ಕೃಷಿ ಕ್ಷೇತ್ರದಲ್ಲಿ ಬಿತ್ತನೆ ಜಾಗೃತಿ ವಹಿಸಿ: ನಾಯಕ
Team Udayavani, Jun 4, 2022, 12:57 PM IST
ದೇವದುರ್ಗ: ಕೃಷಿಯಲ್ಲಿ ಸುಸ್ಥಿರತೆ ಕಾಪಾಡಿಕೊಳ್ಳಲು ಮಣ್ಣು ಪರೀಕ್ಷೆ ಅಗತ್ಯವಾಗಿದ್ದು, ಕೃಷಿ ಸಂಜೀವಿನಿ ಯೋಜನೆಯಿಂದ ಮಣ್ಣು ಪರೀಕ್ಷೆ ಸೇರಿದಂತೆ ರೈತರಿಗೆ ಅಗತ್ಯ ಸಲಹೆ, ಸೂಚನೆ ಲಭ್ಯವಾಗಲಿದೆ ಎಂದು ಶಾಸಕ ಕೆ.ಶಿವನಗೌಡ ನಾಯಕ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕೃಷಿ ಸಂಜೀವಿನಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು. ರೈತರು ಅಗತ್ಯವಾಗಿ ತಮ್ಮ-ತಮ್ಮ ಜಮೀನಿ ಮಣ್ಣಿನ ಪರೀಕ್ಷೆ ಮಾಡಿಸಬೇಕು. ಅಂದಾಗ ಮಾತ್ರ ಜಮೀನಿಗೆ ನೀಡಬೇಕಾದ ಪೋಷಕಾಂಶಗಳ ಬಗ್ಗೆ ಮಾಹಿತಿ ತಿಳಿಯಲಿದೆ. ಇದೀಗ ಕೃಷಿ ಸಂಜೀವಿನಿ ಯೋಜನೆಯಡಿ ಗ್ರಾಮೀಣ ಭಾಗಕ್ಕೆ ವಾಹನ ತೆರಳಿ ಮಣ್ಣಿನ ಮಾದರಿ ಸಂಗ್ರಹಿಸಿ ಪರೀಕ್ಷೆ ಮಾಡುವುದರಿಂದ ರೈತರಿಗೆ ಅನುಕೂಲವಾಗಲಿದೆ ಎಂದರು.
ಲ್ಯಾಬ್ ಟು ಲ್ಯಾಂಡ್ ಎಂಬ ಘೋಷ ವಾಕ್ಯದೊಂದಿಗೆ ಕೃಷಿ ಸಂಜೀವಿನಿ ಯೋಜನೆಯಡಿ ಮಣ್ಣಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆ ಮೂಲಕ ನಿಖರ ಮಾಹಿತಿ ತಿಳಿಯಲಿದೆ. ಇದರಿಂದ ಕೃಷಿ ಚಟುವಟಿಕೆ ಹಾಗೂ ಬೆಳೆಗಳ ನಿರ್ವಹಣೆ ಸುಲಭವಾಗಲಿದೆ. ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಯಿದಾಗಿದ್ದು, ರೈತರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಇನ್ನು ಸರಕಾರವೇ ಅಭಿವೃದ್ಧಿ ಪಡಿಸಿರುವ ಜಿಆರ್ಜಿ 811 ಎಂಬ ನೂತನ ತಳಿಯ ತೊಗರಿ ಬೀಜವನ್ನು ರೈತರಿಗೆ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಂಬಣ್ಣ ನೀಲಗಲ್, ಜಹೀರಪಾಷ್ ದೇವಿಂದ್ರಪ್ಪ, ನಾಗರಾಜ ಪಾಟೀಲ್, ಕೃಷಿ ಸಹಾಯಕ ನಿರ್ದೇಶಕ ಬಸವರಾಜ ಸಿದ್ದರೆಡ್ಡಿ, ಶ್ರೀನಿವಾಸ, ರಂಗಪ್ಪ ಬಂದೇನವಾಜ್, ರೇಖಾ, ಶಿವಲಿಂಗಯ್ಯ, ಕೃಷ್ಣ ಪಾಟೀಲ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
Protest: ಕುಡಿವ ನೀರಿಗಾಗಿ ಪಂಚಾಯಿತಿಗೆ ಮುಳ್ಳಿನ ಬೇಲಿ ಹಾಕಿ ಗ್ರಾಮಸ್ಥರಿಂದ ಪ್ರತಿಭಟನೆ
Raichur; ಮೋದಿ ರೋಡ್ ಶೋಗಳ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ: ಎನ್.ಎಸ್.ಭೋಸರಾಜು
ಸಿಂಧನೂರು: ನಗರಸಭೆ ಖಜಾನೆಗೆ ಝಣ ಝಣ ಕಾಂಚಾಣ!
MUST WATCH
ಹೊಸ ಸೇರ್ಪಡೆ
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ