ಕೋವಿಡ್ 19 ಸೋಂಕು ತಡೆಗೆ ಸರ್ವಧರ್ಮಗಳ ಗುರುಗಳಿಂದ ಜಾಗೃತಿ ಸಭೆ
Team Udayavani, Apr 12, 2020, 1:53 PM IST
ರಾಯಚೂರು : ಕೊವಿಡ್-19 ವೈರಸ್ ಹರಡದಂತೆ ಮುನ್ನೆಚರಿಕಾ ಕ್ರಮ ಕೈಗೊಳ್ಳುವ ಕುರಿತು ನಗರದ ಕೃಷಿ ವಿಶ್ವವಿದ್ಯಾಲಯದ ಆಡಿಟೋರಿಯಂನಲ್ಲಿ ಸರ್ವಧರ್ಮಗಳ ಗುರುಗಳಿಂದ ಜಾಗೃತಿ ಕಾರ್ಯಕ್ರಮ ನಡೆಯಿತು.
ಹಿಂದು, ಕ್ರೈಸ್ತ ಹಾಗು ಮುಸ್ಲಿಂ ಧರ್ಮಗಳ 15 ಕ್ಕು ಹೆಚ್ಚು ಗುರುಗಳು ಪಾಲ್ಗೊಂಡಿದ್ದರು. ಎಲ್ಲ ಗುರುಗಳು ಮಾತನಾಡಿ, ಭಕ್ತರು ಮಠ ಮಂದಿರ ಮಸೀದಿ ಚರ್ಚ್ ಗಳಿಗೆ ಹೋಗದೆ ಮನೆಯಲ್ಲಿ ದೇವರ ಧ್ಯಾನ ಮಾಡಬೇಕು. ಜಾತಿ ಧರ್ಮಗಳನ್ನು ಮೀರಿ ಒಗ್ಗೂಡಿ ಹೋರಾಡಬೇಕಿದೆ ಎಂದರು.
ಶಾಸಕ ಡಾ.ಶಿವರಾಜ್ ಪಾಟೀಲ್ ಮಾತನಾಡಿ, ಧರ್ಮಗುರುಗಳ ಮೇಲೆ ಜವಾಬ್ದಾರಿ ಹೆಚ್ಚಾಗಿದೆ. ಕೋವಿಡ್-19 ಸೋಂಕು ಈಗಿನ್ನೂ ಹುಟ್ಟಿದ ಮಗು. ಅದು ಮುಂದೆ ದೊಡ್ಢದಾಗಿ ಬೆಳೆಯದಂತೆ ನೋಡಿಕೊಳ್ಳಬೇಕಿದೆ. ಧರ್ಮಗುರುಗಳು ನಿಮ್ಮ ಅನುಯಾಯಿಗಳಿಗೆ ಕರೆ ನೀಡಿ ಮನೆಯಲ್ಲಿರುವಂತೆ ಸಂದೇಶ ನೀಡಬೇಕಿದೆ. ಮುಂದಿನ ಎರಡು ವಾರ ಭಾರತಕ್ಕೆ ಬಲು ಕಠಿಣವಾಗಿರಲಿದೆ. ಅದಕ್ಕೆ ಎಲ್ಲರೂ ಮನೆಯಲ್ಲಿದ್ದು ಸಹಕರಿಸಬೇಕು. ಜನರಿಗೆ ಏನು ಬೇಕು ಎಲ್ಲ ಸೌಲಭ್ಯವನ್ನು ಮನೆಗೆ ತಲುಪಿಸಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್ ಕಡ್ಡಾಯ
Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ
ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ
ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ
ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ
MUST WATCH
ಹೊಸ ಸೇರ್ಪಡೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್