ಜಾನುವಾರುಗಳಿಗೆ ಚರ್ಮಗಂಟು ರೋಗ
ತಾಲೂಕಿನಲ್ಲಿ 5 ಸಾವಿರಕ್ಕೂ ಹೆಚ್ಚು ಎತ್ತು-ಆಕಳಲ್ಲಿ ರೋಗ ಪತ್ತೆ
Team Udayavani, Oct 14, 2020, 4:52 PM IST
ದೇವದುರ್ಗ: ತಾಲೂಕಿನಲ್ಲಿ ಎತ್ತು, ಆಕಳುಗಳಲ್ಲಿ ಚರ್ಮಗಂಟು ರೋಗ ಕಾಣಿಸಿಕೊಂಡಿದ್ದು, ಈ ವರೆಗೆ ಸುಮಾರು 5 ಸಾವಿರಕ್ಕೂ ಅಧಿಕ ಜಾನುವಾರುಗಳಲ್ಲಿ ರೋಗ ಪತ್ತೆಯಾಗಿದೆ. ಈ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ರೈತರು ಪರದಾಡುವಂತಾಗಿದೆ.
ರೋಗದ ಲಕ್ಷಣಗಳು: ಚರ್ಮಗಂಟು ರೋಗ ಕಂಡು ಬಂದ ಎತ್ತು, ಆಕಳುಗಳಲ್ಲಿ ಅತಿಯಾದ ಜ್ವರ, ಕಣ್ಣುಗಳಿಂದ ನೀರು ಸೋರುವುದು ನಿಶ್ಯಕ್ತಿ, ಕಾಲುಗಳಲ್ಲಿ ಬಾವು ಹಾಗೂ ಕುಟುಂವುದು, ಮೈಮೇಲೆ 2.5 ಸೆಂ.ಮೀ.ನಷ್ಟು ಅಗಲದ ಗುಳ್ಳೆಗಳು ಕಾಣಿಸಿಕೊಳ್ಳುತ್ತಿವೆ. ಗುಳ್ಳೆಗಳ ಮೇಲೆ ಗಾಯವಾಗಿ ಹುಳುಗಳು ಬಿದ್ದು, ಹುಣ್ಣಾಗುತ್ತದೆ.ರೋಗ ಪತ್ತೆಯಾದ ಜಾನುವಾರುಗಳಲ್ಲಿ ಹಾಲಿನ ಇಳುವರಿ ಕಡಿಮೆಯಾಗುವುದು.ಗರ್ಭಪಾತವಾಗುವ ಸಾಧ್ಯತೆ ಹೆಚ್ಚಿರುತ್ತದೆ. ಈ ಕಾಯಿಲೆ ಸಾಂಕ್ರಾಮಿಕವಾಗಿದ್ದು, ಎತ್ತು, ಆಕಳುಗಳನ್ನು ಒಂದೆಡೆ ಕಟ್ಟಿಹಾಕದೇ ಬೇರೆ ಬೇರೆ ಕಟ್ಟಿ ಹಾಕಬೇಕು ಎಂದು ಪಶುವೈದ್ಯರು ತಿಳಿಸಿದ್ದಾರೆ.
ಜಾನುವಾರುಗಳಿಗೆ ಲಸಿಕೆ: ತಾಲೂಕಿನ 33 ಗ್ರಾಪಂ ವ್ಯಾಪ್ತಿಯಲ್ಲಿ ಕಾಲುಬಾಯಿ ರೋಗದಮುನ್ನೆಚ್ಚರಿಕೆ ಕ್ರಮವಾಗಿ ಜಾನುವಾರುಗಳಿಗೆ ಲಸಿಕೆ ಹಾಕಲಾಗುತ್ತಿದೆ. ಕಾಲುಬಾಯಿ ರೋಗವುಎತ್ತು, ಹೋರಿ, ಹಸು, ಎಮ್ಮೆ, ಹಂದಿಗಳಿಗೆ ತಗಲುವ ಮಾರಕ ರೋಗವಾಗಿದೆ, ಹೀಗಾಗಿ ಲಸಿಕೆ ಹಾಕಲಾಗುತ್ತಿದೆ. ಇದೊಂದು ವೈರಾಣು ರೋಗವಾಗಿದ್ದು, ಲಸಿಕೆ ಹಾಕುವುದರಿಂದ ರೋಗ ನಿಯಂತ್ರಣ ಬರುತ್ತದೆ. ಪಶು ಸಂಗೋಪನಾಇಲಾಖೆಯಿಂದ ಉಚಿತ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ಜಾನುವಾರುಗಳಲ್ಲಿ ಯಾವುದೇರೋಗದ ಲಕ್ಷಣಗಳು ಕಂಡು ಬಂದಲ್ಲಿ ಪಶು ವೈದ್ಯರನ್ನು ಸಂಪರ್ಕಿಸಬೇಕು ಎಂದು ಜಾಗೃತಿ ಮೂಡಿಸಲಾಗಿದೆ.
ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ. ಪ್ರತಿ ಆರು ತಿಂಗಳಿಗೊಮ್ಮೆ ಜಾನುವಾರುಗಳಿಗೆ ರೈತರು ಲಸಿಕೆ ಹಾಕಿಸಬೇಕು. ರೈತರಲ್ಲಿ ಎಚ್ಚರ ಮುಖ್ಯ: ಜಾನುವಾರುಗಳಲ್ಲಿ ಚರ್ಮಗಂಟು ರೋಗ ಲಕ್ಷಣ ಕಂಡುಬಂದಲ್ಲಿ ತಕ್ಷಣ ಪಶು ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಕೊಡಿಸಬೇಕು. ಈಗಾಗಲೇ ಐದು ಸಾವಿರಕ್ಕೂಹೆಚ್ಚು ಎತ್ತು, ಆಕಳಲ್ಲಿ ರೋಗ ಪತ್ತೆಯಾಗಿದೆ. ಪಶು ಇಲಾಖೆಯಿಂದ ತಾಲೂಕಿನಾದ್ಯಂತ ಜಾಗೃತಿ ಮೂಡಿಸುವ ಜತೆ ಲಸಿಕೆ ಕಾರ್ಯಕ್ರಮ ನಡೆಯುತ್ತಿದೆ. ರೈತರು ಚಿಕಿತ್ಸೆ ಕೊಡಿಸಲು ಮುಂದಾಗಬೇಕು ಎಂದು ರೈತ ಮುಖಂಡ ಬೂದಯ್ಯಸ್ವಾಮಿ ಗಬ್ಬೂರು ವಿನಂತಿಸಿದ್ದಾರೆ.
ಎತ್ತು, ಆಕಳಲ್ಲಿ ಚರ್ಮಗಂಟು ರೋಗ ಪತ್ತೆಯಾಗಿದೆ. ಈಗಾಗಲೇ ಸಾವಿರಾರೂ ಜಾನುವಾರುಗಳಿಗೆ ಚಿಕಿತ್ಸೆ ನೀಡಲಾಗಿದೆ. ಲಸಿಕೆ ಕಾರ್ಯಕ್ರಮನಡೆದಿದ್ದು, ರೋಗ ಕಾಣಿಸಿಕೊಂಡಲ್ಲಿ ರೈತರು ಸೂಕ್ತ ಸಮಯದಲ್ಲಿ ಚಿಕಿತ್ಸೆ ಕೊಡಿಸಬೇಕು. – ಡಾ| ಬಿ.ಎಸ್. ಮಿರಾಸಾªರ, ಪ್ರಭಾರಿ ಸಹಾಯಕ ನಿರ್ದೇಶಕ, ಪಶು ಸಂಗೋಪನಾ ಇಲಾಖೆ
-ನಾಗರಾಜ ತೇಲ್ಕರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ
Udupi: ಅನುಮತಿಯಿಲ್ಲದೆ ಪೋಸ್ಟರ್ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್
Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ