ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು
Team Udayavani, Sep 5, 2018, 6:00 AM IST
ರಾಯಚೂರು: ಹಿರಿಯ ನಟ ದೊಡ್ಡಣ್ಣನವರು ತಮ್ಮ ಮನೆ ದೇವರಾದ ತಾಲೂಕಿನ ದೇವಸುಗೂರಿನ ಶ್ರೀ ಸುಗೂರೇಶ್ವರ ಸ್ವಾಮಿ ದರ್ಶನಕ್ಕೆ ಬಂದಾಗ ಕಡಿಮೆ ರಕ್ತದೊತ್ತಡದಿಂದ ಅವರ ಆರೋಗ್ಯ ಏರುಪೇರಾಗಿದೆ. ಪತ್ನಿ ಸಮೇತರಾಗಿ ಸೋಮವಾರ ದೇವಸುಗೂರಿಗೆ ಆಗಮಿಸಿದ್ದ ಚಿತ್ರನಟ ದೊಡ್ಡಣ್ಣ, ಸುಗೂರೇಶ್ವರ ದೇವರ ದರ್ಶನ ಪಡೆದಿದ್ದರು. ಮಂಗಳವಾರ ದೇವರಿಗೆ ಅಭಿಷೇಕ ಮಾಡಿಸಿ ಉರುಳು ಸೇವೆ ಮಾಡುವುದಾಗಿ ತಿಳಿಸಿದ್ದರು. ಆದರೆ, ವಸತಿಗೃಹದಲ್ಲಿ ತಂಗಿದ್ದ ಅವರು ಬಾತ್ರೂಮ್ನಲ್ಲಿ ಕಡಿಮೆ ರಕ್ತದೊತ್ತಡದಿಂದ ನಿಶಕ್ತರಾಗಿ ಕುಸಿದು ಬಿದ್ದರು. ತಕ್ಷಣ ಅವರನ್ನು ಶಕ್ತಿನಗರ ಕೆಪಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅನಾರೋಗ್ಯದಿಂದಾಗಿ ದೇವರ ದರ್ಶನ ಪಡೆಯದೆ ವಸತಿಗೃಹದಲ್ಲಿಯೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿರುವ ಡಾ.ರಮೇಶ ಜಗ್ಲಿ, ಆ್ಯಂಬುಲೆನ್ಸ್ ಮೂಲಕ ಬೆಂಗಳೂರಿಗೆ ತೆರಳುವಂತೆ ಸಲಹೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
MUST WATCH
ಹೊಸ ಸೇರ್ಪಡೆ
OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?
Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್ ಎಫ್ ಕೆನಡಿ ಹಿಟ್ಲರ್ ನನ್ನು ಬಂಧಿಸಿದ್ದು!
ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್ ರೋಲ್ ನಲ್ಲಿ ಫಾಫಾ
ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ
Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ