ಕ್ವಾರಂಟೈನ್ ಕೇಂದ್ರದಲ್ಲಿರುವವರ ಕಿರಿಕ್
Team Udayavani, May 27, 2020, 6:08 PM IST
ಸಾಂದರ್ಭಿಕ ಚಿತ್ರ
ಶಹಾಪುರ: ಇಲ್ಲಿನ ಕನ್ಯಾಕೋಳೂರ ರಸ್ತೆಯಲ್ಲಿನ ವಸತಿನಿಲಯದ ಕ್ವಾರಂಟೈನ್ ಕೇಂದ್ರದಲ್ಲಿರುವ ಕೆಲವರು ಸಮರ್ಪಕ ಊಟ ನೀಡುತ್ತಿಲ್ಲ, ಕುಡಿವ ನೀರಿಲ್ಲವೆಂದು ತಗಾದೆ ತೆಗೆದು ಕೇಂದ್ರದ ಚಾವಿ ಮುರಿದು ಪ್ರತಿಭಟನೆ ನಡೆಸಿದ್ದಲ್ಲದೇ ನಗರದಲ್ಲಿ ಓಡಾಡಿದ ಪ್ರಸಂಗ ಇತ್ತೀಚೆಗೆ ನಡೆದಿದೆ.
ಕೆಲ ಅಧಿಕಾರಿಗಳು ಹೇಳುವಂತೆ, ಕ್ವಾರಂಟೈನ್ ಕೇಂದ್ರದಲ್ಲಿರುವವರಿಗೆ ಹೊರಗಡೆಯಿಂದ ಬುತ್ತಿ ನೀಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಕೆಲ ಯುವಕರು ತಮ್ಮ ದುಶ್ಚಟಕ್ಕಾಗಿ ಇಲ್ಲಸಲ್ಲದ ಆರೋಪ ಮಾಡಿ ಚಾವಿ ಮುರಿದು ನಗರದಲ್ಲಿ ಓಡಾಡಿ ಕುಡಿದು, ಬೀಡಿ ಸಿಗರೇಟ್ ತೆಗೆದು ಕೊಂಡು ಕ್ವಾರಂಟೈನ್ ಕೇಂದ್ರಕ್ಕೆ ಮರಳಿದ್ದಾರೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ. ಕ್ವಾರಂಟೈನ್ನಲ್ಲಿರುವವರು ತಮಗೆ ನೀಡುವ ಅನ್ನದ ಪಾಕೆಟ್ನ್ನು ನಾಯಿಗೆ ಎಸೆದಂತೆ ಎಸೆಯುತ್ತಾರೆ ಎಂದು ದೂರಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು ವೈರಲ್ ಆಗಿದೆ.
ಆತಂಕ: ಕ್ವಾರಂಟೈನ್ನಲ್ಲಿರುವವರು ನಗರದಲ್ಲಿ ಓಡಾಡಿದ್ದಾರೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ನಗರವಾಸಿಗಳಲ್ಲಿ ಆತಂಕ ಶುರುವಾಗಿದೆ. ತಾಲೂಕು ಆಡಳಿತ ಕ್ವಾರಂಟೈನ್ನಲ್ಲಿರುವವರನ್ನು ಯಾವುದೇ ಕಾರಣಕ್ಕೂ ಹೊರಗೆ ಬಿಡಬಾರದು. ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕೆಂದು ಮುಖಂಡರಾದ ಅಯ್ಯಣ್ಣ ಕದರಾಪರ ಮತ್ತು ರಡ್ಡಿ ಸಗರ ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ