ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ
Team Udayavani, May 11, 2020, 12:15 PM IST
ಸಿರವಾರ: ಬಲ್ಲಟಗಿ ಬಸವಣ್ಣ ಕ್ಯಾಂಪ್ನಲ್ಲಿ ಸೇವಾ ರಸ್ತೆಯಗಳ ಮೆಟ್ಲಿಂಗ್ ಕಾಮಗಾರಿಗೆ ಶಾಸಕ ರಾಜಾ ವೆಂಕಟಪ್ಪ ನಾಯಕ ಭೂಮಿಪೂಜೆ ನೆರವೇರಿಸಿದರು.
ಸಿರವಾರ: ಗ್ರಾಮ ಮಟ್ಟದಲ್ಲಿ ಅಭಿವೃದ್ದಿಯಾದರೆ ಮಾತ್ರ ಎಲ್ಲರಿಗೂ ಅನುಕೂಲ. ಅದಕ್ಕಾಗಿ ಅಭಿವೃದ್ಧಿ ಕಾರ್ಯಗಳಿಗೆ ಮೊದಲ ಆದ್ಯತೆ ನೀಡುತ್ತೇನೆ ಎಂದು ಶಾಸಕ ರಾಜಾವೆಂಕಟಪ್ಪ ನಾಯಕ ಹೇಳಿದರು.
ತಾಲೂಕಿನ ಬಲ್ಲಟಗಿ ಬಸವಣ್ಣ ಕ್ಯಾಂಪ್ನಲ್ಲಿ ತುಂಗಭದ್ರಾ ಎಡದಂಡೆ ಮುಖ್ಯ ಕಾಲುವೆ ಮತ್ತು ಉಪ ಕಾಲುವೆಗಳಿಗೆ ಎರಡು ಬದಿ ಸೇವಾ ರಸ್ತೆಗಳಿಗೆ ಮೆಟ್ಲಿಂಗ್ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು. ಎಡದಂಡೆ ನಾಲೆ ಕೊನೆ ಭಾಗಕ್ಕೆ ಸಮರ್ಪಕವಾಗಿ ನೀರು ತಲುಪದೇ ರೈತರು ಪರದಾಡುತ್ತಿದ್ದಾರೆ. ನಾಲೆ ರಸ್ತೆಗಳು ಹಾಳಾಗಿದ್ದರಿಂದ ಅಧಿಕಾರಿಗಳು ಸಂಚರಿಸಲು ತೊಂದರೆಯಾಗುತ್ತಿತ್ತು. ಇದರಿಂದ ನೀರಿನ ಕಳ್ಳತನ ತಡೆಯಲು ಅಡ್ಡಿಯಾಗಿತ್ತು. ರಸ್ತೆ ನಿರ್ಮಾಣ ಮಾಡುವುದರಿಂದ ಕೆಳ ಭಾಗಕ್ಕೆ ಸಮರ್ಪಕವಾಗಿ ನೀರು ಹರಿಸುವುದಕ್ಕೆ ಅನುಕೂಲವಾಗುತ್ತದೆ ಎಂದು ಹೇಳಿದರು.
ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಬಲ್ಲಟಗಿ, ಜಿ. ಲೋಕರೆಡ್ಡಿ, ಜಂಬುನಾಥ ಯಾದವ, ರಾಜಾ ರಾಮಚಂದ್ರ ನಾಯಕ, ನಾಗರಾಜ ಭೋಗವತಿ, ಸಂತೋಷ ಹೂಗಾರ, ಗೋಪಾಲ ನಾಯಕ ಹರವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ