ಆಸ್ಪತ್ರೆ ಆವರಣದಲ್ಲಿ ಮಕ್ಕಳಿಗೆ ಸೀರೆ ತೊಟ್ಟಿಲು


Team Udayavani, Jan 14, 2022, 5:36 PM IST

22saree

ಸಿಂಧನೂರು: ಸರಕಾರಿ ಆಸ್ಪತ್ರೆಯಲ್ಲಿ ಮಹಿಳೆಯರಿಗಾಗಿ ನಡೆಸುವ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ಶಿಬಿರಕ್ಕೆ ಬಂದ ವೇಳೆ ಹಸುಗೂಸುಗಳಿಗೆ ಆಸ್ಪತ್ರೆ ಆವರಣದ ಗಿಡಮರಗಳೇ ಆಸರೆಯಾಗುತ್ತಿವೆ.

ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಯಂದಿರನ್ನು ಶಸ್ತ್ರ ಚಿಕಿತ್ಸೆಗೆ ಕರೆದೊಯ್ದ ಬಳಿಕ ಜೊತೆಗೆ ಬಂದ ಸಂಬಂಧಿಕರು, ಪುಟ್ಟ ಕಂದಮ್ಮಗಳಿಗೆ ಸೂಕ್ತ ವ್ಯವಸ್ಥೆ ಇಲ್ಲವಾಗಿದೆ.

ಆಸ್ಪತ್ರೆಯೊಳಗೆ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆಗೆ ಸಂಬಂಧಿಸಿ ಬೆಡ್‌ ಕೂಡ ನೀಡುತ್ತಿಲ್ಲ. ಸಹಜವಾಗಿಯೇ ಮಹಿಳೆಯರನ್ನು ಆಪರೇಷನ್‌ ಥೇಟರ್‌ಗೆ ಕರೆದುಕೊಂಡ ಬಳಿಕ, ಹಸುಗೂಸು ಸಮೇತ ಪಾಲಕರು ಆಸ್ಪತ್ರೆ ಆವರಣದಲ್ಲಿ ದಿನವೆಲ್ಲ ಕಾಯುವಂತಾಗಿದೆ.

ಸೀರೆಯ ತೊಟ್ಟಿಲು

ಹೆರಿಗೆಯಾ ನಾಲ್ಕೈದು ತಿಂಗಳ ಅವಧಿಯಲ್ಲಿ ಸಂತಾನ ಶಕ್ತಿಹರಣ ಶಸ್ತ್ರಚಿಕಿತ್ಸೆ ನೆರವೇರಿಸಲಾಗುತ್ತದೆ. ಪುಟ್ಟ ಕೂಸಿನೊಂದಿಗೆ ತಾಯಂದಿರನ್ನು ಕರೆದುಕೊಂಡು ಬಂದ ಪಾಲಕರು, ಹಸುಗೂಸಿನೊಂದಿಗೆ ಕುಳಿತುಕೊಳ್ಳಲು ಆಸ್ಪತ್ರೆಯೊಳಗೆ ಜಾಗ ಇಲ್ಲದಂತಾಗಿದೆ. ಹೀಗಾಗಿ, ಪುಟ್ಟ ಕಂದಮ್ಮಗಳನ್ನು ಕರೆದುಕೊಂಡು ಹೊರಗಡೆ ಬಂದು ಆಸ್ಪತ್ರೆ ಆವರಣದ ಗಿಡಗಳಿಗೆ ಸೀರೆಯಿಂದ ತೊಟ್ಟಿಲು ಕಟ್ಟಲಾಗುತ್ತದೆ. ಮಕ್ಕಳನ್ನು ಹಾಕಿ, ಅದರಲ್ಲಿ ತೂಗುತ್ತಾ ದಿನವೆಲ್ಲ ಜಾಗರಣೆ ಮಾಡಬೇಕಿದೆ.

ಸೌಲಭ್ಯದತ್ತ ಗಮನವಿಲ್ಲ

ಸರಕಾರಿ ಆಸ್ಪತ್ರೆಯಲ್ಲಿ ಪ್ರತಿ ವಾರಕ್ಕೊಂದು ಈ ಶಿಬಿರ ನಡೆಸಲಾಗುತ್ತದೆ. ಡಾ| ನಾಗರಾಜ್‌ ಕಾಟ್ವಾ ನೇತೃತ್ವದ ತಂಡ ಉತ್ತಮವಾಗಿ ಸ್ಪಂದಿಸುತ್ತಿದೆ. ಸೌಲಭ್ಯದ ವಿಷಯದಲ್ಲಿ ಆಡಳಿತಾತ್ಮಕ ಸಮಸ್ಯೆ ಕಾಣಿಸಿದೆ. ಆರಂಭದಲ್ಲಿ 100ರಿಂದ 150 ಮಹಿಳೆಯರಿಗೆ ಒಂದೇ ಶಿಬಿರದಲ್ಲಿ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗುತ್ತಿತ್ತು. ಈ ಕ್ರಮದಿಂದ ಸುರಕ್ಷತೆ ಕೊರತೆ, ಮಹಿಳೆಯರಿಗೆ ತೊಂದರೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಸುಪ್ರಿಂಕೋರ್ಟ್‌ ಈ ಬಗ್ಗೆ ಎಚ್ಚರಿಕೆ ವಹಿಸಲು ಸೂಚಿಸಿತ್ತು. ಆ ಬಳಿಕ ವಾರಕ್ಕೊಮ್ಮೆ ನಡೆಯುವ ಶಿಬಿರದಲ್ಲಿ 30 ಮಹಿಳೆಯರಿಗೆ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಸಂಖ್ಯೆ ಕಡಿಮೆ ಮಾಡಿದ ಮೇಲೂ ಸೌಲಭ್ಯ ಕಲ್ಪಿಸುವಲ್ಲಿ ಆರೋಗ್ಯ ಇಲಾಖೆ ವಿಫಲವಾಗಿದೆ ಎಂದು ಪಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಳಗಡೆ ಹೋದರೆ ಮಗುವಿಗೆ ಗಾಳಿಯಿಲ್ಲ. ಅತ್ತಾಗ ಸಂತೈಸುವುದು ಕಷ್ಟವಾಗಿ ಗಿಡಕ್ಕೆ ಜೋಕಾಲಿ ಕಟ್ಟಲಾಗಿದೆ. ಆಸ್ಪತ್ರೆ ಒಳಗೆ ನಿಲ್ಲಲಿಕ್ಕೂ ಜಾಗವಿಲ್ಲ. ಇನ್ನೆಲ್ಲಿ ಕುಳಿತುಕೊಳ್ಳುವುದು. -ಹೆಸರು ಹೇಳಿಚ್ಛಿಸದ ಪಾಲಕರು, ಸಿಂಧನೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.