ಸ್ವಂತ ಖರ್ಚಿನಲ್ಲಿ ಹೊಲಿಗೆ ತರಬೇತಿ


Team Udayavani, Nov 10, 2018, 1:45 PM IST

ray-3.jpg

ದೇವದುರ್ಗ: ಗ್ರಾಮೀಣ ಭಾಗದಲ್ಲಿ ಸರಕಾರದ ಯೋಜನೆಗಳು ತಲುಪದೇ ಜನರು ಗೋಳಿಡುತ್ತಿರುವ ಈ ಕಾಲದಲ್ಲಿ ಸದ್ದಿಲ್ಲದೇ ಹಳ್ಳಿಯೊಂದರಲ್ಲಿ ಮಹಿಳೆಯರ ಆರ್ಥಿಕ ಸ್ವಾವಲಂಬನೆ ಕಾರ್ಯ ನಡೆಯುತ್ತಿದೆ. ಯಾವುದೇ ಅಕ್ಷರ ಕಲಿಯದ ವ್ಯಕ್ತಿ ಅನೇಕ ಗ್ರಾಮೀಣ ಮಹಿಳೆಯರ ಜೀವನ ಬದಲಿಸಿದ್ದು, ಹಳ್ಳಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಹೌದು ಅರಕೇರಾ ಸಮೀಪದ ಬಿ.ಗಣೇಕಲ್‌ ಗ್ರಾಮದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಂಪಣ್ಣ ಪಲ್ಲೇದ ಅವರೇ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಕಟಿಬದ್ಧರಾಗಿ ನಿಂತಿರುವ ವ್ಯಕ್ತಿ.

ಪಲ್ಲೇದ ಅವರು ಕಳೆದ ಒಂದು ವರ್ಷದಿಂದ ಬಿ.ಗಣೇಕಲ್‌ ಗ್ರಾಮದಲ್ಲಿ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ನೀಡುತ್ತಿದ್ದು, ಅನೇಕ ಕುಟುಂಬಗಳಿಗೆ ಆಸರೆಯಾಗಿದ್ದಾರೆ. ಮೂಲತಃ ಕೃಷಿ ಕುಟುಂಬದಿಂದ ಬಂದಿರುವ ಪಲ್ಲೇದ ಅವರು ಮೊದಲಿನಿಂದಲೂ ಶಿಕ್ಷಣ ಹಾಗೂ ಸಾಮಾಜಿಕ ಕಾರ್ಯಗಳನ್ನು ಮಾಡುವ ಕನಸು ಹೊತ್ತಿದ್ದರು. ಈ ನಿಟ್ಟಿನಲ್ಲಿ ಗ್ರಾಮದಲ್ಲಿ ತಮ್ಮದೇ ಶಿಕ್ಷಣ ಸಂಸ್ಥೆ ಆರಂಭಿಸಿ, ಗ್ರಾಮದಲ್ಲಿ ಪಟ್ಟಣಗಳ ರೀತಿ ಉತ್ತಮ ಶಿಕ್ಷಣ ನೀಡಲು ಸಾಧ್ಯವಿದೆ ಎನ್ನುವುದನ್ನು ಸಾಬೀತುಪಡಿಸಿದವರು.

ಗ್ರಾಮೀಣ ಪ್ರದೇಶದಲ್ಲಿ ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿರುವುದನ್ನು ಮನಗಂಡು ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರ ಆರಂಭಿಸಿದ್ದಾರೆ. ಸ್ವಂತ ಖರ್ಚಿನಲ್ಲಿ ಅನೇಕ ಹೊಲಿಗೆ ಯಂತ್ರಗಳನ್ನು ತಂದು ದಿನಕ್ಕೆ ವಿವಿಧ ಬ್ಯಾಚ್‌ಗಳಲ್ಲಿ ತರಬೇತಿ  ನೀಡಲಾಗುತ್ತಿದೆ. ಹೊಲಿಗೆ ತರಬೇತಿ ನೀಡಲು ಮಹಿಳೆಯರನ್ನು ನೇಮಿಸಿದ್ದಾರೆ. ಅವರಿಗೆ ಪಲ್ಲೇದ ಅವರೇ ಸ್ವಂತ ಹಣದಿಂದ ಸಂಬಳ ನೀಡುತ್ತಿದ್ದಾರೆ.

ಸದ್ಯ 103 ಮಹಿಳೆಯರು ಉಚಿತ ತರಬೇತಿ ಪಡೆಯುತ್ತಿರುವ ಈ ಕೇಂದ್ರ ಸುತ್ತಮುತ್ತಲಿನ ಹತ್ತಾರು ಹಳ್ಳಿಗಳ ಜನರ ಮೆಚ್ಚುಗೆಗೆ ಪಾತ್ರವಾಗಿದೆ. ಸರಕಾರದ ಯಾವ ನೆರವಿಲ್ಲದೇ ತಮ್ಮ ಸ್ವಂತ ಖರ್ಚಿನಲ್ಲಿಯೇ ಈ ಕೇಂದ್ರ ಮುನ್ನಡೆಸುತ್ತಿರುವ ಹಂಪಣ್ಣ ಪಲ್ಲೇದ ಅವರ ಕಾರ್ಯವನ್ನು ಸರಕಾರ ಗುರುತಿಸಬೇಕಿದೆ. ಆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಕಟಿಬದ್ದರಾಗಿರುವ ಪಲ್ಲೇದ ಅವರ ಸಾಮಾಜಿಕ ಕಾರ್ಯಕ್ಕೆ ಸಾಥ್‌ ನೀಡಬೇಕಿದೆ ಎನ್ನುವುದು ಸ್ಥಳೀಯ ಶಿಕ್ಷಣ ಪ್ರೇಮಿ ಅಮರೇಶ ಒತ್ತಾಸೆಯಾಗಿದೆ.

ಪುರುಷ ಪ್ರಧಾನ ಸಮಾಜದಲ್ಲಿ ಕೌಟುಂಬಿಕ ಬಲವರ್ಧನೆಗೆ ಮಹಿಳೆಯರ ಕೊಡುಗೆ ಮಹತ್ವದ್ದಾಗಿದೆ. ಹೀಗಾಗಿ ಹೊಲಿಗೆ ತರಬೇತಿ ಪಡೆದು ಸ್ವಾವಲಂಬಿತರಾಗಲಿ ಎನ್ನುವ ಸದುದ್ದೇಶದಿಂದ ಉಚಿತ ತರಬೇತಿ ಕೇಂದ್ರ ಆರಂಭಿಸಿದ್ದೇನೆ.
 ಹಂಪಣ್ಣ ಪಲ್ಲೇದ, ಉಚಿತ ಹೊಲಿಗೆ ತರಬೇತಿ ಕೇಂದ್ರದ ಸ್ಥಾಪಕ.

ಟಾಪ್ ನ್ಯೂಸ್

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗುರುತು ಮೂಡಿಸುವೆ’

Raichur Lok sabha: “35 ವರ್ಷದ ಸೇವಾನುಭವದಿಂದ ಕಾಲಮಿತಿಯೊಳಗೆ ಹೆಗ್ಗುರುತು ಮೂಡಿಸುವೆ’

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.