ಸಿಂಧನೂರು ತಾಲೂಕು ಆರೋಗ್ಯಾಧಿಕಾರಿಗೂ ಕೋವಿಡ್-19 ಪಾಸಿಟಿವ್
Team Udayavani, Jul 11, 2020, 10:45 AM IST
ರಾಯಚೂರು: ಕೋವಿಡ್-19 ವೈರಸ್ ಹರಡದಂತೆ ಶ್ರಮಿಸುತ್ತಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಕೂಡ ಸೋಂಕಿಗೆ ತುತ್ತಾಗುತ್ತಿದ್ದು, ಸಿಂಧನೂರು ತಾಲೂಕು ಆರೋಗ್ಯಾಧಿಕಾರಿಗೂ ಪಾಸಿಟಿವ್ ಇರುವುದು ದೃಡಪಟ್ಟಿದೆ.
ಶುಕ್ರವಾರ ಬಂದ ವರದಿಯಲ್ಲಿ ಪಾಸಿಟಿವ್ ಇರುವುದು ದೃಢಪಟ್ಟಿದ್ದು ಈಗ ಅವರನ್ನು ಐಸೊಲೇಶನ್ ಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಆರೋಗ್ಯಾಧಿಕಾರಿ ಸಾಕಷ್ಟು ಕಡೆ ಓಡಾಟ ಮಾಡಿದ್ದರು. ಸೋಂಕಿತರ ಸಂಪರ್ಕದಿಂದ ಪಾಸಿಟಿವ್ ಬಂದಿರಬಹುದು ಎನ್ನಲಾಗುತ್ತಿದೆ.
ಅಲ್ಲದೇ ಕೆಲ ದಿನಗಳಿಂದ ಆರೋಗ್ಯಾಧಿಕಾರಿ ನಿರಂತರ ಸಭೆಗಳಲ್ಲಿ ಭಾಗಿಯಾಗಿರುವುದು ಆತಂಕ ಮೂಡಿಸಿದೆ. ಈಚೆಗೆ ಟಿಎಲ್ ಬಿಸಿಗೆ ನೀರು ಹರಿಸುವ ಸಂಬಂಧ ಕೊಪ್ಪಳ ರಾಯಚೂರು ಜಿಲ್ಲಾಧಿಕಾರಿಗಳ ಸಭೆ ಸಿಂಧನೂರಿನಲ್ಲಿ ನಡೆದಿತ್ತು. ಆ ಸಭೆಯಲ್ಲೂ ಟಿಎಚ್ಒ ಭಾಗಿಯಾಗಿದ್ದರು.
ಟಿಎಚ್ ಒ ಪ್ರಾಥಮಿಕ, ದ್ವಿತೀಯ ಸಂಪರ್ಕದ ಮಾಹಿತಿ ಕಲೆ ಹಾಕಲಾಗುತ್ತಿದೆ. ಕಚೇರಿಯನ್ನು ಸ್ಯಾನಿಟೈಜ್ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾ ಕುಟುಂಬ ಹಾಗೂ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್