ಧರ್ಮದಲ್ಲಿ ರಾಜಕೀಯ ಸಲ್ಲದು: ಸುಬುಧೇಂದ್ರ ಶ್ರೀ
Team Udayavani, Feb 27, 2023, 7:50 AM IST
ರಾಯಚೂರು: ರಾಜಕೀಯ ಕ್ಷೇತ್ರಕ್ಕೆ ಇಂಥವರೇ ಬರಬೇಕು ಎಂಬ ನಿಯಮವಿಲ್ಲ. ರಾಜಕೀಯದಲ್ಲಿ ಜನಪರ ಕಾಳಜಿ ಇರುವ ಧರ್ಮ ಬಂದರೆ ತಪ್ಪಿಲ್ಲ. ಆದರೆ ಧರ್ಮದಲ್ಲಿ ರಾಜಕೀಯ ಬರುವುದು ಸರಿಯಲ್ಲ ಎಂದು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರತೀರ್ಥರು ಅಭಿಪ್ರಾಯಪಟ್ಟರು.
ಮಂತ್ರಾಲಯದ ಶ್ರೀಮಠದಲ್ಲಿ ರವಿವಾರ ಸುದ್ದಿಗಾರರ ಜತೆ ಮಾತನಾಡಿ, ರಾಜಕೀಯಕ್ಕೆ ಇಂಥವರೇ ಬರಬೇಕು, ಇಂಥವರು ಬರಬಾರದು ಎಂಬುದಿಲ್ಲ. ರಾಜಕೀಯಕ್ಕೆ ಬರುವ ವ್ಯಕ್ತಿಗಳು ಜನರ ಕಾಳಜಿ ಹೊಂದಿರಬೇಕು ಎಂದು ಹೇಳಿದ ರು.
ಉತ್ತರ ಪ್ರದೇಶದಂತೆ ರಾಜ್ಯ ದಲ್ಲೂ ಬಿಜೆಪಿಯಿಂದ ಸಂತರಿಗೆ ಮುಖ್ಯಮಂತ್ರಿ ಸ್ಥಾನಮಾನ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಮುಖ್ಯವಾಗಿ ನಾನು ಮೊದಲಿನಿಂದಲೂ ಹೇಳುತ್ತಿರುವುದು ಏನೆಂದರೆ, ಎಲ್ಲರನ್ನು ಒಗ್ಗೂಡಿಸಿ ಕೊಂಡು ಹೋಗುವಂತಹ ವ್ಯಕ್ತಿಗಳು ರಾಜಕೀಯದಲ್ಲಿರಬೇಕು. ರಾಜಕೀಯದಲ್ಲಿ ಧರ್ಮವಿದ್ದರೆ ಉತ್ತಮ ಆಡಳಿತ, ಗುಣಮಟ್ಟದ ವ್ಯವಸ್ಥೆ ನೀಡಲು ಸಹಕಾರಿ ಎಂದರು.
ಮಂತ್ರಾಲಯದಲ್ಲಿ ರಾಯರ ವರ್ಧಂತ್ಯುತ್ಸವ ಸಂಭ್ರಮ
ರಾಯಚೂರು: ಮಂತ್ರಾಲಯದ ಶ್ರೀರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 428ನೇ ವರ್ಧಂತ್ಯುತ್ಸವ ರವಿವಾರ ಜರುಗಿತು. ಪಟ್ಟಾಭಿಷೇಕ ಮಹೋತ್ಸವ, ವರ್ಧಂತ್ಯುತ್ಸವ ಸೇರಿದಂತೆ ಆರು ದಿನಗಳ ಕಾಲ ಶ್ರೀರಾಘವೇಂದ್ರ ಗುರು ವೈಭವೋತ್ಸವ ಅದ್ದೂರಿಯಾಗಿ ಜರಗಿತು.
ವರ್ಧಂತ್ಯುತ್ಸವ ಪ್ರಯುಕ್ತ ತಿರುಪತಿ ಶ್ರೀ ವೆಂಕಟೇಶ್ವರ ದೇವರ ಶೇಷವಸ್ತ್ರಗಳನ್ನು ಪೀಠಾಧಿ ಪತಿ ಶ್ರೀ ಸುಬುಧೇಂದ್ರತೀರ್ಥರಿಗೆ ಹಸ್ತಾಂತರಿಸಲಾಯಿತು. ಬಳಿಕ ಶ್ರೀಗಳು ಶೇಷವಸ್ತ್ರಗಳನ್ನು ಶ್ರೀರಾಯರ ಮೂಲ ಬೃಂದಾವನಕ್ಕೆ ಸಮರ್ಪಿಸಿದರು. ಅನಂತರ ಶ್ರೀಗಳವರು ಶ್ರೀರಾಘವೇಂದ್ರ ಸ್ವಾಮಿಗಳ ಮೂಲ ಬೃಂದಾವನಕ್ಕೆ ಮಹಾ ಪಂಚಾಮೃತಾಭಿಷೇಕ ನೆರವೇರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ
Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?