Sindhanur: ಐದೇ ದಿನದಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರ ಬಂಧನ

ಅಡ್ಡಿಪಡಿಸಲು ಬಂದವರಿಗೆ ಬಿಸಿ... ಎಸ್ ಪಿ ಶ್ಲಾಘನೆ, ಬಹುಮಾನ ಘೋಷಣೆ

Team Udayavani, Oct 8, 2023, 11:57 PM IST

1-sadsadsad

ಸಿಂಧನೂರು: ತಾಲೂಕಿನ ಪಗಡದಿನ್ನಿ ಕ್ಯಾಂಪಿನ ವಿ.ವಾಸು ಎನ್ನುವವರ ಮನೆಯಲ್ಲಿ ಅ.3ರಂದು ನಡೆದಿದ್ದ ಕಳ್ಳತನ ಪ್ರಕರಣವನ್ನು ಭೇದಿಸುವಲ್ಲಿ ಗ್ರಾಮೀಣ ಠಾಣೆ ಪೊಲೀಸರು ಯಶಸ್ವಿಯಾಗಿದ್ದು, ಭಾನುವಾರ ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಮಸ್ಕಿ ತಾಲೂಕಿನ ಬೇಡರಕಾರಲಕುಂಟಿ ಗ್ರಾಮದ ಸೋಮಣ್ಣ (20), ಪಗಡದಿನ್ನಿ ಪೈ ಕ್ಯಾಂಪಿನ ಬಸವರಾಜ ಅಂಥೋನಿ (31) ಬಂಧಿತರು.
ಮಧ್ಯಾಹ್ನ 6.30ರಿಂದ 7.30ರ ಸುಮಾರಿಗೆ ಮನೆಯ ಹಿಂಬಾಗಿಲನ್ನು ಜೋರಾಗಿ ತಳ್ಳಿ ಒಳಗಿ ನುಗ್ಗಿ ಬ್ಯುರೋದಲ್ಲಿದ್ದ ಚಿನ್ನಾಭರಣ, ನಗದು ದೋಚಿದ್ದಾರೆ ಎಂದು ಪಿ.ವಾಸು ದೂರು ಸಲ್ಲಿಸಿದ್ದರು. ಆರೋಪಿಗಳನ್ನು ಬಂಧಿಸಿರುವ ಪೊಲೀಸರು 22 ತೊಲೆ ಚಿನ್ನಾಭರಣವನ್ನು ಜಪ್ತಿ ಮಾಡಿದ್ದಾರೆ.

ಚಿನ್ನಾಭರಣ, ನಗದು ಕಳವು
ಅ.3ರಂದು ಮನೆಗೆ ನುಗ್ಗಿದ ಕಳ್ಳರು, 2 ಲಕ್ಷ ರೂ.ಮೌಲ್ಯದ 60 ಗ್ರಾಂ.ತೂಕದ 4 ಬಂಗಾರದ ಬಳೆ, 1.80 ಲಕ್ಷ ರೂ.ಬೆಲೆ ಬಾಳುವ ಬಂಗಾರದ ನೆಕ್ಲೇಸ್, 75 ಸಾವಿರ ರೂ.ಮೌಲ್ಯದ 20 ಗ್ರಾ.ಂ.ಬ್ರಾಸ್‍ಲೆಟ್, 90 ಸಾವಿರ ರೂ.ಮೌಲ್ಯದ 30 ಗ್ರಾಂ.ಕರಿಮಣಿ ಸರ, 12 ಗ್ರಾಂ.ತೂಕದ 40 ಸಾವಿರ ರೂ.ಬೆಲೆ ಬಾಳುವ ಬಂಗಾರದ ಸರ, 95 ಸಾವಿರ ರೂ.ಮೌಲ್ಯದ 30 ಗ್ರಾಂ.ಬಂಗಾರದ ಓಲೆ, 40 ಸಾವಿರ ರೂ.ಮೌಲ್ಯದ 3 ಬಂಗಾರದ ಉಂಗುರ, ನಗದು ಹಣ 35 ಸಾವಿರ ರೂ.ಸೇರಿದಂತೆ ಒಟ್ಟು 7 ಲಕ್ಷ 55 ಸಾವಿರ ರೂ.ಮೌಲ್ಯದ ಚಿನ್ನಾಭರಣ, ನಗದು ಕಳವು ಮಾಡಿದ್ದಾರೆಂಬ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿತ್ತು.

ಎಸ್ಪಿ ಶ್ಲಾಘನೆ
ಪ್ರಕರಣದ ತನಿಖೆಗಾಗಿ ಡಿವೈಎಸ್ಪಿ ಬಿ.ಎಸ್.ತಳವಾರ ನೇತೃತ್ವದಲ್ಲಿ ಗ್ರಾಮೀಣ ಸಿಪಿಐ ವೀರಾರೆಡ್ಡಿ.ಹೆಚ್, ಪಿಎಸ್‍ಐ ಭರತ್‍ಪ್ರಕಾಶ್ ಡಿ.ಪಿ., ಚಂದ್ರಶೇಖರ ಹಿರೇಮಠ, ಪ್ರಹ್ಲಾದ್ ನಾಯ್ಕ, ಮಲ್ಲಪ್ಪ ನಾಗರಾಳ, ಗೋಪಾಲ, ಅನಿಲಕುಮಾರ, ಶಿವಲಿಂಗಪ್ಪ, ತಿಪ್ಪಣ್ಣ, ಸಂಗನಗೌಡ, ಸಂಗಮೇಶ ಗುಡದೂರು, ಸಿಡಿಆರ್‍ಸೆಲ್‍ನ ಅಜೀಂ ತಂಡವನ್ನು ರಚಿಸಲಾಗಿತ್ತು. 5 ದಿನದಲ್ಲಿ ತಂಡವು ಕಾರ್ಯಾಚರಣೆ ನಡೆಸಿ ಕಳ್ಳರನ್ನು ಬಂಧಿಸಿ, ಕಳವಾದ ಚಿನ್ನಾಭರಣ ಮಾಡುವಲ್ಲಿ ಯಶಸ್ವಿಯಾಗಿರುವುದಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್, ಹೆಚ್ಚುವರಿ ಎಸ್ಪಿ ಶಿವಕುಮಾರ್.ಆರ್.ಪ್ರಶಂಸೆ ವ್ಯಕ್ತಪಡಿಸಿ, ಬಹುಮಾನ ಘೋಷಿಸಿದ್ದಾರೆ.

ಅಡ್ಡಿಪಡಿಸಲು ಬಂದವರಿಗೆ ಬಿಸಿ
ಬಂಧಿತ ಆರೋಪಿಗಳ ಆರೋಗ್ಯ ಪರೀಕ್ಷೆಗಾಗಿ ತಾಲೂಕು ಆಸ್ಪತ್ರೆಗೆ ಕರೆತಂದ ವೇಳೆ ಯಾರೋ ಕೆಲವರು ಆಗಮಿಸಿ, ಪೊಲೀಸರಿಗೆ ಅನೇಕ ಪ್ರಶ್ನೆಯೊಡ್ಡುವ ಮೂಲಕ ಕೆಲ ಹೊತ್ತು ಗೊಂದಲ ಸೃಷ್ಟಿಸಿದರು. ದಿಢೀರ್ ಜಾಗೃತರಾದ ಪೊಲೀಸರು, ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಲು ನೀವು ಯಾರು? ಎಂದು ಗದರಿಸಿ ಪೊಲೀಸ್ ಜೀಪಿನಲ್ಲಿ ಹತ್ತಿಸಲು ಮುಂದಾಗುತ್ತಿದ್ದಂತೆ ಅಲ್ಲಿಂದ ಪರಾರಿಯಾದರು.

ಟಾಪ್ ನ್ಯೂಸ್

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.