ವೈಟಿಪಿಎಸ್‌ ಭೂಸಂತ್ರಸ್ತರ ಅರೆಬೆತ್ತಲೆ ಪ್ರತಿಭಟನೆ


Team Udayavani, Oct 27, 2017, 11:12 AM IST

ray-2.jpg

ರಾಯಚೂರು: ಯರಮರಸ್‌ ಶಾಖೋತ್ಪನ್ನ ಕೇಂದ್ರಕ್ಕೆ ಭೂಮಿ ನೀಡಿದ ಭೂ ಸಂತ್ರಸ್ತರ ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಸ್ಪಂದಿಸದ್ದಕ್ಕೆ ಪ್ರತಿಭಟನಾಕಾರರು ಗುರುವಾರ ಅರೆಬೆತ್ತಲೆ ಪ್ರತಿಭಟನೆ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

ಅ.23ರಂದು ವೈಟಿಪಿಎಸ್‌ ಕೇಂದ್ರಕ್ಕೆ ಬೀಗ ಜಡಿದು ಹೋರಾಟ ಆರಂಭಿಸಿದ ಪ್ರತಿಭಟನಾಕಾರರು ಕೇಂದ್ರದ ಎದುರೇ ಧರಣಿ ಕುಳಿತರು. ಹೋರಾಟಕ್ಕಿಳಿದು ನಾಲ್ಕು ದಿನವಾದರೂ ಸಂಬಂಧಿಸಿದ ಅಧಿಕಾರಿಗಳಾಗಲಿ, ಆಡಳಿತ ಪಕ್ಷದ ಯಾವುದೇ ಜನಪ್ರತಿನಿಧಿ ಗಳಾಗಲಿ ಕೇಂದ್ರಕ್ಕೆ ಭೇಟಿ ನೀಡಿ ನಮ್ಮ ಬೇಡಿಕೆಗೆ ಸ್ಪಂದಿಸುತ್ತಿಲ್ಲ. ಭೂಮಿ ಪಡೆಯುವಾಗ ಇದ್ದ ವರ್ತನೆ ಈಗ ಇಲ್ಲದಾಗಿದೆ. ಹತ್ತಾರು ಎಕರೆ ಭೂಮಿ ಕಳೆದುಕೊಂಡು ನಾವು ನಿತ್ಯ ಯಾತನೆ ಅನುಭವಿಸುವಂತಾಗಿದೆ ಎಂದು ದೂರಿದರು. 1100 ಎಕರೆ ಭೂಮಿ ವಶಪಡಿಸಿಕೊಂಡಿದ್ದು, ಸುತ್ತಲಿನ ಗ್ರಾಮಗಳಲ್ಲಿ ಕೇವಲ 100 ಜನರಿಗೆ ಮಾತ್ರ ಉದ್ಯೋಗ ನೀಡಲಾಗಿದೆ. ಭೂ ಸಂತ್ರಸ್ತರು ಬಿಟ್ಟು ಬೇರೆಯವರಿಗೆ ಉದ್ಯೋಗ ನೀಡುತ್ತಿದ್ದು, ನಮಗೆ ಆತ್ಮಹತ್ಯೆಯೊಂದೇ ದಾರಿ ಎನ್ನುವಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರೆಬೆತ್ತಲೆ ಧರಣಿ ನಡೆಸಿದ ಪ್ರತಿಭಟನಾಕಾರರು ಅಧಿಕಾರಿಗಳು ನಮ್ಮ ಬೇಡಿಕೆಗೆಳಿಗೆ ಮನ್ನಣೆ ನೀಡದಿದ್ದ ಪಕ್ಷದಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುವುದಾಗಿ ಎಚ್ಚರಿಸಿದರು.  ಈ ಬಗ್ಗೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರೂ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ವಿದ್ಯಾಭ್ಯಾಸಕ್ಕೆ ತಕ್ಕ ಹುದ್ದೆ ನೀಡಿದರೂ ನಮ್ಮ ತಕರಾರಿಲ್ಲ. ಆದರೆ, ಭೂಮಿ ಕಳೆದುಕೊಂಡವರನ್ನು ಬಿಟ್ಟು ಬೇರೆಯವರನ್ನು ನೇಮಿಸಿಕೊಳ್ಳುತ್ತಿದ್ದಾರೆ. ಸರ್ಕಾರದ ಅವೈಜ್ಞಾನಿಕ ನಿಯಮಗಳಿಂದ ಹುದ್ದೆ ಪಡೆಯಲಾಗದೆ ಸಮಸ್ಯೆ ಎದುರಿಸುತ್ತಿದ್ದು, ಶೀಘ್ರವೇ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದರು. ಏಗನೂರು, ವಡ್ಮೂರು, ಸಂಕನೂರು, ಕುಕನೂರು ಸೇರಿ ವಿವಿಧ ಗ್ರಾಮಗಳ ಭೂಸಂತ್ರಸ್ತರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.