ಬೆಂಕಿ ಹಚ್ಚಲು ಶಾ, ಶಾಂತಿ ಕದಡಲು ಮೋದಿ ಬರ್ತಾರೆ
Team Udayavani, Feb 5, 2018, 6:25 AM IST
ರಾಯಚೂರು: ರಾಜ್ಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೆಂಕಿ ಹಚ್ಚಲು ಬಂದರೆ, ಪ್ರಧಾನಿ ಮೋದಿ ಶಾಂತಿ ಕದಡಲು ಬರುತ್ತಾರೆ ಎಂದು ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಆರೋಪಿಸಿದರು.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಆಗಮಿಸುವ ಅಮಿತ್ ಶಾ ರಾಜ್ಯದಲ್ಲಿ ಎಷ್ಟು ಹೋರಾಟಗಳಾಗಿವೆ. ಎಷ್ಟು ದಂಗೆ ಮಾಡಿಸಿದ್ದಾರೆಂದು ಬೆಂಕಿ ಹಚ್ಚುವ ಮಾತನಾಡುತ್ತಾರೆ. ಇನ್ನು ಭಾಷಣ ಮಾಡುವುದರಲ್ಲಿ ಪ್ರಧಾನಿ ನರೇಂದ್ರ ಮೋದಿ ನಿಸ್ಸೀಮರು. ಆದರೆ, ಅವರ ಭಾಷಣಗಳಿಂದ ಹೊಟ್ಟೆ ತುಂಬುವುದಿಲ್ಲ. ಅವರು ರಾಜ್ಯಕ್ಕೆ ಭೇಟಿ ನೀಡುವುದರಿಂದ ಕಾಂಗ್ರೆಸ್ಗೆ ಯಾವುದೇ ನಷ್ಟವಿಲ್ಲ. ಬಿಜೆಪಿಯವರು ಹಿಂದುತ್ವದ ಹೆಸರಿನಲ್ಲಿ ಪಕ್ಷ ಸಂಘಟಿಸುತ್ತಿದ್ದಾರೆ. ಕೊಲೆಯಾದವರೆಲ್ಲ ಬಿಜೆಪಿ ಕಾರ್ಯಕರ್ತರಾಗುತ್ತಿದ್ದಾರೆ ಎಂದು ಟೀಕಿಸಿದರು.
ಬಿಜೆಪಿ ಯಾತ್ರೆ ಯಶಸ್ವಿಗೊಳಿಸಲು ಯಡಿಯೂರಪ್ಪನವರು ಹುಬ್ಬಳ್ಳಿಯಲ್ಲಿ ಮಹದಾಯಿ ಸಮಸ್ಯೆ ಪರಿಹರಿಸುವ ಭರವಸೆ ನೀಡಿದ್ದರು. ಆದರೆ, ಈ ವಿಚಾರದಲ್ಲಿ ಗೋವಾ ಸರ್ಕಾರ ಒಕ್ಕೂಟ ವ್ಯವಸ್ಥೆ ವಿರುದ್ಧ ನಡೆದುಕೊಂಡಿದೆ. ರಾಜ್ಯದ ಸಿಎಂ ಸಿದ್ದರಾಮಯ್ಯ ಪತ್ರ ಬರೆದರೆ ಅದಕ್ಕೆ ಗೋವಾ ಸರ್ಕಾರದ ನೀರಾವರಿ ಇಲಾಖೆ ಕಾರ್ಯದರ್ಶಿ ಉತ್ತರ ನೀಡದಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ