ಕೋವಿಡ್ 19 ತಡೆಗೆ ಅಂತರ ರಾಮಬಾಣ


Team Udayavani, Mar 28, 2020, 1:39 PM IST

The best method of prevention of  COVID-19 is social distancing

ರಾಯಚೂರು: ಕೋವಿಡ್ 19 ಭೀತಿಯಿಂದ ಜನರನ್ನು ಮನೆಯಲ್ಲಿ ಇರುವಂತೆ ತಿಳಿಸಿದರೂ, ಜನ ಹೊರಗೆ ಬರುವುದನ್ನು ಬಿಡುತ್ತಿಲ್ಲ. ಇದರಿಂದ ಯಾವುದೇ ವಹಿವಾಟು ನಡೆದರೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅಧಿ ಕಾರಿಗಳು ತಿಳಿಸುತ್ತಿದ್ದಾರೆ.

ನಗರ ಸೇರಿ ವಿವಿಧ ಪಟ್ಟಣಗಳ ಮುಖ್ಯರಸ್ತೆಗಳಲ್ಲಿ ಕರ್ಫ್ಯೂ ವಾತಾವರಣ ಶುಕ್ರವಾರವೂ ಮುಂದುವರಿದಿದೆ. ಆದರೆ, ನಗರದ ಒಳ ಭಾಗದಲ್ಲಿ, ಹಳ್ಳಿಗಳಲ್ಲಿ ಮಾತ್ರ ಜನ ಗುಂಪು ಗೂಡುವುದು, ಹರಟೆ ಹೊಡೆಯುವಂತ ದೃಶ್ಯಗಳು ಕಂಡು ಬರುತ್ತಿವೆ. ಮೆಡಿಕಲ್‌, ಕಿರಾಣಿ, ಹಾಲು, ತರಕಾರಿ ಖರೀದಿಗೆ ಅವಕಾಶ ಮಾಡಿಕೊಡಲಾಗಿದೆ. ಆದರೆ, ಅಲ್ಲೆಲ್ಲ ಕಡ್ಡಾಯವಾಗಿ ಆರು ಅಡಿ ಅಂತರ ಕಾಯ್ದುಕೊಳ್ಳುವಂತೆ ತಿಳಿಸಲಾಗಿದೆ. ಡಿಸಿ ಕಚೇರಿ ಮುಂಭಾಗದಲ್ಲಿಯೇ ಈ ರೀತಿ ಗುರುತುಗಳನ್ನು ಮಾಡಲಾಗಿದೆ.

ನಗರಸಭೆಯಿಂದ ನಗರದ ಪ್ರಮುಖ ರಸ್ತೆಗಳಲ್ಲಿ ಔಷಧ ಸಿಂಪರಣೆ ಮಾಡಲಾಗುತ್ತಿದೆ. ಎರಡು ದಿನಗಳ ಹಿಂದೆ 15 ಯಂತ್ರಗಳ ಮೂಲಕ ಫಾಗಿಂಗ್‌ ಮಾಡಲಾಗಿತ್ತು. ಶುಕ್ರವಾರ ಅಗ್ನಿ ಶಾಮಕ ವಾಹನದಲ್ಲಿ ಔಷಧ ಸಂಗ್ರಹಿಸಿ ಪ್ರಮುಖ ರಸ್ತೆಗಳಲ್ಲಿ ಸಿಂಪಡಿಸಲಾಗಿದೆ. ನಿರ್ಗತಿಕರಿಗೆ ಊಟ ನೀಡುವವರ ಸಂಖ್ಯೆ ಹೆಚ್ಚಾಗುತ್ತಿದೆ. ಕಲಾ ಸಂಕುಲ ಸಂಸ್ಥೆ, ಅನ್ನ ವಾಹನ, ಬ್ರಾಹ್ಮಣ ಸಮಾಜ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು, ಹೋಟೆಲ್‌ ಮಾಲೀಕರು ತಮ್ಮ ಕೈಲಾದಷ್ಟು ಊಟ ತಯಾರಿಸಿ ಬಡವರು, ನಿರ್ಗತಿಕರು, ಆಸ್ಪತ್ರೆಗಳಿಗೆ ವಿತರಣೆ ಮಾಡುತ್ತಿದ್ದಾರೆ. ಅದರ ಜತೆಗೆ ಕರ್ತವ್ಯ ನಿರತ ಪೊಲೀಸರಿಗೂ ಊಟ ನೀಡಲಾಗುತ್ತಿದೆ.

ಇನ್ನೂ ಕೋವಿಡ್ 19 ಭೀತಿ ಸಂಬಂಧ ಜಿಪಂ ಸಭಾಂಗಣದಲ್ಲಿ ಹೋಟೆಲ್‌, ಪೆಟ್ರೋಲ್‌ ಬಂಕ್‌ ಸೇರಿದಂತೆ ಇನ್ನಿತರ ಮಾಲೀಕರ ಸಭೆ ನಡೆಸಿದ ಜಿಲ್ಲಾಧಿಕಾರಿ ಆರ್‌.ವೆಂಕಟೇಶ ಕುಮಾರ್‌, ಎಲ್ಲ ವರ್ತಕರು ಅಂಗಡಿ ಮುಂಗಟ್ಟುಗಳ ಮುಂದೆ ಸಾಮಾಜಿಕ ಅಂತರ ಕಾಯ್ದುಕೊಳ್ಳದಿದ್ದರೆ ಅಂಥವರ ವಿರುದ್ಧ ಕಠಿಣ ಕ್ರಮ ಜರುಗಿಸಿ ಎಂದು ಸೂಚಿಸಿದರು.

ಅಗತ್ಯ ವಸ್ತುಗಳನ್ನು ದುಬಾರಿ ಬೆಲೆಗೆ ಮಾರಿದರೆ ಪರವಾನಗಿ ರದ್ದು ಮಾಡಲಾಗುವುದು. ರೈಸ್‌ ಮಿಲ್‌ ಗಳು ಉತ್ಪಾದನೆ ನಿಲ್ಲಿಸಬಾರದು. ಆಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳಿಗೆ ಪಾಸ್‌ ನೀಡಲಾಗಿದೆ. ನಿತ್ಯ ಸಭೆ ನಡೆಯಲಿದ್ದು, ವ್ಯಾಪಾರಸ್ಥರು ತಮಗಾದ ಸಮಸ್ಯೆ ತಿಳಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weewq

BJP ಟಿಕೆಟ್ ಕೊಡದಿದ್ದರೆ ನನ್ನ ದಾರಿ ನೋಡಿಕೊಳ್ಳುವೆ: ಬಿ.ವಿ.ನಾಯಕ ಆಕ್ರೋಶ

1-wqewqe

BJP; ರಾಯಚೂರಿನಲ್ಲೂ ‘ಗೋ ಬ್ಯಾಕ್ ಅಮರೇಶ್ವರ ನಾಯಕ’ ಕೂಗು!

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

SSLC ಕನ್ನಡ ಪ್ರಶ್ನೆಪತ್ರಿಕೆ ಜಾಲತಾಣದಲ್ಲಿ ಸೋರಿಕೆ?

1-sadasdas

Raichur: ಬಾಲಕಿ ಮೇಲೆ ಹಂದಿ ಮಾರಣಾಂತಿಕ ದಾಳಿ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

Raichur; ಸೋನು ಗೌಡ ಕಾರಿಗೆ ಮುತ್ತಿಗೆ ಯತ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.