂಜೆ ಹೊತ್ತು ಕೆರೆಯ ಸುಂದರ ಪರಿಸರವನ್ನು ಕಣ್ತುಂಬಿಕೊಳ್ಳಲು ಹಾಗೂ ವಿಹರಿಸಲು ಕೆರೆಯ ದಡದಲ್ಲಿ ಎತ್ತರದಲ್ಲಿ ಮಹಲೊಂದನ್ನು ನಿರ್ಮಿಸಲಾಗಿದ್ದು, ಅದು ಅಧಿಕಾರಿಗಳ ಕ್ಲಬ್‌ ಗಾಗಿ ಬಳಲಾಗುತ್ತಿದೆ. ರಾಂಪುರ ಏತ ನೀರಾವರಿ ಕಾಲುವೆಯಿಂದ ಹರಿಯುವ ಹೆಚ್ಚುವರಿ ನೀರನ್ನು ಕಾಲುವೆ ಮೂಲಕ ಈ ಕೆರೆಗೆ ಬಿಡುತ್ತಿರುವುದರಿಂದ ನೀರಿನಿಂದ ತುಂಬಿಕೊಂಡು ಸುಂದರವಾಗಿ ಕಾಣುತ್ತಿದೆ ಅಲ್ಲದೇ ಸುತ್ತಮುತ್ತಲಿನ ಅಂತರ್ಜಲವೂ ಹೆಚ್ಚಿದೆ.

6.43 ಕೋಟಿ ರೂ. ಅನುದಾನ

224 ಎಕರೆ ವಿಶಾಲ ಹೊಂದಿರುವ ಕರಡಕಲ್‌ ಕೆರೆಗೆ ಊರಿನ ಚರಂಡಿ ನೀರು ಸೇರುತ್ತಿರುವುದರಿಂದ ಹಾಗೂ ತ್ಯಾಜ್ಯವನ್ನು ಕೆರೆಯಲ್ಲಿ ಹಾಕುತ್ತಿರುವುದರಿಂದ ಕೆರೆಯ ದಡದಲ್ಲಿ ಸಂಚರಿಸಿದರೆ ಸಾಕು ದುರ್ನಾತ ಬೀರುತ್ತಿದ್ದು, ಸಾರ್ವಜನಿಕರು ತೊಂದರೆ ಪಡುವಂತಾಗಿದೆ. ಈ ಬಗ್ಗೆ ಗಮನ ಹರಿಸಿದ ಶಾಸಕ ಶಾಸಕ ಡಿ.ಎಸ್‌. ಹೂಲಗೇರಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಿ ಕೆರೆ ಅಭಿವೃದ್ಧಿ ಕಾರ್ಯಕ್ಕೆ ಕೆಲವು ತಿಂಗಳ ಹಿಂದಷ್ಟೇ ಚಾಲನೆ ನೀಡಿದ್ದು, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಯೋಜನೆಯಡಿ ನಾಲ್ಕು ಹಂತದಲ್ಲಿ 6.43 ಕೋಟಿ ರೂ. ಅನುದಾನದಲ್ಲಿ ಕೆರೆ ಅಭಿವೃದ್ಧಿಗೆ ಕೈಗೆತ್ತಿಕೊಳ್ಳಲಾಗಿದೆ.

ಮಾದರಿ ಕೆರೆಗೆ ಪಣ

ಜಿಲ್ಲೆಯಲ್ಲಿ ದೊಡ್ಡ ಕೆರೆಯಾದ ಕರಡಕಲ್‌ ಕೆರೆ ಅಭಿವೃದ್ಧಿಗೊಳಿಸುವ ಹಿನ್ನೆಲೆಯಲ್ಲಿ ವಿವಿಧ ಕೆರೆಗಳ ಅಭಿವೃದ್ಧಿ ದೃಷ್ಟಿಯಲ್ಲಿಟ್ಟುಕೊಂಡು ಜಿಲ್ಲೆಯಲ್ಲೇ ಮಾದರಿ ಕೆರೆಯನ್ನಾಗಿ ಮಾಡುವ ಪಣ ತೊಡಲಾಗಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಕೈಗಾರಿಕೆ ಕಚೇರಿ ಹತ್ತಿರದಿಂದ ಒಳಾಂಗಣ ಕ್ರೀಡಾಂಗಣದ ಮುಖ್ಯ ರಸ್ತೆವರೆಗೂ ವಾಯು ವಿಹಾರಕ್ಕೆ 900 ಮೀಟರ್‌ ಉದ್ದ ವಾಕಿಂಗ್‌ ಟ್ರ್ಯಾಕ್‌ ಜತೆಗೆ ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ವಾಕಿಂಗ್‌ ಟ್ರ್ಯಾಕ್‌ ಉದ್ದಕ್ಕೂ ಸೋಲಾರ್‌ ವಿದ್ಯುತ್‌ ದೀಪಗಳು, ಡಿವೈಎಸ್ಪಿ ಕಚೇರಿ ಭಾಗದಲ್ಲಿ ಎರಡು ಎಕರೆ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಲಾಗುತ್ತಿದೆ. ಅಲ್ಲಿ ಎರಡು ನೀರಿನ ಕಾರಂಜಿಗಳು, ಮಕ್ಕಳ ಆಟಿಕೆ ಸಾಮಗ್ರಿಗಳು ಉದ್ಯಾನವನ, ಬಯಲು ರಂಗಮಂದಿರ, ಗಾರ್ಡನ್‌ನಲ್ಲಿ ತಿರುಗಾಡಲು ಇಲ್ಲಿಯೂ ಕೂಡ ವಾಕಿಂಗ್‌ ಟ್ರ್ಯಾಕ್‌ ಮಾಡಲಾಗುತ್ತಿದೆ. ಕ್ಯಾಂಟೀನ್‌, ಶೌಚಾಲಯಗಳು ನಿರ್ಮಿಸಿ ಕೆರೆಯನ್ನು ಪ್ರವಾಸಿ ತಾಣವನ್ನಾಗಿ ಮಾಡಲು ಕಾಮಗಾರಿ ಭರದಿಂದ ಸಾಗಿದೆ.

ಕೆರೆಯ ಡಿವೈಎಸ್ಪಿ ಕಚೇರಿ ಭಾಗದಲ್ಲಿ ಈಗಾಗಲೇ ಕಾಂಪೌಂಡ್‌ ನಿರ್ಮಿಸಲಾಗಿದ್ದು, 900 ಮೀಟರ್‌ ಉದ್ದ ವಾಕಿಂಗ್‌ ಟ್ರ್ಯಾಕ್‌ ನಿರ್ಮಾಣ ಕಾಮಗಾರಿ ನಡೆದಿದೆ. ಬೋಟಿಂಗ್‌ ನಿಲುಗಡೆ ಸ್ಥಳಗಳನ್ನು ಮಾಡಲಾಗುತ್ತಿದೆ. ಈ ಎಲ್ಲ ಪ್ರಯತ್ನ ಸರಿದಾರಿಯಲ್ಲಿ ಸಾಗಿದರೆ ನಾಗರಿಕರು ಸಹಕಾರ ನೀಡಿ ಕೆರೆ ಸಂರಕ್ಷಣೆಗೆ ಕಾಳಜಿ ವಹಿಸಿದರೆ ತಿಪ್ಪೆಯಂತೆ ಗೋಚರಿಸುವ ಐತಿಹಾಸಿಕ ಕೆರೆ ಸ್ವಚ್ಛತೆ ಹಾಗೂ ಸೌಂದರ್ಯೀಕರಣದಿಂದ ಕಂಗೊಳಿಸಲಿದೆ.

ಲಿಂಗಸುಗೂರು ಪಟ್ಟಣದಲ್ಲಿ ಸುಂದರ ದೊಡ್ಡ ಕೆರೆ ಇದೆ. ವರ್ಷಪೂರ್ತಿ ನೀರು ಇರುತ್ತೆ. ಅದಕ್ಕೆ ಪೂರ್ವ ದಿಕ್ಕಿನಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡು ಪಾರ್ಕ್‌, ವಾಕಿಂಗ್‌ ರಸ್ತೆ, ವಾಯುವಿಹಾರಕ್ಕೆ ಅನುಕೂಲವಾಗುವಂತೆ ಗಾರ್ಡನ್‌ ವ್ಯವಸ್ಥೆ ಹಾಗೂ ಬೋಟಿಂಗ್‌ ವ್ಯವಸ್ಥೆ ಮಾಡಲಾಗುತ್ತಿದೆ. -ಡಿ.ಎಸ್‌. ಹೂಲಗೇರಿ, ಶಾಸಕರು ಲಿಂಗಸುಗೂರು ಕರಡಕಲ್‌

ಕೆರೆ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಿಂದ ನಾಲ್ಕು ಹಂತದಲ್ಲಿ ಒಟ್ಟು 6.43 ಕೋಟಿ ರೂ. ಬಿಡುಗಡೆಯಾಗಿದೆ. ಅದರಂತೆ ಕಾಮಗಾರಿ ನಡೆದಿದೆ. -ಸೈಯದ್‌ ವಾಸೀಮ್‌, ಕಿರಿಯ ಅಭಿಯಂತರ ಆರ್‌ಡಿಪಿಆರ್‌, ಲಿಂಗಸುಗೂರು

-ಶಿವರಾಜ್‌ ಕೆಂಭಾವಿ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.