ಬಿಸಿಲಿನ ತಾಪಕ್ಕೆ ಬಸವಳಿದ ಜನ


Team Udayavani, Mar 1, 2020, 11:55 AM IST

1-March-07

ಸಿಂಧನೂರು: ಬೇಸಿಗೆಯ ಆರಂಭದಲ್ಲೇ ಬಿಸಿಲಿನ ತಾಪ ಹೆಚ್ಚಿದ್ದು, ರಣ ಬಿಸಲಿಗೆ ಜನ ಮನೆಯಿಂದ ಹೊರಗೆ ಬರಲು ಹಿಂದೇಟು ಹಾಕುವಂತಾಗಿದೆ. ಸಿಂಧನೂರು ತಾಲೂಕಿನಲ್ಲಿ ಕಳೆದ ವರ್ಷ 42-43 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿತ್ತು. ಆದರೆ ಈ ಬಾರಿ ಫೆಬ್ರವರಿ ಕೊನೆ ವಾರದಲ್ಲೇ 37ರಿಂದ 38 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಈಗಲೇ ಬಿಸಿಲಿನ ಶಾಖಕ್ಕೆ ಹೈರಾಣಾಗಿರುವ ಜನತೆ ಮಾರ್ಚ್‌, ಏಪ್ರಿಲ್‌, ಮೇ ತಿಂಗಳಿನಲ್ಲಿನ ಬಿಸಿಲು ಹೇಗಿರಬಹುದು ಎಂದು ಈಗಲೇ ಆತಂಕಗೊಳ್ಳುವಂತಾಗಿದೆ.

ಬಿಸಿಲಿನ ತಾಪ ಹೆಚ್ಚಿರುವುದರಿಂದ ಜನತೆ ಮಧ್ಯಾಹ್ನದ ಒಳಗೆ ಕೆಲಸ- ಕಾರ್ಯಗಳನ್ನು ಮುಗಿಸಿ ಮನೆ ಸೇರುತ್ತಿರುವುದು ಕಂಡು ಬರುತ್ತಿದೆ. ಇನ್ನು ಬೇಸಿಗೆ ರಜೆಯಲ್ಲಿ ಕೋಚಿಂಗ್‌ ಕ್ಲಾಸ್‌ಗೆ ಹೋಗುವ ವಿದ್ಯಾರ್ಥಿಗಳು ಕೂಡ ಕ್ಲಾಸ್‌ಗೆ ಹೋಗಲು ಹಿಂಜರಿಯುತ್ತಿದ್ದಾರೆ.

ತಂಪು ಪಾನೀಯಕ್ಕೆ ಮೊರೆ: ಇನ್ನು ಬಿಸಲಿನ ತಾಪಕ್ಕೆ ಬಸವಳಿದ ಜನರು ಮಧ್ಯಾಹ್ನ ದಾಹ ತಣಿಸಿಕೊಳ್ಳಲು ತಂಪು ಪಾನೀಯ, ಕಲ್ಲಂಗಡಿ ಹಣ್ಣು, ಎಳನೀರು, ಕಬ್ಬಿನ ಹಾಲು, ಐಸ್‌ ಕ್ರೀಮ್‌ ಮೊರೆ ಹೋಗುತ್ತಿದ್ದಾರೆ. ಪಟ್ಟಣದ ಮಹಾವೀರ ವೃತ್ತ, ಬಡಿಬೇಸ್‌ ವೃತ್ತ, ಬಸವೇಶ್ವರ ವೃತ್ತ, ಮಹಾತ್ಮ ಗಾಂಧಿ ವೃತ್ತ, ಕಿತ್ತೂರು ರಾಣಿ ಚೆನ್ನಮ್ಮ ವೃತ್ತ, ಅಂಬೇಡ್ಕರ್‌ ವೃತ್ತ ಸೇರಿ ಜನನಿಬಿಡ ರಸ್ತೆಗಳಲ್ಲಿ ಕಲ್ಲಂಗಡಿ ಹಣ್ಣು ಮಾರಾಟ ಜೋರಾಗಿ ನಡೆಯುತ್ತಿದೆ. ಹೆಚ್ಚುತ್ತಿರುವ ಬಿಸಿಲಿನ ತಾಪಕ್ಕೆ ಜನರು ಕಲ್ಲಂಗಡಿ ಹಣ್ಣು ತಿಂದು ಬಾಯಿ ತಂಪು ಮಾಡಿಕೊಳ್ಳುತ್ತಿದ್ದಾರೆ .

ಕಳೆದ ವರ್ಷಕ್ಕಿಂತ ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಾಗಿದೆ. ಮನೆಯಲ್ಲೂ ಬಿಸಿಲಿನ ತಾಪ ಹೆಚ್ಚು ಕಾಣುತ್ತಿದೆ. ರಸ್ತೆ ಬದಿಯಲ್ಲಿ ಗಿಡ-ಮರಗಳಿಲ್ಲದಿರುವುದು ಬಿಸಿಲಿನ ತಾಪ ಹೆಚ್ಚಾಗಲು ಕಾರಣವಾಗಿದೆ. ದಾಹ ತಣಿಸಿಕೊಳ್ಳಲು ತಂಪು ಪಾನೀಯ ಕುಡಿಯುವುದು ಅನಿವಾರ್ಯವಾಗಿದೆ.
ನಿರುಪಾದಿ ಗೋಸ್ಲೆ,
ಸಿಂಧನೂರು

ಪ್ರತಿ ಬಾರಿ ಏಪ್ರಿಲ್‌ನಲ್ಲಿ ಬಿಸಿಲಿನ ತಾಪಮಾನ ಕಂಡು ಬರುತ್ತಿತ್ತು.ಆದರೆ ಈ ಬಾರಿ ಫೆಬ್ರವರಿ ಕೊನೆ ವಾರದಲ್ಲೇ ಬಿಸಿಲಿನ ತಾಪಮಾನ ಹೆಚ್ಚಿದ್ದರಿಂದ ಕಲ್ಲಂಗಡಿ ಹಣ್ಣಿನ ವ್ಯಾಪಾರ ಚೆನ್ನಾಗಿ ಆಗುತ್ತಿದೆ. ಆದರೆ ನಮಗೂ ಬಿಸಿಲಲ್ಲಿ ನಿಂತು ವ್ಯಾಪಾರ ಮಾಡಲಾಗುತ್ತಿಲ್ಲ.
ಬಸವರಾಜ,
ಕಲ್ಲಂಗಡಿ ಹಣ್ಣಿನ ವ್ಯಾಪಾರಿ

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.