ಸರಣಿ ಕಳ್ಳತನ: ಆರೋಪಿಗಳ ಪತ್ತೆಗೆ ಪೊಲೀಸರ ಬಲೆ


Team Udayavani, Jan 12, 2019, 11:57 AM IST

ray-2.jpg

ಮಾನ್ವಿ: ತಾಲೂಕಿನ ಜಾನೇಕಲ್‌ ಗ್ರಾಪಂ ವ್ಯಾಪ್ತಿಗೆ ಬರುವ ಗವಿಗಟ್ಟ, ಅಮರಾವತಿ, ಆಲ್ದಾಳ ಕ್ಯಾಂಪ್‌ನಲ್ಲಿ ಮನೆ, ಅಂಗಡಿಗಳಲ್ಲಿ ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ. ಗವಿಗಟ್ಟ ಗ್ರಾಮದ ಶರಣಪ್ಪ ಅಂಗಡಿ ಶಿವರಾಜಪ್ಪ ಅವರ ಮನೆ ಬೀಗ ಮುರಿದು 8 ತೊಲೆ ಬಂಗಾರ ಮತ್ತು 1.60 ಲಕ್ಷ ರೂ. ನಗದು ಹಣ ದೋಚಿದ್ದಾರೆ.

ಇದೇ ಗ್ರಾಮದ ಕಿರಾಣಿ ಅಂಗಡಿ, ಶ್ರೀ ವೀರಭದ್ರೇಶ್ವರ ಮೆಡಿಕಲ್‌ ಸ್ಟೋರ್‌, ಶ್ರೀ ಸಿದ್ದರಾಮೇಶ್ವರ ಕ್ಯಾನ್ವಾಸಿಂಗ್‌ ಅಂಗಡಿಗಳ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದಾರೆ. ಇದೇ ದಿನ ತಡರಾತ್ರಿ ಅಮರಾವತಿ ಗ್ರಾಮದ ಮಲ್ಲನಗೌಡ ರುದ್ರಪ್ಪಗೌಡ ಮನೆ ಬೀಗ ಮುರಿದು 11 ತೊಲೆ ಬಂಗಾರ 5 ಲಕ್ಷ ರೂ. ನಗದು ಹಣ ಕಳ್ಳತನ ನಡೆದಿದೆ. ನಂತರ ಅಲ್ದಾಳ ಕ್ಯಾಂಪ್‌ನ ಶ್ರೀರಾಮ ದೇವಸ್ಥಾನ ಬೀಗ ಮುರಿದು 25 ಸಾವಿರ ರೂ. ಮೌಲ್ಯದ ಬೆಳ್ಳಿ ಆಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.

ಶುಕ್ರವಾರ ಬೆಳಗ್ಗೆ ಘಟನಾ ಸ್ಥಳಕ್ಕೆ ಸಿಂಧನೂರು ಡಿವೈಎಸ್‌ಪಿ, ಮಾನ್ವಿ ಸಿಪಿಐ ಚಂದ್ರಶೇಖರ, ಪಿಎಸ್‌ಐ ರಂಗಪ್ಪ ಎಚ್. ದೊಡ್ಡಮನಿ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಪೊಲೀಸರಿಂದ ಆರೋಪಿಗಳ ಶೋಧ ಕಾರ್ಯ ನಡೆಸಲಾಗಿದೆ. ಈ ಮೂರು ಗ್ರಾಮಗಳಲ್ಲಿ ನಡೆದ ಸರಣಿ ಕಳ್ಳತನಗಳು ಒಂದೇ ಮಾದರಿಯಲ್ಲಿದ್ದು, ಒಂದೇ ತಂಡದಿಂದ ಕಳ್ಳತನ ನಡೆದಿರಬಹುದು ಎಂಬ ಅನುಮಾನ ವ್ಯಕ್ತಪಡಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡು ಮಾನ್ವಿ ಸಿಪಿಐ, ಪಿಎಸ್‌ಐ ಹಾಗು ಕವಿತಾಳ ಪಿಎಸ್‌ಐ ನೇತೃತ್ವದಲ್ಲಿ ಈಗಾಗಲೇ ಮೂರು ತಂಡ ರಚಿಸಿ ಆರೋಪಿಗಳ ಪತ್ತೆಗಾಗಿ ಬಲೆ ಬೀಸಲಾಗಿದೆ ಎಂದು ಸಿಂಧನೂರು ಡಿವೈಎಸ್‌ಪಿ ವಿಶ್ವನಾಥರಾವ್‌ ಕುಲಕರ್ಣಿ ಉದಯವಾಣಿಗೆ ತಿಳಿಸಿದ್ದಾರೆ.

ಗುರುವಾರ ತಡರಾತ್ರಿ ಮೂರು ಗ್ರಾಮಗಳಲ್ಲಿ ನಡೆದ ಸರಣಿ ಕಳ್ಳತನ ಪ್ರಕರಣ ಗ್ರಾಮಸ್ಥರಲ್ಲಿ ಅತಂಕ ಉಂಟು ಮಾಡಿದೆ. ಸರಣಿ ಕಳ್ಳತನಗಳು ಒಂದೇ ಮಾದರಿಯಲ್ಲಿ ನಡೆದಿದ್ದು, ಹೊರ ಜಿಲ್ಲೆ ಅಥವಾ ರಾಜ್ಯದಿಂದ ಬಂದ ಕಳ್ಳರ ತಂಡ ಕೃತ್ಯ ಎಸಗಿರಹುದು ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.