ಸಿಂಧನೂರು: ಅಲೆಮಾರಿಗಳ ಕುಲಕಸುಬಿಗೂ ಕತ್ತರಿ
Team Udayavani, Apr 10, 2020, 7:12 PM IST
ಸಿಂಧನೂರು: ನಗರದ ಹಿರೇಲಿಂಗೇಶ್ವರ ಕಾಲೋನಿಯಲ್ಲಿ ವಾಸಿಸುವ ಅಲೆಮಾರಿ ಕುಟುಂಬಗಳು ಆಹಾರ, ಕುಡಿಯಲು ನೀರಿಲ್ಲದೆ ಪರದಾಡುತ್ತಿವೆ
ಸಿಂಧನೂರು: ನಗರದ ಹಿರೇಲಿಂಗೇಶ್ವರ ಕಾಲೋನಿಯಲ್ಲಿ ವಾಸಿಸುವ ನೂರಾರು ಅಲೆಮಾರಿ ಕುಟುಂಬಗಳ ಜನರ ಉಪ ಕಸುಬಿಗೂ ಕೊರೊನಾ ಸೋಂಕು ಕತ್ತರಿ ಹಾಕಿದೆ. ಹಿರೇಲಿಂಗೇಶ್ವರ ಕಾಲೋನಿಯಲ್ಲಿ ಸಿಂಧೋಳಿ, ಬುಡ್ಗ ಜಂಗಮ, ಸುಡುಗಾಡು ಸಿದ್ಧರ ನೂರಾರು ಕುಟುಂಬಗಳು ಕಳೆದ 30 ವರ್ಷಗಳಿಂದ ತಮ್ಮ ಕುಲಕಸುಬು ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಲಾಕ್ ಡೌನ್ ಹಿನ್ನೆಲೆಯಲ್ಲಿ ಜೀವನವೇ ದುಸ್ತರವಾಗಿದೆ.
ಈ ಅಲೆಮಾರಿ ಕುಟುಂಬಗಳು ತಮ್ಮ ಕುಲ ಕಸುಬಾದ ದುರ್ಗಮ್ಮ, ಮರಗಮ್ಮಳನ್ನು ಆಡಿಸುತ್ತಾ ಮೈಮೇಲೆ ಬಾರುಕೋಲಿನಿಂದ ಬಡಿದುಕೊಳ್ಳುತ್ತಾ, ಬೀದಿಯಲ್ಲಿ ಭಿಕ್ಷೆ ಬೇಡಿ, ದಿನ ನಿತ್ಯ ಸಣ್ಣ ಪುಟ್ಟ ವ್ಯಾಪಾರ ಮಾಡುತ್ತಾ ತಮ್ಮ ಜೀವನ ಸಾಗಿಸುತ್ತಿದ್ದರು. ಸ್ವಂತ ಮನೆಯಿಲ್ಲದೇ ಖಾಲಿ ಜಾಗೆಯಲ್ಲಿ ಬಟ್ಟೆಯ ಗುಡಿಸಲು ಹಾಕಿಕೊಂಡು ವಾಸಿಸುವ ಇವರಿಗೀಗ ಊಟಕ್ಕೂ ಗತಿ ಇಲ್ಲದಂತಾಗಿದೆ.
ಶಾಸಕ ವೆಂಕಟರಾವ್ ನಾಡಗೌಡ, ತಾಲೂಕು ಆಡಳಿತ, ನಗರಸಭೆ ಅಧಿಕಾರಿಗಳಿಗೆ ಅಲೆಮಾರಿಗಳಿಗೆ ಆಹಾರ ಹಾಗೂ ಅಗತ್ಯ ಮೂಲಭೂತ ಸೌಲಭ್ಯ ಒದಗಿಸುವಂತೆ ಅನೇಕ ಸಂಘಟನೆಗಳು ಒತ್ತಾಯಿಸಿವೆ. ಆದರೆ ಇನ್ನೂವರೆಗೂ ಯಾರೂ ನೆರವಿಗೆ ಬಂದಿಲ್ಲ.
ಲಾಕ್ ಡೌನ್ನಿಂದಾಗಿ ಅಲೆಮಾರಿ ಕುಟುಂಬದವರು ಜೀವನ ನಡೆಸುವುದೇ ದುಸ್ತರವಾಗಿದೆ. ಈ ಜನರಿಗೆ ಆಹಾರ ಹಾಗೂ ಕುಡಿಯಲು ನೀರು ಒದಗಿಸುವಂತೆ ಶಾಸಕರಿಗೆ, ತಾಲೂಕು ಆಡಳಿತಕ್ಕೆ ಹಾಗೂ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ.
ಎಂ.ಗಂಗಾಧರ, ಸಿಪಿಐಎಂಎಲ್
ರಾಜ್ಯ ಸಮಿತಿ ಸದಸ್ಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್