ಆನಂದ ತೇಲ್ತುಂಬ್ಡೆ ಬಿಡುಗಡೆಗೆ ಆಗ್ರಹ

ಮಹಾರಾಷ್ಟ್ರ-ಕೇಂದ್ರ ಸರ್ಕಾರ ನೈಜ ಆರೋಪಿಗಳ ಬಿಡುಗಡೆ ಮಾಡಿರುವುದು ಜನವಿರೋಧಿ ನೀತಿ

Team Udayavani, May 18, 2020, 11:54 AM IST

18-May-22

ಸಿಂಧನೂರು:ಎಐಟಿಯುಸಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ಪ್ರತಿಭಟನೆ ನಡೆಸಿದರು

ಸಿಂಧನೂರು: ಭೀಮಾ ಕೋರೆಗಾಂವ ಪ್ರಕರಣದಲ್ಲಿ ಬಂಧಿತರಾಗಿರುವ ಮಾನವ ಹಕ್ಕುಗಳ ಹೋರಾಟಗಾರ ಆನಂದ್‌ ತೇಲ್ತುಂಬ್ಡೆ
ಮತ್ತಿತರನ್ನು ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ನಗರದ ಎಪಿಎಂಸಿ ಪ್ರಾಂಗಣದಲ್ಲಿರುವ ಎಐಟಿಯುಸಿ ಕಚೇರಿ ಎದುರು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖಂಡರು ರವಿವಾರ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ಸಂಚಾಲಕ ಚಂದ್ರಶೇಖರ ಗೊರಬಾಳ, ಮಹಾರಾಷ್ಟ್ರದ ಭೀಮಾ ಕೋರೆಗಾಂವ ಪ್ರಕರಣದಲ್ಲಿ ಮಾನವ ಹಕ್ಕುಗಳ ಹೋರಾಟಗಾರರನ್ನು ದುರುದ್ದೇಶಪೂರ್ವಕವಾಗಿ ತಳುಕುಹಾಕಿ ಆನಂದ ತೇಲ್ತುಂಬ್ಡೆ, ಗೌತಮ್‌ ನವಲಖ್‌ ಮತ್ತಿತರರನ್ನು ಬಂಧಿಸಿರುವುದು ಖಂಡನೀಯ. ಪ್ರಕರಣದಲ್ಲಿ ನೈಜ ಆರೋಪಿಗಳನ್ನು ಮಹಾರಾಷ್ಟ್ರ ಮತ್ತು ಕೇಂದ್ರದ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿರುವುದು ಜನವಿರೋಧಿ ನೀತಿಗೆ ಜ್ವಲಂತ ಸಾಕ್ಷಿಯಾಗಿದೆ ಎಂದು ದೂರಿದರು.

ಆನಂದ ತೇಲ್ತುಂಬ್ಡೆ ಅವರು ದಲಿತ, ದಮನಿತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯಗಳ ವಿರುದ್ಧ ನಿರಂತರ ಧ್ವನಿ ಎತ್ತುತ್ತ ಬಂದವರು. ಖೈರ್ಲಾಂಜಿ ಹತ್ಯಾಕಾಂಡವೂ ಸೇರಿ ದಲಿತ, ದಮನಿತರ ಮೇಲೆ ದೇಶಾದ್ಯಂತ ನಡೆಯುತ್ತಿರುವ ದೌರ್ಜನ್ಯ ಗುರುತಿಸಿ ಅವುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ತಲುಪಿಸಿ ಜನವಿರೋಧಿ, ಅಪ್ರಜಾತಾಂತ್ರಿಕ ಆಳುವ ವರ್ಗಗಳ ನಿಜಬಣ್ಣ ಬಯಲು ಮಾಡಿದ್ದಾರೆ. ಅಂಬೇಡ್ಕರ್‌ ಕುಟುಂಬದ ಸದಸ್ಯರು ಆಗಿರುವ ತೇಲ್ತುಂಬ್ಡೆ ಅವರನ್ನು ಅಂಬೇಡ್ಕರ್‌ ಜಯಂತಿ ದಿನವೇ ಬಂಧಿಸಿರುವುದು ಸರ್ಕಾರದ ದುರುದ್ದೇಶ ಏನು ಎನ್ನುವುದು ಸ್ಪಷ್ಟವಾಗಿದೆ ಎಂದು ಆಪಾದಿಸಿದರು.

ಸಿಐಟಿಯು ಜಿಲ್ಲಾ ಘಟಕದ ಕಾರ್ಯದರ್ಶಿ ಶೇಕ್ಷಾಖಾದ್ರಿ ಮಾತನಾಡಿ, ಮಹಾರಾಷ್ಟ್ರದಲ್ಲಿ ಎರಡು ವರ್ಷಗಳ ಹಿಂದೆ ಕೋರೆಗಾಂವ ವಿಜಯ ದಿನದಂದು, ದಲಿತರನ್ನು ಸಂಘಟಿಸಿ ಬೃಹತ್‌ ಸಮಾವೇಶವೊಂದನ್ನು ನಡೆಸಿ ಸಂಘ ಪರಿವಾರಕ್ಕೆ ಸವಾಲು ಹಾಕಿರುವುದೇ ಮಾನವ ಹಕ್ಕು ಹೋರಾಟಗಾರರ ಸರಣಿ ಬಂಧನಗಳಿಗೆ ಕಾರಣವಾಗಿದೆ. ವಿಜಯ ದಿವಸ್‌ ತಡೆಯಲು ಸಂಘ ಪರಿವಾರದ ಕಾರ್ಯಕರ್ತರು ಹಿಂಸಾತ್ಮಕ ಪ್ರಯತ್ನ ನಡೆಸಿದರಾದರೂ ಅದನ್ನು ಅಷ್ಟೇ ತೀವ್ರವಾಗಿ ದಲಿತ ಕಾರ್ಯಕರ್ತರು ಪ್ರತಿರೋಧಿಸಿದ್ದಾರೆ. ಈ ಘಟನೆಯನ್ನೇ ನೆಪವಾಗಿಟ್ಟುಕೊಂಡು ಅತ್ಯಂತ ಕಠಿಣ ಕಾನೂನಿನಡಿಯಲ್ಲಿ ಯಾವುದೇ ಸಾಕ್ಷ್ಯಾಧಾರಗಳಿಲ್ಲದೇ ಆನಂದ ತೇಲ್ತುಂಬ್ಡೆ, ಗೌತಮ ನವಲಕ್‌, ಸುಧೀರ ಧವಳೆ, ಸುರೇಂದ್ರ ಗಾಡ್ಲಿಂಗ, ಮಹೇಶ ರಾವುತ್‌, ಶೋಮಾ ಸೇನ್‌, ವೆರ್ನಾನ್‌ ಗೋನಸಾಲ್ವೇಸ್‌, ವರವರರಾವ್‌, ಸುಧಾ ಭಾರಧ್ವಾಜ್‌, ಅರುಣ ಫೆರೆರಾ, ರೋನಾ ವಿಲ್ಸನ್‌ ಅವರ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿರುವುದು ಇದರ ಉದ್ದೇಶ ಎಲ್ಲ ಮಾನವ ಹಕ್ಕು ಹೋರಾಟಗಾರರು, ದಲಿತ ಚಿಂತಕರನ್ನು ಜೈಲಿಗಟ್ಟಿ ನ್ಯಾಯವನ್ನು ಶಾಶ್ವತವಾಗಿ ಸಮಾಧಿ ಮಾಡುವುದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಒಕ್ಕೂಟದ ಮುಖಂಡರಾದ ಶೇಕ್ಷಾಖಾದ್ರಿ, ಎಸ್‌. ದೇವೇಂದ್ರಗೌಡ, ಡಿ.ಎಚ್‌. ಕಂಬಳಿ, ನಾರಾಯಣ ಬೆಳಗುರ್ಕಿ, ನಾಗರಾಜ ಪೂಜಾರ, ಬಸವರಾಜ ಏಕ್ಕಿ ಮಾತನಾಡಿದರು. ಮುಖಂಡರಾದ ಬಸವರಾಜ ಬಾದರ್ಲಿ, ಬಿ.ಎನ್‌. ಯರದಿಹಾಳ, ಅಮೀನಸಾಬ ನದಾಫ್‌, ವಿರುಪಣ್ಣ, ಮಹಾದೇವ ಅಮರಾಪುರ ಇದ್ದರು

ಟಾಪ್ ನ್ಯೂಸ್

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.