ಸಿದ್ದರಾಮಯ್ಯ ಬೋಗಸ್‌ ನಾಯಕ


Team Udayavani, Mar 8, 2018, 5:27 PM IST

ray-4.jpg

ಸಿಂಧನೂರು: ಹಿಂದುಳಿದ ವರ್ಗದ ಜನರಿಗಾಗಿ ಯಾವುದೇ ಅಭಿವೃದ್ದಿ ಕೆಲಸ ಮಾಡದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಬೋಗಸ್‌ ನಾಯಕರಾಗಿದ್ದಾರೆ ಎಂದು ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಕೆ.ಎಸ್‌.ಈಶ್ವರಪ್ಪ ಟೀಕಿಸಿದರು.

ಮಾ.10ರಂದು ಕೂಡಲಸಂಗಮದಲ್ಲಿ ನಡೆಯಲಿರುವ ಹಿಂದುಳಿದ ವರ್ಗಗಳ ಸಮಾವೇಶ ಪ್ರಯುಕ್ತ ಬುಧವಾರ ನಗರದ ಕನಕದಾಸ ಕಲ್ಯಾಣ ಮಂಟಪದಲ್ಲಿ ನಡೆದ ಜಿಲ್ಲಾ ಹಿಂದುಳಿದ ವರ್ಗಗಳ ಪೂರ್ವಭಾವಿ ಸಭೆಯಲ್ಲಿ ಅವರು
ಮಾತನಾಡಿದರು. 

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹಿಂದುಳಿದ ವರ್ಗದ ಜನರಿಗಾಗಿ ಯಾವುದೇ ಅಭಿವೃದ್ಧಿ ಕೆಲಸ ಮಾಡದೇ ಕಡೆಗಣಿಸಿದ್ದರಿಂಧ ಹಿಂದುಳಿದ ವರ್ಗದವರು ಕಾಂಗ್ರೆಸ್‌ ಪಕ್ಷದಿಂದ ದೂರ ಸರಿದು ಬಿಜೆಪಿ ಕಡೆ ವಾಲುತ್ತಿದ್ದಾರೆ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಬಗ್ಗೆ ಹಿಂದುಳಿದ ವರ್ಗ ಭ್ರಮನಿರಸನಗೊಂಡಿದೆ ಎಂದರು. 

ಜೈಲಿನಲ್ಲಿರುವ ಶಶಿಕಲಾಗೆ ಸಕಲ ಸೌಲಭ್ಯ ಒದಗಿಸುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದ್ದು ನೋಡಿದರೆ ಜೈಲಿಗೆ ಹೋಗಿ ಬಂದವರ ರೌಡಿಗಳ ಪಕ್ಷವಾಗಿದೆ. ಮುಂದಿನ ದಿನಮಾನಗಳಲ್ಲಿ ಸಿದ್ದರಾಮಯ್ಯ ಜೈಲಿಗೆ ಹೋಗುವ ಕಾಲ ದೂರವಿಲ್ಲ. ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಿಂದೂ ಮುಸ್ಲಿಮರ
ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿದರು.

ಮಾ.10ರಂದು ಕೂಡಲಸಂಗಮದಲ್ಲಿ ನಡೆಯುವ ಹಿಂದುಳಿದ ವರ್ಗದ ಸಮಾವೇಶದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಹಿಂದುಳಿದ ವರ್ಗದ ಶಕ್ತಿ ಸಾಮರ್ಥ್ಯವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ ಶಾ ಅವರಿಗೆ ತೋರಿಸಬೇಕು ಎಂದರು.

ಶಾಸಕ ತಿಪ್ಪರಾಜ ಹವಾಲ್ದಾರ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಬಸವರಾಜಗೌಡ ಜಾಡಲದಿನ್ನಿ, ಮಾಜಿ ಶಾಸಕರಾದ ಮಾನಪ್ಪ ವಜ್ಜಲ್‌, ಡಾ| ಶಿವರಾಜ ಪಾಟೀಲ್‌, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ, ರಘುನಾಥ ಮಲ್ಕಾಪುರ, ಕೋಟಾ ಶ್ರೀನಿವಾಸ ಪೂಜಾರ, ಎನ್‌.ಶಂಕ್ರಪ್ಪ, ರಾಜಶೇಖರ ಪಾಟೀಲ್‌, ಕೊಲ್ಲಾ ಶೇಷಗಿರಿರಾವ್‌, ಪಾಪಾರೆಡ್ಡಿ, ಮಹಾದೇವಪ್ಪಗೌಡ ಮಸ್ಕಿ, ಆರ್‌.ಬಸನಗೌಡ, ಎಂ.ದೊಡ್ಡಬಸವರಾಜ, ಅಮರೇಗೌಡ ವಿರೂಪಾಪುರ, ಗಂಗಾಧರ ನಾಯಕ, ಎನ್‌.ಸ್ವಾಮಿ, ಹನುಮನಗೌಡ ಬೆಳಗುರ್ಕಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.