ನ್ಯಾಯಕ್ಕಾಗಿ ಎಸ್ಟಿ ಮೀಸಲು ಹೋರಾಟ: ವಿರೂಪಾಕ್ಷಪ್ಪ


Team Udayavani, Jan 3, 2021, 5:38 PM IST

ನ್ಯಾಯಕ್ಕಾಗಿ ಎಸ್ಟಿ ಮೀಸಲು ಹೋರಾಟ: ವಿರೂಪಾಕ್ಷಪ್ಪ

ಸಿಂಧನೂರು: ಹಿಂದುಳಿದ ಸಮಾಜಕ್ಕೆ ಸೌಲಭ್ಯ ಕೇಳುವುದು ನಮ್ಮ ಹಕ್ಕು. ಎಂದೋ ಸಿಗಬೇಕಿದ್ದಎಸ್ಟಿ ಮೀಸಲು ಈವರೆಗೆ ಸಿಗದ ಹಿನ್ನೆಲೆಯಲ್ಲಿಆಗಿರುವ ಅನ್ಯಾಯ ಸರಿಪಡಿಸುವಂತೆಆಗ್ರಹಿಸಿ ಚಳವಳಿ ನಡೆಸಲಾಗುತ್ತಿದೆಎಂದು ಕುರುಬ ಸಮುದಾಯದ ಎಸ್ಟಿಮೀಸಲು ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಕೆ. ವಿರೂಪಾಕ್ಷಪ್ಪ ಹೇಳಿದರು.

ನಗರದಲ್ಲಿ ಜ. 4ರಂದು ನಡೆಯಲಿರುವಬೃಹತ್‌ ಸಮಾವೇಶದ ಸಿದ್ಧತೆ ವೀಕ್ಷಿಸಿದಬಳಿಕ ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರುಮಾತನಾಡಿದರು. ಕುರುಬ ಸಮುದಾಯ1976ರಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಬೇಕಿತ್ತು.ಇತರ ಎಲ್ಲ ಸಮುದಾಯ ಸೇರಿಸಿ ಕುರುಬರನ್ನು ಮಾತ್ರ ಕೈ ಬಿಡಲಾಯಿತು.ಕೊಡುಗು ಜಿಲ್ಲೆಯಲ್ಲಿ ಮಾತ್ರ ಸಮುದಾಯಕ್ಕೆ ಮೀಸಲು ನೀಡಿ, ಉಳಿದ ಜಿಲ್ಲೆಗಳ ಕುರುಬರನ್ನು ಕೈ ಬಿಡಲಾಯಿತು.

1868 ರಲ್ಲೇ ಬ್ರಿಟಿಷ್‌ ಸರಕಾರ ತಂದಿರುವ ಪುಸ್ತಕದಲ್ಲಿ ಕುರಬರ್‌ ಅಥವಾ ಕುರುಂಬರ್‌ ಅತ್ಯಂತ ಮೂಲ ನಿವಾಸಿ ಬುಡಕಟ್ಟು ಜನಾಂಗವೆಂದು ನಮೂದಿಸಲಾಗಿತ್ತು. 1891ರಲ್ಲಿ ಗಣತಿನಡೆಸಿದಾಗಲೂ ಕುರುಬರು ಮೂಲ ನಿವಾಸಿ, ಅರೆನಾಗರಿಕ ಬುಡಕಟ್ಟು ಜನರೆಂದು ಉಲ್ಲೇಖೀಸ ಲಾಗಿತ್ತು. ರಾಜ್ಯದಲ್ಲಿ ಕೊಡುಗಿಗೆ ಮಾತ್ರ ಸೀಮಿತವಾದ ಮೀಸಲನ್ನು 1976ರ ಕೇಂದ್ರ ಸರಕಾರದ ಆದೇಶದ ಪ್ರಕಾರ ಇಡೀ ರಾಜ್ಯಕ್ಕೆ ವಿಸ್ತರಿಸಬೇಕಿತ್ತು. ಇದಕ್ಕಾಗಿ ದೇವರಾಜು ಅರಸು ನೇತೃತ್ವದ ಸರಕಾರಕೇಂದ್ರ ಸರಕಾರಕ್ಕೆ ಪತ್ರ ಸಲ್ಲಿಸಿತ್ತು. ಕೊರಮ,ಭೋವಿ, ಲಮಾಣಿ, ಕೊರವ ಸಮಾಜಕ್ಕೆ ಸಿಗಬೇಕಿದ್ದ ಮೀಸಲನ್ನು ರಾಜ್ಯಕ್ಕೆ ವಿಸ್ತರಿಸುವಮಸೂದೆ ಅಂಗೀಕರವಾಯಿತು. ಕುರುಬ ಸಮುದಾಯದ 6 ಉಪ ಪಂಗಡಗಳಿಗೆ ಸಂಬಂಧಿಸಿ ಬಿಲ್‌ ತಿರಸ್ಕೃತವಾಯಿತು. ಆಯಾ ಸಂದರ್ಭದಲ್ಲಿ ಗಟ್ಟಿ ಪ್ರಯತ್ನಗಳಿಲ್ಲದಪರಿಣಾಮ ಕುರುಬ ಜನಾಂಗಕ್ಕೆ ಅನ್ಯಾಯವಾಗಿದ್ದು, ಇದೀಗ ಕೊಡಿಸುವುದಕ್ಕಾಗಿ ದಿಟ್ಟ ಹೆಜ್ಜೆ ಇಡಲಾಗಿದೆ ಎಂದರು.

ಜ.4ರಂದು ಈ ನಿಟ್ಟಿನಲ್ಲಿ ಎಸ್ಟಿಹೋರಾಟ ಸಮಿತಿಯ ಬೃಹತ್‌ ಸಮಾವೇಶನಡೆಯುತ್ತಿದ್ದು, ರಾಯಚೂರು, ಕೊಪ್ಪಳ,ಬಳ್ಳಾರಿ, ಯಾದಗಿರಿ ಜಿಲ್ಲೆಯಿಂದ ಜನಆಗಮಿಸಲಿದ್ದಾರೆ. 40-50 ಸಾವಿರ ಜಸೇರುವ ನಿರೀಕ್ಷೆಯಿದೆ. 25 ಸಾವಿರ ಆಸನದವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜಗದ್ಗುರುಗಳಾದನಿರಂಜನಾನಂದ ಪುರಿ ಸ್ವಾಮೀಜಿ,ಈಶ್ವಾರನಂದಪುರಿ ಸ್ವಾಮೀಜಿ, ಸಿದ್ದರಾಮನಂದ ಪುರಿಸ್ವಾಮೀಜಿ, ಶಿವನಾಂದಪುರಿ ಸ್ವಾಮೀಜಿ ಸೇರಿದಂತೆ ಹಾಲು ಮತ ಸಮಾಜದ ಎಲ್ಲ ರಾಜ್ಯಮಟ್ಟದ ಮುಖಂಡರು ಪಕ್ಷಾತೀತವಾಗಿ ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದರು.

ಪಿಎಲ್‌ಡಿಬಿ ಬ್ಯಾಂಕ್‌ ಅಧ್ಯಕ್ಷ, ಹಾಲುಮತಸಮಾಜದ ತಾಲೂಕು ಅಧ್ಯಕ್ಷ ಪೂಜಪ್ಪಪೂಜಾರಿ, ಪ್ರಧಾನ ಕಾರ್ಯದರ್ಶಿ ಶಂಬಣ್ಣಸುಕಾಲಪೇಟೆ, ಎಸ್ಟಿ ಹೋರಾಟ ಸಮಿತಿತಾಲೂಕು ಅಧ್ಯಕ್ಷ ಫಕೀರಪ್ಪ ಬಾಗೋಡಿ,ಕಾರ್ಯದರ್ಶಿ ಕೆ. ಚಿದಾನಂದ್‌,ವೆಂಕಣ್ಣ ತಿಪ್ಪನಹಟ್ಟಿ, ನಾಗರಾಜ ಬಾದರ್ಲಿ,ಸುರೇಶ್‌ ಸುಕಾಪೇಟೆ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಎಐಸಿಸಿ ಅಧ್ಯಕ್ಷ ಸ್ಥಾನ ಕಚೇರಿ ಕಸ ಗುಡಿಸುವ ಕಾಯಕವಷ್ಟೇ: ಛಲವಾದಿ ನಾರಾಯಣ ಸ್ವಾಮಿ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

Raichur; ಬಿಜೆಪಿ ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ನಾಮಪತ್ರ ಸಲ್ಲಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

CET ಗೊಂದಲ ಪರಿಹಾರಕ್ಕೆ ಎ. 27 ಗಡುವು: ಎಬಿವಿಪಿ

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.