ಸಮಾಜ ಒಡೆಯಲು ಬಿಡಲ್ಲ: ನಂಜುಂಡಿ
Team Udayavani, Feb 25, 2019, 10:17 AM IST
ರಾಯಚೂರು: ಹಣದಾಸೆಗೆ ನಕಲಿ ನಾಯಕರನ್ನು ಕರೆಯಿಸಿ ಚಪ್ಪಾಳೆ ಗಿಟ್ಟಿಸಿಕೊಳ್ಳುವ ಕೃತ್ಯವನ್ನು ಸಮಾಜದ ನಾಯಕರು ಬಿಡಬೇಕು. ಸಮಾಜ ಇಬ್ಭಾಗ ಮಾಡುವ ಯಾವುದೇ ಶಕ್ತಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ. ನಂಜುಂಡಿ ಹೇಳಿದರು.
ನಗರದ ರಂಗಮಂದಿರದಲ್ಲಿ ರವಿವಾರ ನಡೆದ ವಿಶ್ವಕರ್ಮ ಬೃಹತ್ ಯುವ ಸಮಾವೇಶ ಹಾಗೂ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಯಾವ ಸಮಾಜ ರಾಜಕೀಯವಾಗಿ ಸಾಮರ್ಥ್ಯ ಹೊಂದುತ್ತದೆಯೋ ಅದು ಪ್ರಗತಿ ಸಾಧಿಸಲಿದೆ. ಆ ದಿಸೆಯಲ್ಲಿ ಎಲ್ಲರೂ ಒಟ್ಟಾಗಿ ಶ್ರಮಿಸಬೇಕು. ಆದರೆ, ಸಮಾಜದ ಹೆಸರಿನಲ್ಲಿ ವಂಚಿಸುವವರ ಬಗ್ಗೆ ಎಚ್ಚರ ಇರಲಿ. ಯಾವುದೋ ವ್ಯಕ್ತಿಗೆ ಪ್ರಶಸ್ತಿ ಪ್ರದಾನ ಮಾಡಲು ನನ್ನನ್ನು ಆಹ್ವಾನಿಸುವುದು ಯಾವ ನ್ಯಾಯ? ಯಾವುದೇ ಕಾರ್ಯಕ್ರಮ ಮಾಡಿದರೆ ಅದರಿಂದ ಸಮಾಜಕ್ಕೆ ಉಪಯೋಗ ಆಗಬೇಕು. ಆದರೆ, ಹಣ
ಮಾಡುವ ದುರುದ್ದೇಶ ಇರಕೂಡದು ಎಂದು ಟೀಕಿಸಿದರು.
ನಾನು ಸಮಾಜಕ್ಕಾಗಿ ಸ್ವಾರ್ಥವಿಲ್ಲದೆ ದುಡಿಯುತ್ತಿದ್ದೇನೆ. ಸರ್ಕಾರದ ಸೌಲಭ್ಯ ಕಲ್ಪಿಸಲು ಶ್ರಮಿಸುತ್ತಿದ್ದೇನೆ. ವಿಶ್ವಕರ್ಮ ಅಭಿವೃದ್ಧಿ ನಿಗಮ ಸ್ಥಾಪನೆಗಾಗಿ ನಿರಂತರ 18 ವರ್ಷ ಹೋರಾಡಲಾಯಿತು. ಅಂಥ ವೇಳೆ ಸಮಾಜ ವಿಘಟಿಸುವ ಶಕ್ತಿಗಳು ಎಲ್ಲಿದ್ದವು? ಎಂದು ಪ್ರಶ್ನಿಸಿದರು.
ಇರಕಲ್ನ ಬಸವಪ್ರಸಾದ ಶರಣರು, ಜವಳಗೇರಾದ ನಾಗಲಿಂಗಸ್ವಾಮಿ ಮಠದ ಶ್ರೀ ಸೂರ್ಯನಾರಾಯಣ ಸ್ವಾಮೀಜಿ, ಸುಲೇಪೇಟ್ನ ಸ್ವಾಮೀಜಿ, ಬಿಜೆಪಿ ಮುಖಂಡ ಎನ್.ಶಂಕರಪ್ಪ ವಕೀಲ ಮಾತನಾಡಿದರು. ವಿಶ್ವಕವ್ಯ ಮಹಾಸಭಾ ಜಿಲ್ಲಾಧ್ಯಕ್ಷ ಬ್ರಹ್ಮಗಣೇಶ, ಯುವ ಘಟಕದ ಜಿಲ್ಲಾಧ್ಯಕ್ಷ ರವೀಂದ್ರಕುಮಾರ, ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ ನಿರ್ದೇಶಕ ಎಂ.ಮಂಜುನಾಥ ಸೇರಿ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.
ಇಂದು ಸಮಾಜಕ್ಕೆ ಅಭಿವೃದ್ಧಿ ನಿಗಮ ಸ್ಥಾಪಿಸಿದರೂ ಕೇವಲ 5 ಕೋಟಿ ಅನುದಾನ ನೀಡಲಾಗಿದೆ. ರಾಜ್ಯದಲ್ಲಿ 45 ಲಕ್ಷ ವಿಶ್ವಕರ್ಮ ಸಮಾಜದವರಿದ್ದು, ಈ ಅನುದಾನ ಹೆಚ್ಚಿಸುವಂತೆ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಹೋರಾಟ ಮಾಡಬೇಕು.
ಕೆ.ಪಿ. ನಂಜುಂಡಿ,ಅಖೀಲ ಕರ್ನಾಟಕ ವಿಶ್ವಕರ್ಮ ಮಹಾಸಭಾರಾಜ್ಯಾಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Loksabha Election; ದೇಶದಲ್ಲಿ ಹಂತ-1: ಮತ ಇಂದು
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು