ತಂದೆ ಚೆಕ್ ಮೂಲಕ, ಮಗ ಆರ್ ಟಿಜಿಎಸ್ ಮೂಲಕ ಲಂಚ: ಬಿಎಸ್ ವೈ ಕುಟುಂಬದ ವಿರುದ್ಧ ಸಿದ್ದು ಟೀಕೆ
Team Udayavani, Nov 23, 2020, 4:09 PM IST
ರಾಯಚೂರು: ಹಿಂದೆ ಬಿ.ಎಸ್.ಯಡಿಯೂರಪ್ಪ ಚೆಕ್ ಮೂಲಕ ಲಂಚ ಪಡೆದರೆ ಅವರ ಮಗ ಈಗ ಆರ್ ಟಿಜಿಎಸ್ ಮೂಲಕವೇ ಲಂಚ ಪಡೆದಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಮಸ್ಕಿಯಲ್ಲಿ ನಡೆದ ಕಾಂಗ್ರೆಸ್ ಬಹಿರಂಗ ಸಮಾವೇಶದಲ್ಲಿ ಮಾತನಾಡಿ, ಕೋವಿಡ್ ಸಾಮಗ್ರಿ ಖರೀದಿಯಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಎರಡು ಸಾವಿರ ಕೋಟಿ ಲಂಚ ಹೊಡೆದಿದ್ದಾರೆ. ಕೋವಿಡ್ ನಿಯಂತ್ರಣ ನೆಪದಲ್ಲಿ ಹಣ ಲೂಟಿ ಮಾಡುತ್ತಿದ್ದಾರೆ. ಇವರನ್ನು ಮನುಷ್ಯರು ಎನ್ನಬೇಕೊ? ಅಥವಾ ರಾಕ್ಷಸರು ಎನ್ನಬೇಕೊ? ಇವರೆಲ್ಲ ಮನುಷ್ಯತ್ವ ಇಲ್ಲದವರು ಎಂದ ಜರಿದರು.
ಭತ್ತಕ್ಕೆ ಬೆಂಬಲ ಬೆಲೆ ಕೊಡಲೇಬೇಕು. ಬೆಂಬಲ ಬೆಲೆ ನಿಮ್ಮಪ್ಪನ ಮನೆಯಿಂದ ಕೊಡುತ್ತಿಯಾ ಯಡಿಯೂರಪ್ಪ ಎಂದು ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅವರು, ಈ ಕುರಿತು ಡಿಸೆಂಬರ್ ನಲ್ಲಿ ನಡೆಯುವ ಅಧಿವೇಶನದಲ್ಲಿ ಪ್ರಶ್ನಿಸುತ್ತೇನೆ. ಕನಿಷ್ಠ 500 ರೂ. ಬೆಂಬಲ ಬೆಲೆ ನೀಡಲೆಬೇಕು. ಕೊಡದಿದ್ದಲ್ಲಿ ಅಧಿವೇಶನದಲ್ಲಿ ಕಾಂಗ್ರೆಸ್ ಹೋರಾಟ ಮಾಡಲಿದೆ ಎಂದರು.
ಇದನ್ನೂ ಓದಿ:ರೋಶನ್ ಬೇಗ್ ನಮ್ಮ ಪಕ್ಷದಲ್ಲಿಲ್ಲ, ನಮಗೂ ಅವರಿಗೂ ಸಂಬಂಧವಿಲ್ಲ: ಸಿದ್ದರಾಮಯ್ಯ
ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲಿಸುವ ಮೂಲಕ ಬಿಜೆಪಿಗೆ ಎಚ್ಚರಿಕೆ ನೀಡಬೇಕು ಎಂದು ಜನರಿಗೆ ಕರೆಕೊಟ್ಟ ಅವರು, ದೇಶದಲ್ಲಿ ಅತಿ ಹೆಚ್ಚು ಸುಳ್ಳು ಹೇಳಿದ ಪ್ರಧಾನಿ ನರೇಂದ್ರ ಮೋದಿ. ಕೋವಿಡ್ -19 ನಿಯಂತ್ರಣಕ್ಕೆ ಔಷಧ ಕಂಡು ಹಿಡಿಯುವುದು ಬಿಟ್ಟು ದೀಪ ಹಚ್ಚಿ ಗಂಟೆ ಬಾರಿಸಿದ್ರೆ ಸೋಂಕು ಹೋಗುತ್ತಾ ಎಂದು ವ್ಯಂಗ್ಯವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ
Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್ ಕಾನ್ಸ್ಟೆಬಲ್ ಗೆ ಗಾಯ
Brahmavara: ವಿದ್ಯುತ್ ಕಂಬ ಮುರಿದು ಬಿದ್ದು ಯುವಕ ಮೃತ್ಯು