ಸ್ವಾವಲಂಬಿ ಬದುಕಿಗೆ “ಸಂಜೀವಿನಿ’ ಆಧಾರ


Team Udayavani, Mar 23, 2022, 1:33 PM IST

15meeting

ದೇವದುರ್ಗ: ತಾಪಂ ಅಧಿಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ “ಸಂಜೀವಿನಿ’ ಗ್ರಾಪಂ ಒಕ್ಕೂಟ ಯೋಜನೆ ವತಿಯಿಂದ ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಈ ಯೋಜನೆ ಅನುಕೂಲವಾಗಿದೆ.

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಈ ಯೋಜನೆ 2013ರಲ್ಲೇ ಆರಂಭವಾಯಿತು. 2018ರಲ್ಲಿ ರಾಯಚೂರು ಜಿಲ್ಲೆ ಆಯ್ಕೆಯಾದ ನಂತರ ಸಂಜೀವಿನಿ ಗ್ರಾಪಂ ಒಕ್ಕೂಟ ಯೋಜನೆ ತಾಲೂಕಿನಲ್ಲಿ ಆರಂಭವಾಗಿದೆ. ತಾಲೂಕಿನಲ್ಲಿ ಕರಡಿಗುಡ್ಡ, ಕರಿಗುಡ್ಡ, ಗಬ್ಬೂರು, ಜಾಲಹಳ್ಳಿ, ಅರಕೇರಾ ಸೇರಿದಂತೆ 23 ಸ್ವಸಹಾಯ ಗುಂಪುಗಳು ವಲಯ ಮಟ್ಟದಲ್ಲಿ ಒಕ್ಕೂಟಗಳೆಂದು ಸ್ಥಾಪಿಸಿ ಕಾರ್ಯ ನಿರ್ವಹಿಸುತ್ತಿವೆ. 6 ಸ್ವ ಸಹಾಯ ಗುಂಪುಗಳಿಗೆ 75 ಸಾವಿರ, ಒಂದೂವರೆ ಲಕ್ಷದಂತೆ ಸಾಲ ಸೌಲಭ್ಯ ನೀಡಿದೆ. ಇನ್ನೂ 15 ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ನೀಡುವ ಉದ್ದೇಶದಿಂದ ಪ್ರಸ್ತಾವನೆ ಕಳಿಸಲಾಗಿದೆ.

ಜಿಪಂಗೆ ರಾಜ್ಯ ಸರ್ಕಾರದಿಂದ ಅನುದಾನ ಬಳಿಕ ಸಂಜೀವಿನಿ ಗ್ರಾಪಂ ಒಕ್ಕೂಟದ ವತಿಯಿಂದ ಸಾಲ ನೀಡಲಾಗುತ್ತದೆ. ಈ ಹಿಂದೆಯೂ ಸಂಜೀವಿನಿ ಗ್ರಾಪಂ ಒಕ್ಕೂಟ ಕಾರ್ಯ ನಿರ್ವಹಿಸಲಾಗುತ್ತಿತ್ತು. ಆದರೆ ಸ್ವಸಹಾಯ ಗುಂಪುಗಳಿಗೆ ಉತ್ತಮ ಸ್ಪಂದನೆ ಸಿಗದ ಕಾರಣ ಗುಂಪುಗಳು ದೂರವೇ ಉಳಿದಿದ್ದವು. ಎನ್‌ಆರ್‌ಎಲ್‌ ಎಂ ತಂಡ ಕಾರ್ಯ ಪ್ರವೃತ್ತಿಯಾದ ನಂತರ 15ಕ್ಕೂ ಅಧಿಕ ಸ್ವಸಹಾಯ ಗುಂಪುಗಳು ನೋಂದಣಿಯಾಗಿವೆ.

ಗ್ರಾಮೀಣ ಭಾಗದ ಮಹಿಳೆಯರು ಸ್ವಾವಲಂಬಿಗಳಾಗಲು ಸಂಜೀವಿನಿ ಗ್ರಾಪಂ ಒಕ್ಕೂಟ ಯೋಜನೆ ಮೂಲಕ ಸಾಲ ಸೌಲಭ್ಯ ನೀಡಲಾಗುತ್ತಿದೆ. ಹೈನುಗಾರಿಕೆ, ಹೊಲಿಗೆ ಯಂತ್ರ, ಕೋಳಿ, ಕುರಿ ಸಾಗಾಣಿಕೆ, ಬಟ್ಟೆ ವ್ಯಾಪಾರ ಸೇರಿದಂತೆ ವಿವಿಧ ಕುಲ ಕಸುಬು ನಡೆಸಲು ಸಾಲ ಸೌಲಭ್ಯ ನೀಡುವುದು ಈ ಯೋಜನೆಯ ಉದ್ದೇಶವಾಗಿದೆ. ಒಂದು ಸ್ವಸಹಾಯ ಗುಂಪುಗಳಲ್ಲಿ 10 ಜನ ಸದಸ್ಯರಿದ್ದು, ಒಬ್ಬ ಸದಸ್ಯರಿಗೆ ಇಂತಿಷ್ಟು ಸಾಲ ನೀಡಲಾಗುತ್ತದೆ.

ಸಾಲದ ನಿಯಮಗಳು

ಸಂಜೀವಿನಿ ಗ್ರಾಪಂ ಒಕ್ಕೂಟದಲ್ಲಿ ನೋಂದಣಿ ಯಾಗುವ ಸ್ವಸಹಾಯ ಗುಂಪುಗಳು ಮಾತ್ರ ಸಾಲ ಪಡೆಯಲು ಅರ್ಹ. 10 ಜನ ಸದಸ್ಯರಲ್ಲಿ ಒಬ್ಬರು ಅಧ್ಯಕ್ಷೆ, ಒಬ್ಬರು ಕಾರ್ಯದರ್ಶಿ ಎಂದು ರಚನೆ ಮಾಡಿದ ನಂತರ ವಲಯ ಮಟ್ಟದ ಬ್ಯಾಂಕ್‌ನಲ್ಲಿ ಹೊಸದಾಗಿ ಬ್ಯಾಂಕ್‌ ಖಾತೆ ತೆಗೆಯಬೇಕು. ಆ ಬ್ಯಾಂಕ್‌ನ ಮೂರು ಚೆಕ್‌ ಹಾಗೂ ಬಾಂಡ್‌ ಸೇರಿದಂತೆ ಇತರೆ ದಾಖಲಾತಿ ನೀಡಿದರೆ ಮಾತ್ರ ಸಾಲ ನೀಡಲಾಗುತ್ತದೆ. ಸ್ಥಳೀಯ ಸಂಪನ್ಮೂಲ ವ್ಯಕ್ತಿಗಳು ಅಧ್ಯಕ್ಷ-ಕಾರ್ಯದರ್ಶಿ ಸೇರಿ ಬಾಕಿ ಕಂತನ್ನು ವಾರ, ತಿಂಗಳ ರೂಪದಲ್ಲಿ ಪಾವತಿಸಬೇಕು.

ಸಂಜೀವಿನಿ ಗ್ರಾಪಂ ಒಕ್ಕೂಟ ಯೋಜನೆ ಮೂಲಕ 6 ಸ್ವಸಹಾಯ ಗುಂಪುಗಳಿಗೆ ಸಾಲ ಸೌಲಭ್ಯ ನೀಡಲಾಗಿದೆ. 15 ಗುಂಪುಗಳಿಗೆ ಸಾಲ ನೀಡಲು ಪ್ರಸ್ತಾವನೆ ಕಳಿಸಲಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ಈ ಯೋಜನೆಯ ಉದ್ದೇಶವಾಗಿದೆ. -ಶಂಕರ್‌, ಎನ್‌ಆರ್‌ಎಲ್‌ಎಂ, ವ್ಯವಸ್ಥಾಪಕರು

ಮಹಿಳೆಯರು ಸಾವಲಂಬಿಯಾಗಿ ಬದುಕು ನಿರ್ವಹಿಸಲು ಸಾಲ ನೀಡುವ ಮೂಲಕ ಜೀವನ ರೂಪಿಸಲಾಗುತ್ತಿದೆ. ಈ ಯೋಜನೆ ಸದುಪಯೋಗ ಪಡೆಯಲು ಮಹಿಳೆಯರು ಮುಂದೆ ಬರಬೇಕು. -ದೇವಮ್ಮ, ಸ್ವಸಹಾಯ ಗುಂಪುಗಳ ಕರಡಿಗುಡ್ಡ ವಲಯ ಒಕ್ಕೂಟ ಅಧ್ಯಕ್ಷೆನಾಗರಾಜ ತೇಲ್ಕರ್‌

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.